ನಮಗಿನ್ನು ಆಗಸದಲ್ಲೇ ವಿಮಾನಕ್ಕೆ ತೈಲ ಪೂರೈಕೆ ಸಾಧ್ಯ


Team Udayavani, Sep 11, 2018, 12:29 PM IST

namaginnu.jpg

ಬೆಂಗಳೂರು: ದೇಶದ ಹಗುರ ಯುದ್ಧ ವಿಮಾನ ತೇಜಸ್‌ ಇದೇ ಮೊದಲ ಬಾರಿಗೆ ಹಾರಾಟದ ನಡುವೆಯೇ ಯಶಸ್ವಿಯಾಗಿ ಇಂಧನ ಪೂರೈಕೆ ಮಾಡಿಕೊಂಡಿದೆ. ಸೋಮವಾರ ಇಂಥ ಯಶಸ್ವಿ ಕಾರ್ಯಾಚರಣೆ ನಡೆಸಲಾಗಿದೆ. ಇದರಿಂದಾಗಿ ಇಂಥ ಸಾಧನೆ ಮಾಡುವ ಸಾಮರ್ಥ್ಯ ಇರುವ ಕೆಲವೇ ಕೆಲವು ದೇಶಗಳ ಸಾಲಿಗೆ ಭಾರತ ಸೇರಿದಂತಾಗಿದೆ.

ಈ ಸಾಹಸದ ಬಗ್ಗೆ ಹಿಂದುಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (ಎಚ್‌ಎಎಲ್‌) ಮಾಹಿತಿ ನೀಡಿದೆ. ಬೆಳಗ್ಗೆ 9.30ಕ್ಕೆ 20 ಸಾವಿರ ಅಡಿ ಎತ್ತರ ಪ್ರದೇಶದಲ್ಲಿ 1,900 ಕೆಜಿ ಇಂಧನವನ್ನು ಐಎಎಫ್ನ ಐಎಲ್‌78 ವಿಮಾನ, ತೇಜಸ್‌ ಎಲ್‌ಎಸ್‌ಪಿ 8 ವಿಮಾನಕ್ಕೆ ಯಶಸ್ವಿಯಾಗಿ ಪೂರೈಕೆ ಮಾಡಲಾಗಿದೆ. ಅದಕ್ಕಾಗಿ ಹಲವಾರು ಪರೀಕ್ಷಾ ದಿನಾಂಕಗಳನ್ನು ನಿಗದಿ ಮಾಡಲಾಗಿದ್ದರೂ, ಆ ಸಂದರ್ಭದಲ್ಲಿ ಪರೀಕ್ಷೆ ನಡೆಸಲು ಸಾಧ್ಯವಾಗಿರಲಿಲ್ಲ. 

ರಷ್ಯಾ ನಿರ್ಮಿತ ಐಎಲ್‌-78 ಎಂಕೆಐ ಟ್ಯಾಂಕರ್‌ ಬಳಕೆ ಮಾಡಿಕೊಂಡು ತೇಜಸ್‌ಗೆ ಇಂಧನ ಪೂರೈಕೆ ಮಾಡಲಾಗುತ್ತದೆಯೇ ಎಂಬುದನ್ನು ಕರಾರುವಾಕ್ಕಾಗಿ ಪರಿಶೀಲನೆ ನಡೆಸಿದ ಬಳಿಕವೇ ಈ ಸಾಧನೆ ಮಾಡಲಾಗಿದೆ. ಸೆ.4 ಮತ್ತು 6ರಂದು ಈ ಪರೀಕ್ಷೆ ನಡೆಸಲಾಗಿತ್ತು. 

ಐಎಎಫ್ನ ಐಎಲ್‌ 78 ವಿಮಾನವನ್ನು ಪೈಲಟ್‌ ವಿಂಗ್‌ ಕಮಾಂಡರ್‌ ಸಿದ್ಧಾರ್ಥ್ ಸಿಂಗ್‌ ಚಾಲನೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ವಿಮಾನ ಗಂಟೆಗೆ 270 ನಾಟ್‌ಗಳಷ್ಟು ವೇಗದಲ್ಲಿ ಹಾರಾಟ ನಡೆಸುತ್ತಿತ್ತು. ಎಚ್‌ಎಎಲ್‌ ಮತ್ತು ಏರೋನಾಟಿಕಲ್‌ ಡೆವಲಪ್‌ಮೆಂಟ್‌ ಏಜೆನ್ಸಿ (ಎಡಿಎ) ಐಎಎಫ್ ಐಎಲ್‌78ನ್ನು ವಿನ್ಯಾಸಗೊಳಿಸಿತ್ತು. ಗ್ವಾಲಿಯರ್‌ನಲ್ಲಿರುವ ನಿಯಂತ್ರಣ ಕೇಂದ್ರದಿಂದ ಆಗಸದಲ್ಲಿ ತೈಲ ಪೂರೈಕೆ ಮಾಡುವ ಪ್ರಕ್ರಿಯೆಯನ್ನು ಗಮನಿಸಲಾಗುತ್ತಿತ್ತು. 

ಇದೊಂದು ಐತಿಹಾಸಿಕ ಸಾಧನೆ ಮತ್ತು ಆಗಸದಲ್ಲಿಯೇ (ಏರ್‌ ಟು ಏರ್‌) ಇಂಧನ ತುಂಬಿಸುವ ಕಾರ್ಯಾಚರಣೆ ಯಶಸ್ವಿಯಾಗಿ ಮುಕ್ತಾಯವಾಗಿದೆ. ಸೇನಾ ವಿಮಾನಗಳಿಗೆ ಸಂಬಂಧಿಸಿದ ಈ ಕೆಲಸ ಮುಕ್ತಾಯವಾಗಿದೆ ಎಂದು ಹಿಂದುಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಆರ್‌.ಮಾಧವನ್‌ ಶ್ಲಾ ಸಿದ್ದಾರೆ. 

ಮೂರು ತಿಂಗಳ ಹಿಂದಷ್ಟೇ ಬಿಯಾಂಡ್‌ ವಿಷ್ಯುವಲ್‌ ರೇಂಜ್‌ ಮಿಸೈಲ್‌ ಅನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿತ್ತು. ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಇಂಥ ಸಾಧನೆ ಮಾಡಿದ್ದಕ್ಕೆ ಐಎಎಫ್ ಮತ್ತು ಎಚ್‌ಎಎಲ್‌ ಅನ್ನು ಅಭಿನಂಧಿಸಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಭಾರತೀಯ ವಾಯುಯಾನ ಸಂಸ್ಥೆ 40 ತೇಜಸ್‌ ಮಾರ್ಕ್‌-1 ವಿಮಾನಗಳನ್ನು 50 ಸಾವಿರ ಕೋಟಿ ರೂ. ವೆಚ್ಚದಲ್ಲಿ ಪೂರೈಕೆ ಮಾಡುವಂತೆ ಎಚ್‌ಎಎಲ್‌ಗೆ ಮನವಿ ಮಾಡಿತ್ತು ಐಎಎಫ್.

* 1,900 ಕೆಜಿ- ಇಂಧನ ಪ್ರಮಾಣ
* 20,000 ಅಡಿ- ನೆಲ ಮಟ್ಟದಿಂದ ಇಷ್ಟು ಎತ್ತರದಲ್ಲಿ ಹಾರಾಟ
* 9.30- ಇಂಧನ ಮರು ಪೂರೈಕೆ ನಡೆದ ಸಮಯ
* 270 ನಾಟ್ಸ್‌- ವಿಮಾನ ಹಾರಾಟ ನಡೆಸುತ್ತಿದ್ದ ವೇಗ
* 09- ಐಎಎಫ್ ಸದ್ಯ ಹೊಂದಿರುವ ತೇಜಸ್‌ ವಿಮಾನಗಳ ಸಂಖ್ಯೆ
* 83- ಐಎಎಫ್ ಖರೀದಿಸಲು ಉದ್ದೇಶಿಸಿರುವ ತೇಜಸ್‌ ವಿಮಾನ
* 50,000 ಕೋಟಿ ರೂ.- ಅದರ ವೆಚ್ಚ

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.