ಪ್ರತಿ ಶಿಶುವಿಗೂ ಶ್ರವಣ ತಪಾಸಣೆ ಕಡ್ಡಾಯ


Team Udayavani, Sep 11, 2018, 12:29 PM IST

prati.jpg

ಬೆಂಗಳೂರು: ಕೇರಳ ಮಾದರಿಯಲ್ಲಿ ಪ್ರತಿ ನವಜಾತ ಶಿಶುವಿನ ಶ್ರವಣ ದೋಷ ತಪಾಸಣೆಯನ್ನು ರಾಜ್ಯದಲ್ಲೂ ಸಾರ್ವತ್ರಿಕ ಮತ್ತು ಕಡ್ಡಾಯಗೊಳಿಸಲಾಗುವುದು ಎಂದು ಆರೋಗ್ಯ ಇಲಾಖೆ ಆಯುಕ್ತ ಪಂಕಜ್‌ ಕುಮಾರ್‌ ಪಾಂಡೆ ತಿಳಿಸಿದ್ದಾರೆ.

ಆರೋಗ್ಯ ಇಲಾಖೆ, ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಬಾಲ ವಿಕಾಸ ಕಾರ್ಯಕ್ರಮದ ವತಿಯಿಂದ ಸೋಮವಾರ ವಿಕಾಸಸೌಧದಲ್ಲಿ ಹಮ್ಮಿಕೊಂಡಿದ್ದ ನವಜಾತ ಶಿಶುವಿನ ಶ್ರವಣ ದೋಷ ತಪಾಸಣಾ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮದಡಿ (ಎನ್‌ಪಿಪಿಸಿಡಿ) ರಾಜ್ಯದಲ್ಲಿ ನವಜಾತ ಶಿಶುಗಳ ಶ್ರವಣ ದೋಷ ತಪಾಸಣಾ ಕಾರ್ಯಕ್ರಮ ನಡೆಯುತ್ತಿದೆ. ಸದ್ಯ ಪೋಷಕರ ಕೋರಿಕೆ ಮೇರೆಗೆ ಅಥವಾ ಕೆಲವೊಂದು ವಿಶೇಷ ಪ್ರಕರಣಗಳಲ್ಲಿ ಮಾತ್ರ ಆಯ್ದ ಆಸ್ಪತ್ರೆಗಳಲ್ಲಿ ತಪಾಸಣಾ ಕಾರ್ಯ ಕೈಗೊಳ್ಳಲಾಗುತ್ತಿದೆ.

ಆದರೆ, ಹುಟ್ಟುವ ಮಕ್ಕಳಲ್ಲಿನ ಶ್ರವಣ ದೋಷವನ್ನು ಶೀಘ್ರ ಪತ್ತೆ ಹಚ್ಚಿ, ಸೂಕ್ತ ಚಿಕಿತ್ಸೆ ಕೊಡುವ ಮೂಲಕ ಶ್ರವಣ ದೋಷದ ಮೇಲೆ ನಿಯಂತ್ರಣ ಸಾಧಿಸಲು ಇನ್ನು ಮುಂದೆ ರಾಜ್ಯದಲ್ಲಿ ಹುಟ್ಟು ಪ್ರತಿಯೊಂದು ಮಗುವಿನ ಶ್ರವಣ ದೋಷ ತಪಾಸಣೆಯನ್ನು ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸಾರ್ವತ್ರಿಕ ಮತ್ತು ಕಡ್ಡಾಯಗೊಳಿಸಲಾಗುವುದು. ಈ ಕಾರ್ಯಕ್ರಮವನ್ನು ಪ್ರಸಕ್ತ ಆರ್ಥಿಕ ವರ್ಷದ ಕ್ರಿಯಾ ಯೋಜನೆಯಲ್ಲಿ ಸೇರಿಸಿಕೊಳ್ಳಲಾಗುವುದು ಎಂದರು.

ರಾಜ್ಯವೇ ಹಣ ಹೊಂದಿಸಲಿದೆ: ಶ್ರವಣ ದೋಷ ತಪಾಸಣೆ ಮತ್ತು ಅಗತ್ಯ ಶ್ರವಣ ಉಪಕರಣಗಳ ವಿತರಣೆಗೆ ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಪ್ರಸ್ತಾವನೆಗಳಿಗೆ ಕೇಂದ್ರ ಸರ್ಕಾರದ ಅನುಮೋದನೆ ಈವರೆಗೆ ಸಿಕ್ಕಿಲ್ಲ. ಆದರೆ, ಕಾರ್ಯಕ್ರಮಕ್ಕೆ ಹಣದ ಅಡಚಣೆಯಾಗಬಾರದು ಎಂದು ರಾಜ್ಯ ಸರ್ಕಾರವೇ ಹಣ ಹೊಂದಿಸಲಿದೆ.

ಈ ಕಾರ್ಯಕ್ರಮಕ್ಕೆ 5ರಿಂದ 10 ಕೋಟಿ ರೂ. ಬೇಕಾಗಬಹುದು. ರಾಜ್ಯ ಸರ್ಕಾರದ ಪಾಲು ಸೇರಿದಂತೆ ಇತರ ಕಾರ್ಯಕ್ರಮಗಳಲ್ಲಿ ಅನುದಾನವನ್ನು ಬಳಸಿಕೊಳ್ಳಲಾಗುವುದು ಎಂದು ಇದೇ ವೇಳೆ ಪಾಂಡೆ ತಿಳಿಸಿದರು. ಈ ವೇಳೆ ಶ್ರವಣ ದೋಷಕ್ಕೆ ಒಳಗಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಮಕ್ಕಳ ಪೋಷಕರು ತಮ್ಮ ಅನುಭವಗಳನ್ನು ಹಂಚಿಕೊಂಡರು.

ಕೇರಳದಲ್ಲಿ ನವಜಾತ ಶಿಶುವಿನ ಶ್ರವಣ ದೋಷದ ಸಾರ್ವತ್ರಿಕ ತಪಾಸಣೆ ಯೋಜನೆ ಬಗ್ಗೆ ಕೇರಳ ಸಾಮಾಜಿಕ ಭದ್ರತಾ ಅಭಿಯಾನದ ಕಾರ್ಯನಿರ್ವಾಕ ಅಧಿಕಾರಿ ಡಾ. ಮಹ್ಮದ್‌ ಅಶೀಲ್‌ ಪ್ರತ್ಯಾಕ್ಷಿಕೆ ನೀಡಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನದ ರಾಜ್ಯ ಯೋಜನಾ ನಿರ್ದೇಶಕ ರತನ್‌ ಕೇಲ್ಕರ್‌ ಇತರರಿದ್ದರು.

ಅವಮಾನಕ್ಕೆ ಹೆದರದಿರಿ – ಮಾಜಿ ವೇಗಿ ಬ್ರೆಟ್‌ ಲೀ: ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಜಾಗತಿಕ ಶ್ರವಣ ರಾಯಭಾರಿ, ಮಾಜಿ ಕ್ರಿಕೆಟಿಗ ಬ್ರೆಟ್‌ ಲೀ, ನವಜಾತ ಶಿಶುವಿನ ಶ್ರವಣ ದೋಷ ನಿವಾರಣೆಗೆ ಶೀಘ್ರ ಪತ್ತೆ ಹಾಗೂ ಸೂಕ್ತ ಚಿಕಿತ್ಸೆ ಅವಶ್ಯಕವಾಗಿದೆ.

ಶ್ರವಣ ದೋಷ ಎದುರಿಸುತ್ತಿರುವ ಮಕ್ಕಳ ಪೋಷಕರು ಸಮಾಜದಲ್ಲಿ ಎದುರಾಗುವ ಅವಮಾನ, ಮುಜುಗರವನ್ನು ಧೈರ್ಯದಿಂದ ಎದುರಿಸಬೇಕು. ಶ್ರವಣ ದೋಷ ಎದುರಿಸುತ್ತಿರುವ ಮಕ್ಕಳು ಮತ್ತು ಅವರ ಪೋಷಕರ ಬಗ್ಗೆ ಸಮಾಜ ಮಾನವೀಯ ದೃಷ್ಟಿಕೋನ ಹೊಂದಿರಬೇಕು. ಈ ದೋಷ ನಿವಾರಣೆಗೆ ಭಾರತ ಸರ್ಕಾರ ಸಾಕಷ್ಟು ಯೋಜನೆಗಳನ್ನು ಹಾಕಿಕೊಂಡಿದೆ. ಆದರೆ, ಸಾಗಬೇಕಾದ ಹಾದಿ ಇನ್ನೂ ಇದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.