ಹಿಂದು ಧರ್ಮವೂ ಅಲ್ಲ, ಸಂಸ್ಕೃತಿಯೂ ಅಲ್ಲ


Team Udayavani, Sep 12, 2018, 12:28 PM IST

hindu.jpg

ಬೆಂಗಳೂರು: ಧರ್ಮ ಅನ್ನುವುದು ನಂಬಿಕೆ. ಭಾರತ ಅನುಯಾಯಿಗಳದ್ದು ಅಲ್ಲ, ಅನ್ವೇಷಕರ ನೆಲ. ಹಾಗಾಗಿ ಇಲ್ಲಿ ಕೋಟ್ಯಂತರ ದೇವರನ್ನು ಆರಾಧಿಸಲಾಗುತ್ತದೆ ಎಂದು ಈಶ ಪ್ರತಿಷ್ಠಾನದ ಸದ್ಗುರು ಜಗ್ಗಿ ವಾಸುದೇವ ತಿಳಿಸಿದರು. ಈಶ ಪ್ರತಿಷ್ಠಾನದ “ಯೂತ್‌ ಆ್ಯಂಡ್‌ ಟ್ರಾತ್‌’ ಅಭಿಯಾನದ ಅಂಗವಾಗಿ ಪ್ರಸ್‌ ಕ್ಲಬ್‌ ಆಫ್ ಬೆಂಗಳೂರು ವತಿಯಿಂದ ಮಂಗಳವಾರ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದರು. 

ಧರ್ಮ ಮತ್ತು ನಂಬಿಕೆ ವಿಚಾರದಲ್ಲಿ ಮನುಷ್ಯ ಯಾವತ್ತೂ ಅನ್ವೇಷಕ ಆಗಿರಬೇಕು. ಆ ಅನ್ವೇಷಣೆ ಮೂಲಕ ಆತ ತನ್ನದೇ ಆದ ಸತ್ಯ ಕಂಡುಕೊಳ್ಳಬೇಕು. ಸತ್ಯದ ಅನ್ವೇಷಣೆಗಾಗಿಯೇ ಭಾರತದಲ್ಲಿ ಕೋಟ್ಯಂತರ ದೇವರನ್ನು ಆರಾಧಿಸಲಾಗುತ್ತದೆ. ನಂಬಿಕೆ ಸಂಘಟಿತ ರೂಪ ಪಡೆದುಕೊಂಡರೆ, ಧರ್ಮವಾಗಿ ಪರಿವರ್ತನೆಗೊಳ್ಳುತ್ತದೆ. ಇದು ಸಂಖ್ಯಾಬಲದ ಪ್ರತಿಷ್ಠೆಯ ಹಂತಕ್ಕೆ ಬಂದಾಗ ರಾಜಕೀಯ ದಾಳವಾಗುತ್ತದೆ ಎಂದರು. 

ಹಿಂದುತ್ವ ಅನ್ನುವುದು ಭಾರತೀಯ ವ್ಯಾಖ್ಯಾನ ಅಲ್ಲ, ಅದೊಂದು ವಿದೇಶಿ ಪರಿಭಾಷೆ. ಹಿಂದು ಪದ ಹುಟ್ಟಿಕೊಂಡಿದ್ದು ಹಿಮಾಲಯ ಪರ್ವತ ಹಾಗೂ ಹಿಂದೂ ಮಹಾಸಾಗರದಿಂದ. ಇವೆರೆಡರ ನಡುವಿನ ಭೂಪ್ರದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬನೂ ಹಿಂದು. ವಾಸ್ತವದಲ್ಲಿ ಹಿಂದು ಎಂಬುದು ಧರ್ಮವೂ ಅಲ್ಲ, ಸಂಸ್ಕೃತಿಯೂ ಅಲ್ಲ. ಅದೊಂದು ಭೌಗೋಳಿಕ ಗುರುತು ಅಷ್ಟೇ ಎಂದರು.

ಯುವಕರ ಪ್ರಶ್ನೆಗೆ ಉತ್ತರ: ಯುವಕರ ಪ್ರಶ್ನೆಗಳಿಗೆ ಇಂದು ಉತ್ತರ ಸಿಗುತ್ತಿಲ್ಲ. ಹಾಗಾಗಿ ಅವರಲ್ಲಿ ಹತಾಶೆ, ಆಕ್ರೋಶ ಮನೆ ಮಾಡಿದೆ. ಶೇ.52 ಯುವಜನರನ್ನು ಹೊಂದಿರುವ ದೇಶ ನಮ್ಮದು. ಇವರನ್ನು ದೇಶದ ಆಸ್ತಿಯನ್ನಾಗಿ ಪರಿವರ್ತಿಸಿದರೆ ಪವಾಡ ಸೃಷ್ಟಿಸಬಹುದು. ತಮ್ಮ ಪ್ರಶ್ನೆಗಳಿಗೆ ಧರ್ಮ, ರಾಜಕೀಯ ವ್ಯಕ್ತಿಗಳು, ಶಿಕ್ಷಕರು, ಧರ್ಮ ಗುರುಗಳು ಉತ್ತರ ಕೊಡುತ್ತಿಲ್ಲ ಎಂಬ ಭಾವನೆ ಯುವಕರಲ್ಲಿದೆ. ಇದನ್ನು ಹೊಗಲಾಡಿಸಲು ಅವರ ಚಿಂತನೆಗಳಲ್ಲಿ ಸ್ಪಷ್ಟತೆ ಹಾಗೂ ಸಮತೋಲನ ತರಲು ಅಭಿಯಾನ ಆರಂಭಿಸಲಾಗಿದೆ. ಇದರಲ್ಲಿ ಯುವಕರ ಎಲ್ಲ ಪ್ರಶ್ನೆಗಳಿಗೂ ಉತ್ತರಿಸಲಾಗುವುದು ಎಂದರು.

“ಗುಂಪು ಥಳಿತ’ಕ್ಕೆ ಧರ್ಮ ಬೆರೆಸುವುದು ಸರಿಯಲ್ಲ: “ಗುಂಪು ಥಳಿತ’ ಪ್ರಕರಣಗಳಿಗೆ (ಲಿಂಚಿಂಗ್‌) ಧರ್ಮದ ಉನ್ಮಾದ ಕಾರಣ ಅನ್ನುವುದು ಸರಿಯಲ್ಲ. ಅಭದ್ರತೆ, ಆತಂಕ , ಆವಿಶ್ವಾಸ ಮತ್ತು ಹತಾಶೆ ಇದಕ್ಕೆ ಕಾರಣವಾಗಿದೆ. ಗೋವನ್ನುಧರ್ಮದ ಆಧಾರದಲ್ಲಿ ನೋಡುವುದಕ್ಕಿಂತ ಬದುಕು ಮತ್ತು ಆರ್ಥಿಕತೆಯ ದೃಷ್ಟಿಯಿಂದ ನೋಡಲಾಗುತ್ತದೆ. ಗೋವು ಕಳ್ಳರಿಂದ ತನ್ನ ಬದುಕು ಮತ್ತು ಆರ್ಥಿಕತೆ ಕಳೆದು ಹೋಗುತ್ತದೆ ಎಂಬ ಅಭದ್ರತೆ ಕಾಡುತ್ತದೆ.

ಒಂದು ಮಗು ಅಥವಾ ಗೋವು ಕಳೆದುಕೊಂಡವನು ಈಗಿನ ನ್ಯಾಯಾಂಗ ವ್ಯವಸ್ಥೆಯಲ್ಲಿ ತ್ವರಿತ ನ್ಯಾಯ ಪಡೆದುಕೊಳ್ಳಲು ಸಾಧ್ಯವೇ?. ಈ ಎಲ್ಲ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ಈ ಘಟನೆಗಳು ವಿಮರ್ಶಿಸಬೇಕಾಗಿದೆ. ಹಾಗಂತ ನಾನು ಲಿಂಚಿಂಗ್‌ ಸಮರ್ಥಿಸುವುದಿಲ್ಲ. ಇವುಗಳನ್ನು ತಡೆಗಟ್ಟಲು ನಮ್ಮಲ್ಲಿನ ಕಾನೂನು ವ್ಯವಸ್ಥೆ ದುರ್ಬಲ ಆಗಿರುವುದೂ ಸಹ ಸಮಸ್ಯೆ ಉಲ್ಬಣಕ್ಕೆ ಕಾರಣವಾಗಿದೆ ಎಂದು ಸದ್ಗುರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 

ಸಲಿಂಗಕಾಮ ದೈಹಿಕ, ಸಾಮಾಜಿಕ ವಿದ್ಯಮಾನ: ದೇಶಕ್ಕೆ ಸಂವಿಧಾನವೇ ಗ್ರಂಥ. ಸಾರ್ವತ್ರಿಕ ಮತ್ತು ಸಾರ್ವಜನಿಕ ಬದುಕಿನಲ್ಲಿ ಈ ಗ್ರಂಥದ ಪ್ರಕಾರವೇ ನಡೆದುಕೊಳ್ಳಬೇಕು. ಧಾರ್ಮಿಕ ಗ್ರಂಥಗಳನ್ನು ತಮ್ಮ ವೈಯುಕ್ತಿಕ ಪಾಂಡಿತ್ಯ ಹೆಚ್ಚಿಸಿಕೊಳ್ಳಲು, ಆ ಮೂಲಕ ಜೀವನದಲ್ಲಿ ಅಧ್ಯಾತ್ಮಿಕತೆ ಪಡೆದುಕೊಳ್ಳಲು ಮನೆಗಳಲ್ಲೇ ಅಧ್ಯಯನ ಮಾಡಬೇಕು.

ತಾನು ಓದುವ ಧರ್ಮ ಗ್ರಂಥ ಇನ್ನೊಬ್ಬರೂ ಓದಬೇಕು ಅದರಂತೆ ನಡೆದುಕೊಳ್ಳಬೇಕು ಎಂದು ವಾದಿಸುವುದು ಸರಿಯಲ್ಲ. ಸಲಿಂಗಕಾಮ ದೈಹಿಕ ವಿದ್ಯಮಾನ ಹೌದು. ಆದರೆ, ಸಾಮಾಜಿಕ ವಿದ್ಯಮಾನ ಅನ್ನುವುದನ್ನೂ ಅಲ್ಲಗಳೆಯುವಂತಿಲ್ಲ. ಚುನಾವಣೆಗಳು 3 ತಿಂಗಳು ಇರುವರೆಗೆ ಯಾರೂ ಚುನಾವಣೆಗಳ ಬಗ್ಗೆ ಮಾತನಾಡದಂತಹ ವ್ಯವಸ್ಥೆ ಜಾರಿಗೆ ತರಬೇಕು ಎಂದು ಸಂವಾದದಲ್ಲಿ ಸದ್ಗುರು ಪ್ರಶ್ನೆಗಳಿಗೆ ಉತ್ತರಿಸಿದರು. 

ತನ್ನ ಕುಟುಂಬಕ್ಕಿಂತ ತನ್ನ ರಾಜ್ಯದ ಜನರ ಕ್ಷೇಮ ಮತ್ತು ಕಲ್ಯಾಣ ಮುಖ್ಯ ಎಂದು ತಿಳಿದು ಅದಕ್ಕಾಗಿ ತನ್ನ ಸರ್ವಸ್ವವನ್ನೂ ತ್ಯಾಗ ಮಾಡಿದ ರಾಜನೊಬ್ಬನ ಉದಾತ್ತ ಮಾದರಿಯನ್ನು ರಾಮನ ಬದುಕಿನಲ್ಲಿ ನಾವು ಕಾಣಬಹುದು. ದೇವರು ಎಂಬ ಕಾರಣಕ್ಕೆ ಅಲ್ಲ, ಮಾನವೀಯತೆಯನ್ನೂ ಮೀರಿದ ಗುಣಗಳಿಗಾಗಿ ರಾಮನನ್ನು ಆರಾಧಿಸಲಾಗುತ್ತದೆ. ಸ್ವಾರ್ಥ ಬಿಟ್ಟು ಜನರ ಕ್ಷೇಮ ಬಯಸುವ ರಾಜಕೀಯ ನಾಯಕರು ಇಂದು ನಮಗೆ ಬೇಕಾಗಿದ್ದಾರೆ.
-ಸದ್ಗುರು ಜಗ್ಗಿ ವಾಸುದೇವ

ಟಾಪ್ ನ್ಯೂಸ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.