ಅಪಘಾತ: ನಗರದಮೂವರು ವೈದ್ಯವಿದ್ಯಾರ್ಥಿಗಳ ಸಾವು
Team Udayavani, Sep 6, 2018, 10:38 AM IST
ದೇವನಹಳ್ಳಿ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ವೈದ್ಯ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟು ಮತ್ತೂಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಸಣ್ಣ ಮಾನಿಕೆರೆ ಗೇಟ್ನಲ್ಲಿ ಬುಧವಾರ ನಸುಕಿನಲ್ಲಿ ನಡೆದಿದೆ.
ಬೆಂಗಳೂರಿನ ಕಿಮ್ಸ್ ವೈದ್ಯಕೀಯ ಕಾಲೇಜಿನ ಎರಡನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ, ತುಮಕೂರಿನ ಪ್ರಜ್ವಲ್ (20),
ದೊಡ್ಡಬಳ್ಳಾಪುರದ ದೊಡ್ಡಬೆಳಮಂಗಲದ ವಿಶಾಲ್ ಚೌಧರಿ (20), ಜಿಗಣಿಯ ಭೂಷಣ್ (20) ಮೃತ ಯುವಕರು. ವೆಂಕಟಗಿರಿ ಕೋಟೆ ನಿವಾಸಿ ಕುಮಾರರಾಜು ಗಾಯಗೊಂಡಿದ್ದು, ಯಶವಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಲ್ವರು ಯುವಕರು ಬುಧವಾರ ಬೆಳಗಿನ ಜಾವ 1.50 ಸಮಯದಲ್ಲಿ ಬೆಂಗಳೂರಿನಿಂದ ಚಿಕ್ಕಬಳ್ಳಾಪುರದ ಕಡೆ
ಕಾರಿನಲ್ಲಿ ಹೋಗುತ್ತಿದ್ದರು. ದೇವನಹಳ್ಳಿ ತಾಲೂಕಿನ ಸಣ್ಣ ಮಾನಿಕೆರೆ ಗೇಟ್ ಬಳಿ ಲಾರಿಯನ್ನು ಹಿಂದಿಕ್ಕುವಾಗ ಕಾರಿನ ಮೇಲೆ ನಿಯಂತ್ರಣ ಕಳೆದುಕೊಂಡ ಚಾಲಕ, ಹಿಂದಿನಿಂದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್