ಶಿಕ್ಷಕರಿಂದ ಆಮರಣಾಂತ ಉಪವಾಸ
Team Udayavani, Sep 12, 2018, 12:28 PM IST
ಬೆಂಗಳೂರು: ವೇತನ ಅನುದಾನಕ್ಕೆ ಒಳಪಡಿಸುವಂತೆ ಆಗ್ರಹಿಸಿ 57 ದಿನಗಳಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಶಿಕ್ಷಕರು ಆಮರಣಾಂತ ಉಪವಾಸ ಕೈಗೊಂಡಿದ್ದಾರೆ.
ಅನುದಾನಕ್ಕೆ ಒಳಪಡಿಸುವ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಂಡಿದ್ದರೂ, ಆದೇಶ ಹೊರಬಿದ್ದಿಲ್ಲ. ಸರ್ಕಾರದಿಂದ ಲಿಖೀತ ಆದೇಶ ಬರುವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದ ಶಿಕ್ಷಕರು ಮಂಗಳವಾರದಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಶಿಕ್ಷಕರ 57ನೇ ದಿನದ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿರುವ ಮಹದಾಯಿ ಸೇನಾ ಸಮಿತಿ ಅಧ್ಯಕ್ಷ ವಿರೇಶ ಸೊಬರದಠ, ಕನ್ನಡ ಶಾಲೆ ಉಳಿಸಿ ಆಂದೋಲನದ ಅಧ್ಯಕ್ಷ ಅನಿಲ್ ಶೆಟ್ಟಿ ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಮಂಗಳವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಸರ್ಕಾರದಿಂದ ಲಿಖೀತ ಆದೇಶ ಬರುವ ವರೆಗೂ ಅಮರಣಾಂತ ಉಪವಾಸ ನಡೆಸಲಿದ್ದೇವೆ ಎಂದು ರಾಜ್ಯ ಅನುದಾನಕ್ಕೊಳಪಡಿಸುತ್ತಿರುವ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಒಕ್ಕೂಟದ ಅಧ್ಯಕ್ಷ ವರದರಾಜ ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ