ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು: ಆಕ್ರೋಶ
Team Udayavani, Sep 12, 2018, 12:28 PM IST
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಪ್ರಾಯೋಜಿತ ಭಾರತ ಬಂದ್ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆಗೊಳಗಾಗಿರುವ ಬಿಜೆಪಿ ಕಾರ್ಯಕರ್ತರ ಮೇಲೆ ಕೊಲೆಯತ್ನ ಪ್ರಕರಣ ದಾಖಲಿಸಿರುವ ಉಡುಪಿ ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದೆ ಶೋಭಾ ಕರಂದ್ಲಾಜೆ, ಕೂಡಲೇ ಈ ಪ್ರಕರಣ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆಯಿಂದ ಗಾಯಗೊಂಡ ಬಿಜೆಪಿ ಕಾರ್ಯಕರ್ತರು ಆಸ್ಪತ್ರೆ ಸೇರಿದ್ದಾರೆ. ಆದರೆ, ಅಂತಹ 14 ಕಾರ್ಯಕರ್ತರ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಲಾಗಿದೆ.
ಬಂದ್ ಸಂದರ್ಭದಲ್ಲಿ ನಡೆದ ಗಲಾಟೆಗಳಿಗೆ ಕೊಲೆಯತ್ನ ಪ್ರಕರಣ ದಾಖಲಿಸಿರುವುದು ಇದೇ ಮೊದಲು. ರಾಜ್ಯದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಬಿಜೆಪಿ ವಿರುದ್ಧ ದ್ವೇಷದ ರಾಜಕಾರಣಕ್ಕೆ ಈ ತಂತ್ರ ಬಳಸಿದ್ದು, ಪ್ರಕರಣ ವಾಪಸ್ ಪಡೆಯಲೇಬೇಕು ಎಂದು ಒತ್ತಾಯಿಸಿದರು.
ಬಂದ್ ವೇಳೆ ಉಡುಪಿಯಲ್ಲಿ ಎಸ್ಪಿ ಕಚೇರಿ ಎದುರೇ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದು, ಸ್ವತ ಎಸ್ಪಿಯೇ ಮುಂದೆ ನಿಂತು ಲಾಠಿ ಪ್ರಹಾರ ನಡೆಸುವಂತಾಗಿತ್ತು. ಅದೇ ರೀತಿ ಬಾಳೆಹೊನ್ನೂರು, ಹುಬ್ಬಳ್ಳಿ, ಅಂಕೋಲಾ, ಬಂಟ್ವಾಳ ಮತ್ತಿತರೆಡೆ ಕಾಂಗ್ರೆಸ್ನವರು ದಾಂಧಲೆ ನಡೆಸಿದ್ದಾರೆ. ಅಂತಹವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬಂದ್ ವೇಳೆ ಪೊಲೀಸ್ ಅಧಿಕಾರಿಗಳು ಆಡಳಿತ ಪಕ್ಷಗಳ ಪರವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ ಅವರು, ಯಾವುದೇ ಪಕ್ಷದ ಸರ್ಕಾರವಿರಲಿ. ಅಧಿಕಾರಿಗಳು ಕೆಲಸ ಮಾಡಬೇಕು. ಹೀಗಾಗಿ ಅವರು ಕಾನೂನು ಪ್ರಕಾರ ಕೆಲಸ ಮಾಡಬೇಕೇ ಹೊರತು ಆಡಳಿತ ಪಕ್ಷಗಳ ಮೂಗಿನ ನೇರಕ್ಕೆ ಕೆಲಸ ಮಾಡಿ ಪ್ರತಿಪಕ್ಷಗಳ ವಿರುದ್ಧ ಕ್ರಮ ಕೈಗೊಳ್ಳಬಾರದು ಎಂದು ಸಲಹೆ ಮಾಡಿದರು.
ನಷ್ಟಕ್ಕೆ ಹೊಣೆ ಯಾರು: ಬಂದ್ನಿಂದಾಗಿ ಕೆಎಸ್ಆರ್ಟಿಸಿ ಸೇರಿದಂತೆ ಸಾರಿಗೆ ಸಂಸ್ಥೆಗಳಿಗೆ ಒಟ್ಟು 22 ಕೋಟಿ ರೂ. ನಷ್ಟವಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ. ಇದಕ್ಕೆ ಹೊಣೆ ಯಾರು ಎಂದು ಪ್ರಶ್ನಿಸಿದ ಶೋಭಾ ಕರಂದ್ಲಾಜೆ, ಬಲವಂತದಿಂದ ಬಸ್ ಏಕೆ ನಿಲ್ಲಿಸಲಾಯಿತು? ಸರ್ಕಾರ ಈ ನಷ್ಟದ ಹೊಣೆ ಹೊರುತ್ತದೆಯೇ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು