ದಾಖಲಾತಿ ಒದಗಿಸಲು ಅಧೀನ ನ್ಯಾಯಾಲಯಕ್ಕೆಹೈಕೋರ್ಟ್ ನಿರ್ದೇಶನ
Team Udayavani, Sep 6, 2018, 11:21 AM IST
ಬೆಂಗಳೂರು: ಆರ್ಟಿಐ ಕಾರ್ಯಕರ್ತ ವಾಸುದೇವ ಅಡಿಗ ಕೊಲೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಒದಗಿಸುವಂತೆ ಅಧೀನ ನ್ಯಾಯಾಲಯಕ್ಕೆ ಹೈಕೋರ್ಟ್ ಬುಧವಾರ ನಿರ್ದೇಶನ ನೀಡಿದೆ. ಕೊಲೆ ಪ್ರಕರಣದ ಆರೋಪಿಗಳನ್ನು ಖುಲಾಸೆಗೊಳಿಸಿ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನೀಡಿದ ಆದೇಶ ಪ್ರಶ್ನಿಸಿ ಮೃತ ವಾಸುದೇವ ಅಡಿಗ ತಾಯಿ ಶೃಂಗೇಶ್ವರಿ ಅಡಿಗ ಹಾಗೂ ಪ್ರಕರಣದ ಪ್ರಾಸಿಕ್ಯೂಷನ್ ಸಲ್ಲಿಸಿದ ಮೇಲ್ಮನವಿಯನ್ನು ವಿಚಾರಣೆ ಅಂಗೀಕರಿಸಿದ ನ್ಯಾ. ರವಿಮಳಿಮಠ ಹಾಗೂ ನ್ಯಾ. ಜಾನ್ ಮೈಕೆಲ್ ಕುನ್ಹಾ ಅವರಿದ್ದ ವಿಭಾಗೀಯ ಪೀಠ, ಪ್ರಕರಣದ ವಿಚಾಣೆಯ ಎಲ್ಲ ದಾಖಲೆಗಳನ್ನು ಸಲ್ಲಿಸುವಂತೆ ಅಧೀನ ನ್ಯಾಯಾಲಯಕ್ಕೆ ಆದೇಶಿಸಿ ವಿಚಾರಣೆ ಮುಂದೂಡಿತು.
ಐದು ವರ್ಷಗಳ ಹಿಂದೆ ಆರ್ಟಿಐ ಕಾರ್ಯಕರ್ತ ವಾಸುದೇವ ಅಡಿಗ ಅವರ ಕೊಲೆ ನಡೆದಿತ್ತು. ಈ ಪ್ರಕರಣದಲ್ಲಿ ರಮೇಶ್ ಬಾಯರಿ, ಸುಬ್ರಹ್ಮಣ್ಯ ಉಡುಪ, ಉಮೇಶ್, ಸಿ. ನವೀನ್, ಕೆ.ಎಸ್. ರಾಘವೇಂದ್ರ, ಡಿ. ಮೋಹನ್ ಕುಮಾರ್, ಟಿ.ಸಿ. ರವಿಚಂದ್ರ ಹಾಗೂ ಎಸ್.ಕೆ. ವಿಜಯ ಸಾರಥಿ ಅವರನ್ನು ಖುಲಾಸೆಗೊಳಿಸಿ 2017ರ ಮೇ 11ರಂದು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ವಾಸುದೇವ ಅಡಿಗ ತಾಯಿ ಮತ್ತು ಪ್ರಾಸಿಕ್ಯೂಷನ್ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ವಾಸುದೇವ ಅಡಿಗ ಕೊಲೆಯಾಗುವ ಮುನ್ನ ಆರೋಪಿಗಳ ಜತೆ ಇರುವುದನ್ನು ಕೊನೆಯ ಬಾರಿ ನೋಡಿರುವ ಸಾಕ್ಷಿಗಳಿವೆ. ಕೊಲೆಯಾದ ವ್ಯಕ್ತಿಗೆ ಆರೋಪಿಗಳೇ ಕರೆ ಮಾಡಿ ಕರೆಸಿಕೊಂಡಿರುವುದು ಮೊಬೈಲ್ ಕರೆಗಳ ವರದಿಯಲ್ಲಿ ಸಾಬೀತಾಗಿದೆ.
ಆರೋಪಿಗಳೆಲ್ಲರೂ ಸಂಚು ರೂಪಿಸಿ ಕೊಲೆ ಮಾಡಿರುವುದಕ್ಕೆ ಸಾಕ್ಷಾಧಾರಗಳು ಲಭ್ಯವಿದ್ದರೂ, ಅಧೀನ ನ್ಯಾಯಾಲಯ ಅದ್ಯಾವುದನ್ನೂ ಪರಿಗಣಿಸಿಲ್ಲ ಎಂದು ಮೇಲ್ಮನವಿಯಲ್ಲಿ ದೂರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!
MUST WATCH
ಹೊಸ ಸೇರ್ಪಡೆ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ