ಹಿಂದು ಧರ್ಮವೂ ಅಲ್ಲ, ಸಂಸ್ಕೃತಿಯೂ ಅಲ್ಲ


Team Udayavani, Sep 12, 2018, 12:28 PM IST

hindu.jpg

ಬೆಂಗಳೂರು: ಧರ್ಮ ಅನ್ನುವುದು ನಂಬಿಕೆ. ಭಾರತ ಅನುಯಾಯಿಗಳದ್ದು ಅಲ್ಲ, ಅನ್ವೇಷಕರ ನೆಲ. ಹಾಗಾಗಿ ಇಲ್ಲಿ ಕೋಟ್ಯಂತರ ದೇವರನ್ನು ಆರಾಧಿಸಲಾಗುತ್ತದೆ ಎಂದು ಈಶ ಪ್ರತಿಷ್ಠಾನದ ಸದ್ಗುರು ಜಗ್ಗಿ ವಾಸುದೇವ ತಿಳಿಸಿದರು. ಈಶ ಪ್ರತಿಷ್ಠಾನದ “ಯೂತ್‌ ಆ್ಯಂಡ್‌ ಟ್ರಾತ್‌’ ಅಭಿಯಾನದ ಅಂಗವಾಗಿ ಪ್ರಸ್‌ ಕ್ಲಬ್‌ ಆಫ್ ಬೆಂಗಳೂರು ವತಿಯಿಂದ ಮಂಗಳವಾರ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದರು. 

ಧರ್ಮ ಮತ್ತು ನಂಬಿಕೆ ವಿಚಾರದಲ್ಲಿ ಮನುಷ್ಯ ಯಾವತ್ತೂ ಅನ್ವೇಷಕ ಆಗಿರಬೇಕು. ಆ ಅನ್ವೇಷಣೆ ಮೂಲಕ ಆತ ತನ್ನದೇ ಆದ ಸತ್ಯ ಕಂಡುಕೊಳ್ಳಬೇಕು. ಸತ್ಯದ ಅನ್ವೇಷಣೆಗಾಗಿಯೇ ಭಾರತದಲ್ಲಿ ಕೋಟ್ಯಂತರ ದೇವರನ್ನು ಆರಾಧಿಸಲಾಗುತ್ತದೆ. ನಂಬಿಕೆ ಸಂಘಟಿತ ರೂಪ ಪಡೆದುಕೊಂಡರೆ, ಧರ್ಮವಾಗಿ ಪರಿವರ್ತನೆಗೊಳ್ಳುತ್ತದೆ. ಇದು ಸಂಖ್ಯಾಬಲದ ಪ್ರತಿಷ್ಠೆಯ ಹಂತಕ್ಕೆ ಬಂದಾಗ ರಾಜಕೀಯ ದಾಳವಾಗುತ್ತದೆ ಎಂದರು. 

ಹಿಂದುತ್ವ ಅನ್ನುವುದು ಭಾರತೀಯ ವ್ಯಾಖ್ಯಾನ ಅಲ್ಲ, ಅದೊಂದು ವಿದೇಶಿ ಪರಿಭಾಷೆ. ಹಿಂದು ಪದ ಹುಟ್ಟಿಕೊಂಡಿದ್ದು ಹಿಮಾಲಯ ಪರ್ವತ ಹಾಗೂ ಹಿಂದೂ ಮಹಾಸಾಗರದಿಂದ. ಇವೆರೆಡರ ನಡುವಿನ ಭೂಪ್ರದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬನೂ ಹಿಂದು. ವಾಸ್ತವದಲ್ಲಿ ಹಿಂದು ಎಂಬುದು ಧರ್ಮವೂ ಅಲ್ಲ, ಸಂಸ್ಕೃತಿಯೂ ಅಲ್ಲ. ಅದೊಂದು ಭೌಗೋಳಿಕ ಗುರುತು ಅಷ್ಟೇ ಎಂದರು.

ಯುವಕರ ಪ್ರಶ್ನೆಗೆ ಉತ್ತರ: ಯುವಕರ ಪ್ರಶ್ನೆಗಳಿಗೆ ಇಂದು ಉತ್ತರ ಸಿಗುತ್ತಿಲ್ಲ. ಹಾಗಾಗಿ ಅವರಲ್ಲಿ ಹತಾಶೆ, ಆಕ್ರೋಶ ಮನೆ ಮಾಡಿದೆ. ಶೇ.52 ಯುವಜನರನ್ನು ಹೊಂದಿರುವ ದೇಶ ನಮ್ಮದು. ಇವರನ್ನು ದೇಶದ ಆಸ್ತಿಯನ್ನಾಗಿ ಪರಿವರ್ತಿಸಿದರೆ ಪವಾಡ ಸೃಷ್ಟಿಸಬಹುದು. ತಮ್ಮ ಪ್ರಶ್ನೆಗಳಿಗೆ ಧರ್ಮ, ರಾಜಕೀಯ ವ್ಯಕ್ತಿಗಳು, ಶಿಕ್ಷಕರು, ಧರ್ಮ ಗುರುಗಳು ಉತ್ತರ ಕೊಡುತ್ತಿಲ್ಲ ಎಂಬ ಭಾವನೆ ಯುವಕರಲ್ಲಿದೆ. ಇದನ್ನು ಹೊಗಲಾಡಿಸಲು ಅವರ ಚಿಂತನೆಗಳಲ್ಲಿ ಸ್ಪಷ್ಟತೆ ಹಾಗೂ ಸಮತೋಲನ ತರಲು ಅಭಿಯಾನ ಆರಂಭಿಸಲಾಗಿದೆ. ಇದರಲ್ಲಿ ಯುವಕರ ಎಲ್ಲ ಪ್ರಶ್ನೆಗಳಿಗೂ ಉತ್ತರಿಸಲಾಗುವುದು ಎಂದರು.

“ಗುಂಪು ಥಳಿತ’ಕ್ಕೆ ಧರ್ಮ ಬೆರೆಸುವುದು ಸರಿಯಲ್ಲ: “ಗುಂಪು ಥಳಿತ’ ಪ್ರಕರಣಗಳಿಗೆ (ಲಿಂಚಿಂಗ್‌) ಧರ್ಮದ ಉನ್ಮಾದ ಕಾರಣ ಅನ್ನುವುದು ಸರಿಯಲ್ಲ. ಅಭದ್ರತೆ, ಆತಂಕ , ಆವಿಶ್ವಾಸ ಮತ್ತು ಹತಾಶೆ ಇದಕ್ಕೆ ಕಾರಣವಾಗಿದೆ. ಗೋವನ್ನುಧರ್ಮದ ಆಧಾರದಲ್ಲಿ ನೋಡುವುದಕ್ಕಿಂತ ಬದುಕು ಮತ್ತು ಆರ್ಥಿಕತೆಯ ದೃಷ್ಟಿಯಿಂದ ನೋಡಲಾಗುತ್ತದೆ. ಗೋವು ಕಳ್ಳರಿಂದ ತನ್ನ ಬದುಕು ಮತ್ತು ಆರ್ಥಿಕತೆ ಕಳೆದು ಹೋಗುತ್ತದೆ ಎಂಬ ಅಭದ್ರತೆ ಕಾಡುತ್ತದೆ.

ಒಂದು ಮಗು ಅಥವಾ ಗೋವು ಕಳೆದುಕೊಂಡವನು ಈಗಿನ ನ್ಯಾಯಾಂಗ ವ್ಯವಸ್ಥೆಯಲ್ಲಿ ತ್ವರಿತ ನ್ಯಾಯ ಪಡೆದುಕೊಳ್ಳಲು ಸಾಧ್ಯವೇ?. ಈ ಎಲ್ಲ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ಈ ಘಟನೆಗಳು ವಿಮರ್ಶಿಸಬೇಕಾಗಿದೆ. ಹಾಗಂತ ನಾನು ಲಿಂಚಿಂಗ್‌ ಸಮರ್ಥಿಸುವುದಿಲ್ಲ. ಇವುಗಳನ್ನು ತಡೆಗಟ್ಟಲು ನಮ್ಮಲ್ಲಿನ ಕಾನೂನು ವ್ಯವಸ್ಥೆ ದುರ್ಬಲ ಆಗಿರುವುದೂ ಸಹ ಸಮಸ್ಯೆ ಉಲ್ಬಣಕ್ಕೆ ಕಾರಣವಾಗಿದೆ ಎಂದು ಸದ್ಗುರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 

ಸಲಿಂಗಕಾಮ ದೈಹಿಕ, ಸಾಮಾಜಿಕ ವಿದ್ಯಮಾನ: ದೇಶಕ್ಕೆ ಸಂವಿಧಾನವೇ ಗ್ರಂಥ. ಸಾರ್ವತ್ರಿಕ ಮತ್ತು ಸಾರ್ವಜನಿಕ ಬದುಕಿನಲ್ಲಿ ಈ ಗ್ರಂಥದ ಪ್ರಕಾರವೇ ನಡೆದುಕೊಳ್ಳಬೇಕು. ಧಾರ್ಮಿಕ ಗ್ರಂಥಗಳನ್ನು ತಮ್ಮ ವೈಯುಕ್ತಿಕ ಪಾಂಡಿತ್ಯ ಹೆಚ್ಚಿಸಿಕೊಳ್ಳಲು, ಆ ಮೂಲಕ ಜೀವನದಲ್ಲಿ ಅಧ್ಯಾತ್ಮಿಕತೆ ಪಡೆದುಕೊಳ್ಳಲು ಮನೆಗಳಲ್ಲೇ ಅಧ್ಯಯನ ಮಾಡಬೇಕು.

ತಾನು ಓದುವ ಧರ್ಮ ಗ್ರಂಥ ಇನ್ನೊಬ್ಬರೂ ಓದಬೇಕು ಅದರಂತೆ ನಡೆದುಕೊಳ್ಳಬೇಕು ಎಂದು ವಾದಿಸುವುದು ಸರಿಯಲ್ಲ. ಸಲಿಂಗಕಾಮ ದೈಹಿಕ ವಿದ್ಯಮಾನ ಹೌದು. ಆದರೆ, ಸಾಮಾಜಿಕ ವಿದ್ಯಮಾನ ಅನ್ನುವುದನ್ನೂ ಅಲ್ಲಗಳೆಯುವಂತಿಲ್ಲ. ಚುನಾವಣೆಗಳು 3 ತಿಂಗಳು ಇರುವರೆಗೆ ಯಾರೂ ಚುನಾವಣೆಗಳ ಬಗ್ಗೆ ಮಾತನಾಡದಂತಹ ವ್ಯವಸ್ಥೆ ಜಾರಿಗೆ ತರಬೇಕು ಎಂದು ಸಂವಾದದಲ್ಲಿ ಸದ್ಗುರು ಪ್ರಶ್ನೆಗಳಿಗೆ ಉತ್ತರಿಸಿದರು. 

ತನ್ನ ಕುಟುಂಬಕ್ಕಿಂತ ತನ್ನ ರಾಜ್ಯದ ಜನರ ಕ್ಷೇಮ ಮತ್ತು ಕಲ್ಯಾಣ ಮುಖ್ಯ ಎಂದು ತಿಳಿದು ಅದಕ್ಕಾಗಿ ತನ್ನ ಸರ್ವಸ್ವವನ್ನೂ ತ್ಯಾಗ ಮಾಡಿದ ರಾಜನೊಬ್ಬನ ಉದಾತ್ತ ಮಾದರಿಯನ್ನು ರಾಮನ ಬದುಕಿನಲ್ಲಿ ನಾವು ಕಾಣಬಹುದು. ದೇವರು ಎಂಬ ಕಾರಣಕ್ಕೆ ಅಲ್ಲ, ಮಾನವೀಯತೆಯನ್ನೂ ಮೀರಿದ ಗುಣಗಳಿಗಾಗಿ ರಾಮನನ್ನು ಆರಾಧಿಸಲಾಗುತ್ತದೆ. ಸ್ವಾರ್ಥ ಬಿಟ್ಟು ಜನರ ಕ್ಷೇಮ ಬಯಸುವ ರಾಜಕೀಯ ನಾಯಕರು ಇಂದು ನಮಗೆ ಬೇಕಾಗಿದ್ದಾರೆ.
-ಸದ್ಗುರು ಜಗ್ಗಿ ವಾಸುದೇವ

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.