ಪಕ್ಷೇತರ ಸದಸ್ಯರ ಒಲಿಸಿಕೊಳ್ಳಲು ರಾಮಲಿಂಗಾರೆಡ್ಡಿ ಮಾತುಕತೆ
Team Udayavani, Sep 12, 2018, 12:28 PM IST
ಬೆಂಗಳೂರು: ಬಿಬಿಎಂಪಿಯಲ್ಲಿ ಮೇಯರ್ -ಉಪ ಮೇಯರ್ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಪಕ್ಷೇತರ ಸದಸ್ಯರನ್ನು ಬಿಜೆಪಿಯತ್ತ ಸೆಳೆಯಲು ಮಾಜಿ ಉಪ ಮುಖ್ಯಮಂತ್ರಿ ಆರ್.ಆಶೋಕ್ ಮಾತುಕತೆ ನಡೆಸಿದ ಬೆನ್ನಲ್ಲೇ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್ ಹಾಗೂ ಮಾಜಿ ಸಚಿವ ರಾಮಲಿಂಗಾರೆಡ್ಡಿ ಪಕ್ಷೇತರ ಪಾಲಿಕೆ ಸದಸ್ಯರ ಜತೆ ಖಾಸಗಿ ಹೊಟೇಲ್ನಲ್ಲಿ ಸಭೆ ನಡೆಸಿದರು.
ಜಯನಗರ ವಾರ್ಡ್ನ ಗಂಗಾಬಿಕೆಯನ್ನು ಮೇಯರ್ ಮಾಡಲು ರಾಮಲಿಂಗಾ ರೆಡ್ಡಿ ಪ್ರಯತ್ನ ನಡೆಸಿದ್ದು, ಈ ಬಾರಿಯೂ ತಮ್ಮ ಪಕ್ಷದ ಅಭ್ಯರ್ಥಿ ಪರವಾಗಿರುವಂತೆ ಪಕ್ಷೇತರ ಸದಸ್ಯರಿಗೆ ಮನವಿ ಮಾಡಿದರು.
ಕಳೆದ ಮೂರು ಅವಧಿಗೆ ಕಾಂಗ್ರೆಸ್ ಮೇಯರ್ ಆಯ್ಕೆಯಾಗಲು ಪಕ್ಷೇತರ ಸದಸ್ಯರು ಸಹಕಾರ ನೀಡಿದ್ದು, ಕಾಂಗ್ರೆಸ್ ಕೂಡ ಪಕ್ಷೇತರರ ಹಿತ ಕಾಯಲು ಬದ್ಧವಾಗಿದೆ. ಇದುವರೆಗೂ ಪಕ್ಷ ನಿಮ್ಮೊಂದಿಗೆ ಉತ್ತಮ ಸಂಬಂಧ ಇಟ್ಟುಕೊಂಡಿದೆ. ಈ ಬಾರಿಯೂ ಅದೇ ಮುಂದುವರೆಸಿಕೊಂಡು ಹೋಗಲು ಕಾಂಗ್ರೆಸ್ ಮೇಯರ್ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕೋರಿದರು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರೂ ಸಹ ಪಕ್ಷೇತರ ಸದಸ್ಯರಿಗೆ ಕಾಂಗ್ರೆಸ್ ಪರವಾಗಿರುವಂತೆ ಮನವಿ ಮಾಡಿದರು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ