ನಮಗಿನ್ನು ಆಗಸದಲ್ಲೇ ವಿಮಾನಕ್ಕೆ ತೈಲ ಪೂರೈಕೆ ಸಾಧ್ಯ


Team Udayavani, Sep 11, 2018, 12:29 PM IST

namaginnu.jpg

ಬೆಂಗಳೂರು: ದೇಶದ ಹಗುರ ಯುದ್ಧ ವಿಮಾನ ತೇಜಸ್‌ ಇದೇ ಮೊದಲ ಬಾರಿಗೆ ಹಾರಾಟದ ನಡುವೆಯೇ ಯಶಸ್ವಿಯಾಗಿ ಇಂಧನ ಪೂರೈಕೆ ಮಾಡಿಕೊಂಡಿದೆ. ಸೋಮವಾರ ಇಂಥ ಯಶಸ್ವಿ ಕಾರ್ಯಾಚರಣೆ ನಡೆಸಲಾಗಿದೆ. ಇದರಿಂದಾಗಿ ಇಂಥ ಸಾಧನೆ ಮಾಡುವ ಸಾಮರ್ಥ್ಯ ಇರುವ ಕೆಲವೇ ಕೆಲವು ದೇಶಗಳ ಸಾಲಿಗೆ ಭಾರತ ಸೇರಿದಂತಾಗಿದೆ.

ಈ ಸಾಹಸದ ಬಗ್ಗೆ ಹಿಂದುಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (ಎಚ್‌ಎಎಲ್‌) ಮಾಹಿತಿ ನೀಡಿದೆ. ಬೆಳಗ್ಗೆ 9.30ಕ್ಕೆ 20 ಸಾವಿರ ಅಡಿ ಎತ್ತರ ಪ್ರದೇಶದಲ್ಲಿ 1,900 ಕೆಜಿ ಇಂಧನವನ್ನು ಐಎಎಫ್ನ ಐಎಲ್‌78 ವಿಮಾನ, ತೇಜಸ್‌ ಎಲ್‌ಎಸ್‌ಪಿ 8 ವಿಮಾನಕ್ಕೆ ಯಶಸ್ವಿಯಾಗಿ ಪೂರೈಕೆ ಮಾಡಲಾಗಿದೆ. ಅದಕ್ಕಾಗಿ ಹಲವಾರು ಪರೀಕ್ಷಾ ದಿನಾಂಕಗಳನ್ನು ನಿಗದಿ ಮಾಡಲಾಗಿದ್ದರೂ, ಆ ಸಂದರ್ಭದಲ್ಲಿ ಪರೀಕ್ಷೆ ನಡೆಸಲು ಸಾಧ್ಯವಾಗಿರಲಿಲ್ಲ. 

ರಷ್ಯಾ ನಿರ್ಮಿತ ಐಎಲ್‌-78 ಎಂಕೆಐ ಟ್ಯಾಂಕರ್‌ ಬಳಕೆ ಮಾಡಿಕೊಂಡು ತೇಜಸ್‌ಗೆ ಇಂಧನ ಪೂರೈಕೆ ಮಾಡಲಾಗುತ್ತದೆಯೇ ಎಂಬುದನ್ನು ಕರಾರುವಾಕ್ಕಾಗಿ ಪರಿಶೀಲನೆ ನಡೆಸಿದ ಬಳಿಕವೇ ಈ ಸಾಧನೆ ಮಾಡಲಾಗಿದೆ. ಸೆ.4 ಮತ್ತು 6ರಂದು ಈ ಪರೀಕ್ಷೆ ನಡೆಸಲಾಗಿತ್ತು. 

ಐಎಎಫ್ನ ಐಎಲ್‌ 78 ವಿಮಾನವನ್ನು ಪೈಲಟ್‌ ವಿಂಗ್‌ ಕಮಾಂಡರ್‌ ಸಿದ್ಧಾರ್ಥ್ ಸಿಂಗ್‌ ಚಾಲನೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ವಿಮಾನ ಗಂಟೆಗೆ 270 ನಾಟ್‌ಗಳಷ್ಟು ವೇಗದಲ್ಲಿ ಹಾರಾಟ ನಡೆಸುತ್ತಿತ್ತು. ಎಚ್‌ಎಎಲ್‌ ಮತ್ತು ಏರೋನಾಟಿಕಲ್‌ ಡೆವಲಪ್‌ಮೆಂಟ್‌ ಏಜೆನ್ಸಿ (ಎಡಿಎ) ಐಎಎಫ್ ಐಎಲ್‌78ನ್ನು ವಿನ್ಯಾಸಗೊಳಿಸಿತ್ತು. ಗ್ವಾಲಿಯರ್‌ನಲ್ಲಿರುವ ನಿಯಂತ್ರಣ ಕೇಂದ್ರದಿಂದ ಆಗಸದಲ್ಲಿ ತೈಲ ಪೂರೈಕೆ ಮಾಡುವ ಪ್ರಕ್ರಿಯೆಯನ್ನು ಗಮನಿಸಲಾಗುತ್ತಿತ್ತು. 

ಇದೊಂದು ಐತಿಹಾಸಿಕ ಸಾಧನೆ ಮತ್ತು ಆಗಸದಲ್ಲಿಯೇ (ಏರ್‌ ಟು ಏರ್‌) ಇಂಧನ ತುಂಬಿಸುವ ಕಾರ್ಯಾಚರಣೆ ಯಶಸ್ವಿಯಾಗಿ ಮುಕ್ತಾಯವಾಗಿದೆ. ಸೇನಾ ವಿಮಾನಗಳಿಗೆ ಸಂಬಂಧಿಸಿದ ಈ ಕೆಲಸ ಮುಕ್ತಾಯವಾಗಿದೆ ಎಂದು ಹಿಂದುಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಆರ್‌.ಮಾಧವನ್‌ ಶ್ಲಾ ಸಿದ್ದಾರೆ. 

ಮೂರು ತಿಂಗಳ ಹಿಂದಷ್ಟೇ ಬಿಯಾಂಡ್‌ ವಿಷ್ಯುವಲ್‌ ರೇಂಜ್‌ ಮಿಸೈಲ್‌ ಅನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿತ್ತು. ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಇಂಥ ಸಾಧನೆ ಮಾಡಿದ್ದಕ್ಕೆ ಐಎಎಫ್ ಮತ್ತು ಎಚ್‌ಎಎಲ್‌ ಅನ್ನು ಅಭಿನಂಧಿಸಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಭಾರತೀಯ ವಾಯುಯಾನ ಸಂಸ್ಥೆ 40 ತೇಜಸ್‌ ಮಾರ್ಕ್‌-1 ವಿಮಾನಗಳನ್ನು 50 ಸಾವಿರ ಕೋಟಿ ರೂ. ವೆಚ್ಚದಲ್ಲಿ ಪೂರೈಕೆ ಮಾಡುವಂತೆ ಎಚ್‌ಎಎಲ್‌ಗೆ ಮನವಿ ಮಾಡಿತ್ತು ಐಎಎಫ್.

* 1,900 ಕೆಜಿ- ಇಂಧನ ಪ್ರಮಾಣ
* 20,000 ಅಡಿ- ನೆಲ ಮಟ್ಟದಿಂದ ಇಷ್ಟು ಎತ್ತರದಲ್ಲಿ ಹಾರಾಟ
* 9.30- ಇಂಧನ ಮರು ಪೂರೈಕೆ ನಡೆದ ಸಮಯ
* 270 ನಾಟ್ಸ್‌- ವಿಮಾನ ಹಾರಾಟ ನಡೆಸುತ್ತಿದ್ದ ವೇಗ
* 09- ಐಎಎಫ್ ಸದ್ಯ ಹೊಂದಿರುವ ತೇಜಸ್‌ ವಿಮಾನಗಳ ಸಂಖ್ಯೆ
* 83- ಐಎಎಫ್ ಖರೀದಿಸಲು ಉದ್ದೇಶಿಸಿರುವ ತೇಜಸ್‌ ವಿಮಾನ
* 50,000 ಕೋಟಿ ರೂ.- ಅದರ ವೆಚ್ಚ

ಟಾಪ್ ನ್ಯೂಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14

UV Fusion: ಅವನೊಂದಿಗೆ ನಡೆವಾಸೆ

13-fusion

UV Fusion: ಏರಿಯಾ 51

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.