ಜಾಹೀರಾತು ಫಲಕ ತೆರವುಗೊಳಿಸದವರ ಪಟ್ಟಿ ಕೊಡಿ
Team Udayavani, Sep 12, 2018, 12:27 PM IST
ಬೆಂಗಳೂರು: ಜಾಹೀರಾತು ಫಲಕಗಳ ತೆರವಿಗೆ ನೋಟಿಸ್ ನೀಡಿದರೂ ತೆರವು ಮಾಡದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚಿಸಿದೆ.
ನಗರದಲ್ಲಿ ಅಳವಡಿಸಿರುವ ಅನಧಿಕೃತ ಫ್ಲೆಕ್ಸ್, ಜಾಹೀರಾತು ಫಲಕಗಳ ತೆರವಿಗೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮಂಗಳವಾರ ವಿಚಾರಣೆ ನಡೆಸಿದ ಮುಖ್ಯನ್ಯಾ. ದಿನೇಶ್ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಎಸ್.ಜಿ ಪಂಡಿತ್ ಅವರಿದ್ದ ವಿಭಾಗೀಯ ಪೀಠ, ಈ ಸೂಚನೆ ನೀಡಿದೆ.
ವಿಚಾರಣೆ ವೇಳೆ ಪಾಲಿಕೆ ಪರ ವಕೀಲರು, ನಗರದಲ್ಲಿ ಅನಧಿಕೃತ ಜಾಹೀರಾತು ಫಲಕಗಳ ತೆರವು ಕಾರ್ಯಾಚರಣೆ ಮುಂದುವರಿಸಿದ್ದು 3729 ಜಾಹೀರಾತು ಫಲಕಗಳನ್ನು ಗುರ್ತಿಸಲಾಗಿದ್ದು, 107 ಫಲಕಗಳನ್ನು ಮಾಲೀಕರೇ ಸ್ವಯಂಪ್ರೇರಿತವಾಗಿ ತೆರವುಗೊಳಿಸಿದ್ದಾರೆ. ಆದರೆ, 1987 ಫಲಕಗಳ ತೆರವಿಗೆ ನೋಟಿಸ್ ನೀಡಿದರೂ ಮಾಲೀಕರು ತೆರವುಗೊಳಿಸಿಲ್ಲ ಎಂದು ನ್ಯಾಯಪೀಠಕ್ಕೆ ಪ್ರಮಾಣಪತ್ರ ಸಲ್ಲಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಜಾಹೀರಾತು ಫಲಕ ತೆರವು ಮಾಡದವರ ವಿರುದ್ಧ ಕರ್ನಾಟಕ ತೆರೆದ ಪ್ರದೇಶ ಹಾಗೂ ವಿರೂಪಗೊಳಿಸುವ ನಿರ್ಬಂಧ ಕಾಯಿದೆ ಅನ್ವಯ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿ, ಅಲ್ಲದೆ, ಸಂಬಂಧ ಪಟ್ಟ ಮಾಲೀಕರ ವಿವರಗಳನ್ನು ಮುಂದಿನ ವಿಚಾರಣೆ ವೇಳೆ ಸಲ್ಲಿಸಿ ಎಂದು ಪಾಲಿಕೆಗೆ ನಿರ್ದೇಶಿಸಿತು.
ಜತೆಗೆ, ಬಿಬಿಎಂಪಿ ವ್ಯಾಪ್ತಿಗೆ ಅನ್ವಯವಾಗುವಂತೆ ಜಾಹೀರಾತು ನೀತಿ ಕುರಿತು ಸರ್ಕಾರದ ಕ್ರಮಗಳ ಬಗ್ಗೆ ವಸ್ತುಸ್ಥಿತಿ ವರದಿ ನೀಡುವಂತೆಯೂ ಸೂಚಿಸಿರುವ ನ್ಯಾಯಪೀಠ, ಸೆ.17ಕ್ಕೆ ವಿಚಾರಣೆ ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ