ನಿಮ್ಮ ನಿರ್ಧಾರ ಪರಿಸರ ಸ್ನೇಹಿಯಾಗಿರಲಿ


Team Udayavani, Sep 11, 2018, 12:29 PM IST

nimma-nirdhara.jpg

ಬೆಂಗಳೂರು: ಗೌರಿ ಗಣೇಶ ಉತ್ಸವ ಆಚರಣೆಗೆ ಕ್ಷಣಗಣನೆ ಆರಂಭವಾಗಿದೆ. ನಾವು  ಬರಮಾಡಿಕೊಳ್ಳುವ ಗೌರಿ-ಗಣಪ ಪರಿಸರ ಸ್ನೇಹಿಯಾಗಿರಬೇಕು ಎಂಬ ಎಚ್ಚರಿಕೆ ವಹಿಸಲು ಇದು ಸಕಾಲ. ರಾಸಾಯನಿಕ ಬಣ್ಣ ಬಳಸಿದ ಅಪಾಯಕಾರಿ ಪಿಓಪಿ ಮೂರ್ತಿಗಳು ಪರಿಸರಕ್ಕೆ ಮಾರಕ ಎಂಬುದು ಈಗಾಗಲೇ ಸಾಬೀತಾಗಿರುವ ಹಿನ್ನೆಲೆಯಲ್ಲಿ ಪ್ರಜ್ಞಾಪೂರ್ವಕವಾಗಿ ಮಣ್ಣಿನ ಮೂರ್ತಿಗಳ ಮೂಲಕ ಗೌರಿ-ಗಣಪ ಹಬ್ಬ ಆಚರಣೆಗೆ ಕೈ ಜೋಡಿಸಬೇಕಿದೆ.

ಮಹಾನಗರ ಪಾಲಿಕೆಯೂ ಜಾಗೃತಿ ಜತೆಗೆ ಉಚಿತ ಗೌರಿ-ಗಣಪ ಮೂರ್ತಿಗಳ ವಿತರಣೆ ಮೂಲಕ ಪ್ರೇರಣೆ ನೀಡುತ್ತಿದೆ. ಇದಕ್ಕೆ ಕೆಲವು ಸಂಘ-ಸಂಸ್ಥೆಗಳು, ಸಿನಿಮಾ ನಟ-ನಟಿಯರು, ಜನಪ್ರತಿನಿಧಿಗಳು ಸಹ ಸಹಕಾರ ನೀಡುತ್ತಿದ್ದಾರೆ. ಹೀಗಾಗಿ, ಹೀದಿನ ತಪ್ಪು ಪುನರಾವರ್ತನೆಯಾಗದಂತೆ ವಿಷಕಾರಿ ಬಣ್ಣ ಬಳಿದ ಗಣೇಶ ಬೇಡ ಎಂಬ ದೃಢ ಸಂಕಲ್ಪ ತಳೆಯಬೇಕಿದೆ. ಅಷ್ಟೇ ಅಲ್ಲ, ಕೆರೆಗಳಿಗೆ ವಿಸರ್ಜಿಸಿ, ಕಲುಷಿತಗೊಳಿಸುವ ಬದಲು, ಮನೆಗಳಲ್ಲೇ ಬಕೆಟ್‌ಗಳಲ್ಲಿ ಗಣೇಶನ ವಿಸರ್ಜನೆ ಮಾಡಬೇಕು.

ಈ ನಿಟ್ಟಿನಲ್ಲಿ ಗಣೇಶನನ್ನು ಬರಮಾಡಿಕೊಳ್ಳಲು ತುದಿಗಾಲಲ್ಲಿ ನಿಂತಿರುವ ಮಕ್ಕಳು, ಯುವಕರು ಸೇರಿದಂತೆ ನಿರ್ಧಾರ ತೆಗೆದುಕೊಳ್ಳಬೇಕಿದೆ. ಹಾಗಿದ್ದರೆ, ಈ “ಪರಿಸರ ಸ್ನೇಹಿ’ ಗಣಪ ದೊರೆಯುವುದು ಎಲ್ಲಿ? ವಿಸರ್ಜನೆ ಮಾಡುವುದು ಹೇಗೆ? ಈ ಮಾದರಿ ಗಣೇಶನ ಖರೀದಿಗಾಗಿಯೇ ನಿರ್ದಿಷ್ಟ ಸಂಸ್ಥೆಗಳಿವೆಯೇ? ಎಂಬ ಹಲವು ಗೊಂದಲಗಳು ಜನರಲ್ಲಿವೆ. ಇದಕ್ಕಾಗಿ ಒಂದಿಷ್ಟು ಮಾಹಿತಿ ಇಲ್ಲಿದೆ.  

ಉಚಿತ ವಿತರಣೆ: ಈ ನಿಟ್ಟಿನಲ್ಲಿ ಸ್ವತಃ ಬಿಬಿಎಂಪಿ ಮುಂಚೂಣಿಯಲ್ಲಿದೆ. ಉಚಿತವಾಗಿ ಮಣ್ಣಿನ ಗಣೇಶನನ್ನು ವಿತರಿಸಲಾಗುತ್ತಿದ್ದು, ಭಾನುವಾರ ನಗರದ ವಿವಿಧೆಡೆ 150ಕ್ಕೂ ಅಧಿಕ ಗಣೇಶನ ವಿಗ್ರಹಗಳನ್ನು ಹಂಚಲಾಗಿದೆ. ಮಂಗಳವಾರ ಕೂಡ ಉಚಿತ ಮೂರ್ತಿಗಳ ವಿತರಣೆ ಪ್ರಕ್ರಿಯೆ ಮುಂದುವರಿಯಲಿದೆ ಎಂದು ಪಾಲಿಕೆ ನೌಕರರ ಕ್ಷೇಮಾಭಿವೃದ್ಧಿ ಸಂಘ ತಿಳಿಸಿದೆ. 

ಅದೇ ರೀತಿ, ಶಾಸಕರಾದ ರಾಮಲಿಂಗಾರೆಡ್ಡಿ ಮತ್ತು ಸೌಮ್ಯಾ ರೆಡ್ಡಿ, ಜೆ.ಪಿ. ನಗರದ ದುರ್ಗಾಪರಮೇಶ್ವರಿ ಆಟದ ಮೈದಾನದಲ್ಲಿ ಮಂಗಳವಾರ ಮೂರು ಸಾವಿರ ಪರಿಸರ ಸ್ನೇಹಿ ಗಣೇಶನ ವಿಗ್ರಹಗಳನ್ನು ವಿತರಿಸಲಿದ್ದಾರೆ. ಇದರೊಂದಿಗೆ ನಟ ಪ್ರಜ್ವಲ್‌ ದೇವರಾಜ್‌ ಸಂಜಯನಗರದ ರಾಧಾಕೃಷ್ಣ ಶಿಕ್ಷಣ ಸಂಸ್ಥೆ ಆವರಣದಲ್ಲಿ ಬೆಳಿಗ್ಗೆ 10ಕ್ಕೆ ಜಾಗೃತಿ ಅಭಿಯಾನ ಹಮ್ಮಿಕೊಂಡಿದ್ದಾರೆ. 

ಮಣ್ಣಿನ ಗಣಪತಿ ಖರೀದಿಸಿ; ಅದೃಷ್ಟ ಪರೀಕ್ಷಿಸಿ: ಸಮರ್ಪಣ ಟ್ರಸ್ಟ್‌ ಇನ್ನೂ ಒಂದು ಹೆಜ್ಜೆ ಮುಂದೆಹೋಗಿ, ಮಣ್ಣಿನ ಗಣಪತಿ ಪ್ರತಿಷ್ಠಾಪಿಸುವವರಿಗೆ ಬೆಳ್ಳಿನಾಣ್ಯ ಕೂಡ ನೀಡಲಿದೆ. ಇದಕ್ಕಾಗಿ ನೀವು ಮಾಡಬೇಕಾದ್ದಿಷ್ಟೇ- ಟ್ರಸ್ಟ್‌ನಿಂದ ಮಣ್ಣಿನ ಗಣಪತಿ ಖರೀದಿಸಿ, ಅದೃಷ್ಟ ಪರೀಕ್ಷೆಗೆ ನಿಲ್ಲಬೇಕು. 

ಹೌದು, ಪರಿಸರ ಸ್ನೇಹಿ ಗಣೇಶ ಉತ್ಸವವನ್ನು ಪ್ರೋತ್ಸಾಹಿಸಲು ಟ್ರಸ್ಟ್‌ ಈ ಐಡಿಯಾ ಮಾಡಿದೆ. ಇದಕ್ಕಾಗಿ ಹತ್ತು ಸಾವಿರ ಮಣ್ಣಿನ ಮೂರ್ತಿಗಳನ್ನು ತಯಾರು ಮಾಡಿದ್ದು, ಈ ಪೈಕಿ ಸುಮಾರು ಮೂರು ಸಾವಿರ ಗಣೇಶ ಮೂರ್ತಿಗಳಲ್ಲಿ ಬೆಳ್ಳಿ ನಾಣ್ಯಗಳನ್ನು ಇರಿಸಿದೆ. ಈ ಮೂರ್ತಿಗಳನ್ನು ಖರೀದಿಸಿ ಮನೆಗಳಲ್ಲಿಯೇ ವಿಸರ್ಜನೆಯಾಗುವಂತೆ ಮಾಡುವುದು ಟ್ರಸ್ಟ್‌ನ ಉದ್ದೇಶ. 

30 ನಿಮಿಷದಲ್ಲಿ ಕರಗುತ್ತೆ: ಸಂಪೂರ್ಣ ಮಣ್ಣು ಹಾಗೂ ಸಗಣಿಯಿಂದ ತಯಾರಾದ ಈ ಮೂರ್ತಿ 30 ನಿಮಿಷದಲ್ಲಿ ಕರಗುತ್ತದೆ. ಚಿಕ್ಕಮೂರ್ತಿಯಾಗಿರುವುದರಿಂದ ಬಕೆಟ್‌ನಲ್ಲೇ ವಿಸರ್ಜಿಸಬಹುದು. ಟ್ರಸ್ಟ್‌ನ ಕಚೇರಿ ರಾಜಾಜಿನಗರದ ಮೊದಲನೇ ಮುಖ್ಯ ರಸ್ತೆ ಸೇರಿದಂತೆ ಆಯ್ದ ಕಡೆ ಈ ಮೂರ್ತಿಗಳನ್ನು ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಈ ಬಾರಿ ಪರಿಸರ ಸ್ನೇಹಿ ಗಣಪನನ್ನು ಪರಿಸರ ಸ್ನೇಹಿ ವಾಹನದಲ್ಲಿಯೇ ಮನೆ ಮನೆಗೆ ತಲುಪಿಸಲಾಗುತ್ತಿದೆ. ಟ್ರಸ್ಟ್‌ ಬಳಿ ಅನೇಕರು ಈಗಾಗಲೇ ಮೂರ್ತಿಗಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಅವರಲ್ಲಿ ಹಿರಿಯರು, ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಮೂರ್ತಿ ತೆಗೆದುಕೊಂಡು ಹೋಗಲು ಸಾಧ್ಯವಾಗದಿದ್ದವರಿಗೆ ಖುದ್ದಾಗಿ ಮೂರ್ತಿಯನ್ನು ಮನೆಗೆ ತಲುಪಿಸಲಾಗುತ್ತಿದೆ. ಜತೆಗೆ ಶಾಲೆ ಕಾಲೇಜುಗಳಿಗೂ ತಲುಪಿಸಲಾಗುತ್ತಿದೆ. ಈ ವಿತರಣಾ ಕಾರ್ಯಕ್ಕೆ ಎಲೆಕ್ಟ್ರಿಕಲ್‌ ವಾಹನ ಬಳಸಲಾಗುತ್ತಿದೆ. 

ಮಾಲ್‌ಗ‌ಳಲ್ಲೂ ಮಣ್ಣಿನ ಗಣೇಶ: ಬಸವನಗುಡಿ, ಜಯನಗರ, ಜೆ.ಪಿ. ನಗರ, ಮಲ್ಲೇಶ್ವರ, ನ್ಯೂ ಬಿಇಎಲ್‌ ರಸ್ತೆ, ಗೋಕುಲ ಎಕ್ಸ್‌ಟೆನÒನ್‌, ಬನಶಂಕರಿ, ಬನ್ನೇರುಘಟ್ಟ ರಸ್ತೆಗಳಲ್ಲಿ, ಬಿಗ್‌ ಬಜಾರ್‌, ಮಾಲ್‌ಗ‌ಳಲ್ಲೂ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳು ದೊರೆಯುತ್ತವೆ. ಹಲವು ಸ್ವಯಂ ಸೇವಾ ಸಂಸ್ಥೆಗಳು “ಪರಿಸರ ಸ್ನೇಹಿ’ ಗಣಪನ ತಯಾರಿ ಹಾಗೂ ಮಾರಾಟದಲ್ಲಿ ತೊಡಗಿಸಿಕೊಂಡಿವೆ. 

ಪರಿಸರ ಸ್ನೇಹಿ ಬೀದಿ ಗಣಪ ಅಸಾಧ್ಯ?: ಪ್ರಮುಖ ಬೀದಿಗಳಲ್ಲಿ ಪರಿಸರ ಸ್ನೇಹಿ ಗಣಪನನ್ನು ಪ್ರತಿಷ್ಠಾಪಿಸಲು ತಾಂತ್ರಿಕ ಸಮಸ್ಯೆ ಇದೆ. ಮುಖ್ಯವಾಗಿ ಈ ಸಾರ್ವಜನಿಕ ಸ್ಥಳಗಳಲ್ಲಿ ಜನರನ್ನು ಆಕರ್ಷಿಸುವುದೇ ಪ್ರತಿಷ್ಠಾಪನೆಯ ಮುಖ್ಯ ಉದ್ದೇಶವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸಂಘ-ಸಂಸ್ಥೆಗಳು ಮುಂದಿಡುವ ಗಾತ್ರ, ವಿನ್ಯಾಸಗಳಂತೆ ಗಣಪನನ್ನು ಕೇವಲ ಮಣ್ಣಿನಲ್ಲಿ ತಯಾರಿಸಲು ಸಾಧ್ಯವೇ ಇಲ್ಲ. ಆದ್ದರಿಂದ ಬೀದಿಗಳಲ್ಲಿಡುವ ಗಣಪನ ಗಾತ್ರ ಚಿಕ್ಕದಾಗಬೇಕು ಅಥವಾ ಪ್ಲಾಸ್ಟರ್‌ ಆಫ್ ಪ್ಯಾರಿಸ್‌ ಗಣಪನನ್ನೇ ಪ್ರತಿಷ್ಠಾಪಿಸಬೇಕು. ಈ ನಿಟ್ಟಿನಲ್ಲಿ ಜನರ ಮನಃಪರಿವರ್ತನೆಯೊಂದೇ ನಮಗಿರುವ ಮಾರ್ಗ. ಈ ದಿಸೆಯಲ್ಲಿ ಪ್ರಯತ್ನ ನಡೆದಿದೆ. ಇದು ಸಾಧ್ಯವೂ ಆಗಲಿದೆ.

* ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.