ಸೆಪ್ಟೆಂಬರ್‌ನಲ್ಲಿ ಗರಿಷ್ಠ ಉಷ್ಣಾಂಶ


Team Udayavani, Sep 12, 2018, 12:28 PM IST

sep-ush.jpg

ಬೆಂಗಳೂರು: ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ದಾಖಲೆ ಮಳೆಗೆ ಸಾಕ್ಷಿಯಾಗಿದ್ದ ಬೆಂಗಳೂರು, ಬೇಸಿಗೆ ಕಾಲದ ಧಗೆಯನ್ನು ಅನುಭವಿಸುತ್ತಿದೆ! ಮಂಗಳವಾರ ನಗರದಲ್ಲಿ ಗರಿಷ್ಠ ತಾಪಮಾನ 31.2 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ 21.7 ಡಿಗ್ರಿ ಸೆಲ್ಸಿಯಸ್‌ ತಲುಪಿದೆ.

ಇದು ಸಾಮಾನ್ಯಕ್ಕಿಂತ ಕ್ರಮವಾಗಿ 3 ಮತ್ತು 2 ಡಿಗ್ರಿ ಅಧಿಕವಾಗಿದೆ. ಕಳೆದ 10 ದಿನಗಳ ಅಂತರದಲ್ಲಿ ಸತತ 2ನೇ ಬಾರಿ ಗರಿಷ್ಠ ತಾಪಮಾನ 30 ಡಿಗ್ರಿ ದಾಟಿದಂತಾಗಿದೆ. ಪರಿಣಾಮ ನಗರದ ನಾಗರಿಕರಿಗೆ ಮಳೆಗಾಲದಲ್ಲೂ ಬೇಸಿಗೆ ಅನುಭವ ಆಗುತ್ತಿದೆ. 2017ರ ಸೆಪ್ಟೆಂಬರ್‌ನಲ್ಲಿ 513.8 ಮಿ.ಮೀ. ಮಳೆಯಾಗಿತ್ತು. 

ಸೆಪ್ಟೆಂಬರ್‌ ಮುಂಗಾರು ಮಾರುತಗಳ ನಿರ್ಗಮನ ಕಾಲ. ಹಾಗಾಗಿ, ನಗರದಲ್ಲಿ ಸಾಮಾನ್ಯವಾಗಿ ಮಳೆ ಪ್ರಮಾಣ ಹೆಚ್ಚು. ಆದರೆ, ಈ ಬಾರಿ ಬಿಸಿಲಿನ ಧಗೆ ನಗರದ ನಾಗರಿಕರನ್ನು ಸುಸ್ತು ಮಾಡುತ್ತಿದೆ. ಇದಕ್ಕೆ ಕಾರಣ- ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಏರಿಕೆ ಆಗಿರುವುದು ಎನ್ನುತ್ತದೆ ಹವಾಮಾನ ಇಲಾಖೆ. 

ಮುಂಗಾರು ಮಂಕಾಗಿದೆ. ಈ ಮಧ್ಯೆ ಟ್ರಫ್ ಮತ್ತು ಚಂಡಮಾರುತಗಳ ಪರಿಚಲನೆಯಿಂದ ಮೋಡಕವಿದ ವಾತಾವರಣ ಇದೆ. ಇದು ವಾತಾವರಣದಲ್ಲಿನ ಬಿಸಿಯನ್ನು ಹೊರಹೋಗಲು ಬಿಡುವುದಿಲ್ಲ. ವಾಪಸ್‌ ವಾತಾವರಣಕ್ಕೇ ಕಳುಹಿಸುತ್ತದೆ.

ಹಾಗಾಗಿ, ಸಾಮಾನ್ಯಕ್ಕಿಂತ ಕೇವಲ 1 ಅಥವಾ 2 ಡಿಗ್ರಿ ತಾಪಮಾನ ಹೆಚ್ಚು-ಕಡಿಮೆಯಾದರೂ ಹೆಚ್ಚು ಧಗೆಯ ಅನುಭವ ಆಗುತ್ತದೆ. ಸೋಮವಾರ ಗರಿಷ್ಠ ತಾಪಮಾನ 31.1 ಡಿಗ್ರಿ ಇದ್ದರೆ, ಮಂಗಳವಾರ 31.2 ಡಿಗ್ರಿ ದಾಖಲಾಗಿದೆ ಎಂದು ಹೆಸರು ಹೇಳಲಿಚ್ಛಿಸದ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಮಳೆ ಬಿದ್ದು 10ರಿಂದ 12 ದಿನಗಳಾಗಿವೆ. ಮತ್ತೂಂದೆಡೆ ಬಂಗಾಳಕೊಲ್ಲಿ ಮತ್ತು ಅರಬ್ಬೀ ಸಮುದ್ರದಿಂದ ಯಾವುದೇ ಮೋಡವಾಗಲಿ ಅಥವಾ ತಂಪು ಗಾಳಿಯಾಗಲಿ ಬರುತ್ತಿಲ್ಲ. ಇದರಿಂದ ವಾತಾವರಣದಲ್ಲಿ ತೇವಾಂಶ ಇಲ್ಲದಂತಾಗಿದೆ. ಈ ಮಧ್ಯೆ ಹೊರಗಡೆಯಿಂದ ಕಿರಣಗಳ ಆಗಮನ ಆಗುತ್ತಿದೆ. ಆದರೆ, ಮೋಡಕವಿದ ವಾತಾವರಣದಿಂದ ನಿರ್ಗಮನ ಆಗುತ್ತಿಲ್ಲ. ಪರಿಣಾಮ ಬೇಸಿಗೆ ಅನುಭವ ಆಗುತ್ತಿದೆ ಎಂದು ಹವಾಮಾನ ತಜ್ಞ ಡಾ.ಎಂ.ಜೆ. ರಾಜೇಗೌಡ ತಿಳಿಸಿದ್ದಾರೆ. 

ಸೆ. 1ರಿಂದ 11ರವರೆಗೆ ನಗರದಲ್ಲಿ ದಾಖಲಾದ ತಾಪಮಾನ ಹೀಗಿದೆ (ಡಿಗ್ರಿ ಸೆಲ್ಸಿಯಸ್‌ನಲ್ಲಿ). 
ದಿನಾಂಕ    ಗರಿಷ್ಠ    ಕನಿಷ್ಠ 

1    28.3    20
2    28.2    20.3
3    29.3    19.7
4    29.8    19.7
5    29.9    20.4
6    29.2    19.9
7    29.2    20.3
8    29.1    20.1
9    29    20.5
10    31.1    21.6
11    31.2    21.7

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.