ಕಬ್ಬಿನ ಜೊಲ್ಲೆಯಲ್ಲಿ ಮೈದಳೆದ ಗಣಪ


Team Udayavani, Sep 12, 2018, 12:28 PM IST

kabbina.jpg

ಬೆಂಗಳೂರು: ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ದೃಷ್ಟಿಯಿಂದ ಈ ಬಾರಿ ಜೆಪಿ ನಗರದ ಪುಟ್ಟೇನಹಳ್ಳಿಯ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದ ಆಡಳಿತ ಮಂಡಳಿ, ಸುಮಾರು 30 ಅಡಿ ಎತ್ತರದ ಗಣಪನನ್ನು ಕಬ್ಬಿನ ಜೊಲ್ಲೆಯಿಂದ ನಿರ್ಮಿಸಿ ಹಲವರ ಪ್ರಶಂಸೆಗೆ ಪಾತ್ರವಾಗಿದೆ. 

ಪರಿಸರ ಉಳಿವಿನ ಜತೆಗೆ ಜಲ ಮಾಲಿನ್ಯದ ಬಗ್ಗೆಯೂ ಸಾರ್ವಜನಿಕರಿಗೆ ತಿಳಿವಳಿಕೆ ನೀಡುವ ದೃಷ್ಟಿಯಿಂದ ಕಬ್ಬಿನಿಂದ ಗಣಪತಿಯನ್ನು ವಿನ್ಯಾಸ ಮಾಡಲಾಗಿದೆ. ಸುಮಾರು 50 ಟನ್‌ ಕಬ್ಬನ್ನು ಗಣಪತಿ ನಿರ್ಮಿಸಲು ಬಳಕೆ ಮಾಡಿಕೊಳ್ಳಲಾಗಿದ್ದು, ಗಣಪನ ವಾಹನ ಮೂಷಕಕ್ಕೂ ಕಬ್ಬಿನ ಜೊಲ್ಲೆ ಬಳಸಲಾಗಿದೆ.

ಗಣಪನ ಅಲಂಕಾರಕ್ಕೆ ತಮಿಳುನಾಡಿನ ಕಬ್ಬುಗಳನ್ನು ಬಳಕೆ ಮಾಡಿಕೊಳ್ಳಲಾಗಿದ್ದು, ಉತ್ತರಪ್ರದೇಶ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ಸುಮಾರು 50 ಮಂದಿ ವೃತ್ತಿಪರ ಕಾರ್ಮಿಕರು ಒಂದೂವರೆ ತಿಂಗಳಿನಿಂದ ಗಣಪತಿ ವಿನ್ಯಾಸದಲ್ಲಿ ನಿರತರಾಗಿ¨ªಾರೆ ಎಂದು ದೇವಸ್ಥಾನದ ಟ್ರಸ್ಟಿ ರಾಮ್‌ ಮೋಹನ ರಾಜ್‌ ತಿಳಿಸಿದ್ದಾರೆ.

ಕಬ್ಬು ಭಕ್ತರಿಗೆ: ಗುರುವಾರ ಗಣಪತಿ ಪ್ರತಿಷ್ಠಾಪಿಸಲಾಗುತ್ತಿದ್ದು ,15 ದಿನ ಶ್ರೀಸತ್ಯ ಸಾಯಿ ಗಣಪತಿ ದೇವಸ್ಥಾನದ ಆವರಣದಲ್ಲಿ ಗಣಪನನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಗಣಪತಿ ದೇವಸ್ಥಾನದ ಒಳಾಂಗಣವನ್ನು ಕಬ್ಬಿನ ಜೊಲ್ಲೆ ಜತೆಗೆ ಬಿಲ್ವಪತ್ರೆ ಕಾಯಿ, ಹಾಗೂ ತೆಂಗಿನ ಕಾಯಿಗಳಿಂದ ಅಲಂಕೃತಗೊಳಿಸಲಾಗಿದ್ದು, ಸುಮಾರು 50 ಸಾವಿರ ಮಂದಿ ದೇವಸ್ಥಾನಕ್ಕೆ ಭೇಟಿ ನೀಡುವ ನಿರೀಕ್ಷೆ ಇದೆ. ಗಣಪತಿ ಹಬ್ಬ ಮುಗಿದ ತಕ್ಷಣ ಅಲಂಕಾರಿಕ ಕಬ್ಬುಗಳನ್ನು ಭಕ್ತರಿಗೆ ಹಂಚಲಾಗುವುದು ಎಂದು ರಾಮ್‌ಮೋಹನ ರಾಜ್‌ ಹೇಳಿದ್ದಾರೆ.

4 ಸಾವಿರ ಕೆ.ಜಿ. ಬೃಹತ್‌ಲಾಡು: ಇದೇ ವೇಳೆ ಗಣೇಶ ಚತುರ್ಥಿ ಅಂಗವಾಗಿ ಸಿದ್ಧಪಡಿಸಲಾಗಿರುವ 4 ಸಾವಿರ ಕೆ.ಜಿ. ತೂಕದ ಬೃಹದಾಕಾರದ ಲಾಡನ್ನು ಮಂಗಳವಾರ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದ ಆವರಣದಲ್ಲಿ ಸಾರ್ವಜನಿಕರ ವೀಕ್ಷಣೆಗೆ ಅನಾವರಣಗೊಳಿಸಲಾಯಿತು.

ಗೌರಿ -ಗಣೇಶ ಹಬ್ಬದ ವಿಶೇಷವಾಗಿ ದೇವಸ್ಥಾನದ ಆಡಳಿತ ಮಂಡಳಿ ಲಾಡನ್ನು ಸಿದ್ಧಪಡಿಸಿದ್ದು, ಭಕ್ತರಿಗೆ ಪ್ರಸಾದ ರೂಪದಲ್ಲಿ ವಿತರಿಸಲಾಗುವುದು. ಲಾಡು ತಯಾರಿಸಲು 1000 ಕೆ.ಜಿ. ಕಡಲೆ ಹಿಟ್ಟು, 2000 ಕೆ.ಜಿ. ಸಕ್ಕರೆ, 700 ಕೆ.ಜಿ. ಸನ್‌ ಪ್ಯೂರ್‌ಎಣ್ಣೆ, 300 ಕೆ.ಜಿ. ತುಪ್ಪ, 50 ಕೆ.ಜಿ. ಗೋಡಂಬಿ, 50 ಕೆ.ಜಿ. ಒಣ ದ್ರಾಕ್ಷಿ, 5 ಕೆ.ಜಿ. ಏಲಕ್ಕಿಯನ್ನು ಬಳಕೆ ಮಾಡಿಕೊಳ್ಳಲಾಗಿದೆ.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.