ಅಂತರ್ಧರ್ಮೀಯ ಜೋಡಿಗೆ ಹೈಕೋರ್ಟ್‌ ಆಸರೆ


Team Udayavani, Sep 13, 2018, 12:08 PM IST

blore-3.jpg

ಬೆಂಗಳೂರು: ಅಂತರ್‌ ಧರ್ಮೀಯ ಪ್ರೇಮಿಗಳು ಕಾನೂನು ಪ್ರಕಾರ ಬೇರ್ಪಟ್ಟರೂ, ಅವರ ಕಣ್ಣೀರ ಕಥೆಗೆ ಮರುಗಿದ ಹೈಕೋರ್ಟ್‌, ಮಾನವೀಯ ನೆಲೆಗಟ್ಟಿನಲ್ಲಿ ಆ ಜೋಡಿಗೆ ಆಸರೆಯಾಗಿದೆ.

ಸೇವಾ ಸಂಸ್ಥೆಯೊಂದರ ಆಶ್ರಮದಲ್ಲಿರುವ 17 ವರ್ಷದ ಸಂತ್ರಸ್ತ ಗರ್ಭಿಣಿಯನ್ನು ನೋಡಿ, ಆರೈಕೆ ಮಾಡಲು ಜೈಲಿನಲ್ಲಿರುವ ಆಕೆಯ ಪತಿಗೆ ಅವಕಾಶ ನೀಡಿ ಹೈಕೋರ್ಟ್‌ ವಿಭಾಗೀಯ ಪೀಠ ಮಧ್ಯಂತರ ಆದೇಶ ನೀಡಿದೆ.

ಸಂತ್ರಸ್ತೆಯ ಕರುಣಾಜನಕ ಹಿನ್ನೆಲೆ ಹಾಗೂ ಆಕೆ ಸಂಬಂಧಿಕರ ಜತೆ ಹೋಗಲು ಇಚ್ಛಿಸದ ನಿರ್ಧಾರವನ್ನು ಪರಿಗಣಿಸಿ ಇಂತಹದ್ದೊಂದು ಮಹತ್ವದ ತೀರ್ಪು ನೀಡಿದೆ. ಸಂತ್ರಸ್ತೆಗೆ ಪತಿಯ ಆಸರೆ ಅಗತ್ಯವಿದೆ. ಹೀಗಾಗಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಆಕೆಯನ್ನು ನೋಡಲು ಆಶ್ರಮ ಮುಖ್ಯಸ್ಥರು ಪತಿಗೆ ಅವಕಾಶ ನೀಡಬೇಕು. ಹೊರಗೆ ಕರೆದೊಯ್ದರೆ ಸಂಜೆ 5 ಗಂಟೆಯೊಳಗೆ ಕರೆತರಬೇಕು. ಆತನ ಭೇಟಿಗೆ ಕಾರಾಗೃಹ ಅಧಿಕಾರಿಗಳು ಅವಕಾಶ ಕಲ್ಪಿಸಿಕೊಡಬೇಕು ಎಂದು ತಿಳಿಸಿದೆ.

ಪ್ರಕರಣದ ಹಿನ್ನೆಲೆ: ಕೆ.ಆರ್‌.ಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ನಜೀರ್‌, ಖಾಸಗಿ ಕಂಪನಿಯೊಂದರ ಕಾರು ಚಾಲಕ. ತಂದೆಯನ್ನು ಕಳೆದುಕೊಂಡಿರುವ ಸಂತ್ರಸ್ತೆ ಆತನ ಮನೆಯ ಸಮೀಪವೇ ಇರುವ ಚಿಕ್ಕಪ್ಪನ ಮನೆಯಲ್ಲಿ
ವಾಸವಿದ್ದರು. 

ಈ ಮಧ್ಯೆ ಸಂತ್ರಸ್ತೆಗೆ ನಜೀರ್‌ ಪರಿಚಯವಾಗಿದ್ದು, ಚಿಕ್ಕಪ್ಪನಿಂದ ಅನುಭವಿಸುತ್ತಿದ್ದ ಲೈಂಗಿಕ, ದೈಹಿಕ ಕಿರುಕುಳ ಹೇಳಿಕೊಂಡಿದ್ದಳು. ಜತೆಗೆ ತನಗೆ ಕೆಲಸ ಕೊಡಿಸುವಂತೆ ಕೋರಿದ್ದಳು. ಹೀಗಾಗಿ ಆತ ಕೆಲಸ ಕೊಡಿಸಿದ್ದ. ಬಳಿಕ ಇಬ್ಬರ
ನಡುವೆ ಪ್ರೀತಿಯಾಗಿ ಕೆಲ ತಿಂಗಳ ಹಿಂದೆ ಮನೆ ಬಿಟ್ಟು ಹೋಗಿ ವಿವಾಹವಾಗಿದ್ದರು. ಅಂತರ್‌ ಧರ್ಮೀಯ ವಿವಾಹವಾದ ಕಾರಣ ಚಿಕ್ಕಪ್ಪನ ಕುಟುಂಬದವರು ವಿರೋಧಿಸುವ ಭಯದಿಂದ ಮತ್ತೆ ಮನೆಗೆ ಹೋಗಿರಲಿಲ್ಲ. ಸಂತ್ರಸ್ತೆಯನ್ನು
ಹುಡುಕಿಕೊಡುವಂತೆ ಆಕೆಯ ಚಿಕ್ಕಮ್ಮ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಿದ್ದರು. 

ಈ ಮಧ್ಯೆ ಆಕೆಯ ಸಂಬಂಧಿಕರು ದಾಖಲಿಸಿದ ದೂರಿನ ಅನ್ವಯ ಐಪಿಸಿ ಕಲಂ 376 ಹಾಗೂ ಪೋಸ್ಕೋ ಕಾಯಿದೆ ಅನ್ವಯ ಪ್ರಕರಣ ದಾಖಲಿಸಿಕೊಂಡು ನಜೀರ್‌ನನ್ನು ಬಂಧಿಸಿದ ಪೊಲೀಸರು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಸಂತ್ರಸ್ತೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ನೆರವಿನೊಂದಿಗೆ ಖಾಸಗಿ ಸಂಸ್ಥೆಯ ಬಾಲ ಮಂದಿರಕ್ಕೆ ಕಳುಹಿಸಿಕೊಡಲಾಗಿತ್ತು.

ಈ ನಡುವೆ ನ್ಯಾಯಾಲಯದಲ್ಲಿ ವಿಚಾರಣೆ ಸಂದರ್ಭದಲ್ಲಿ ಈ ಪ್ರಕರಣವನ್ನು ಮಾನವೀಯ ನೆಲೆಗಟ್ಟಿನಲ್ಲಿ ನೋಡಬೇಕಿದೆ. ಹೀಗಾಗಿ, ಗರ್ಭಿಣಿಯಾಗಿರುವ ಆಕೆ ಮಗುವಿಗೆ ಜನ್ಮ ನೀಡುವ ತನಕ ಆಶ್ರಮದಲ್ಲೇ ಇರಲಿ. ಆಕೆಗೆ ತಜ್ಞ ವೈದ್ಯರ ಕ್ಲಿನಿಕ್‌ನಲ್ಲಿ ತಪಾಸಣೆ ಮಾಡಿಸಬೇಕು. ಆಸ್ಪತ್ರೆ ಶುಲ್ಕವನ್ನು ಸರ್ಕಾರವೇ ಭರಿಸಬೇಕು ಎಂದು ಬೆಂಗಳೂರು ನಗರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಗೆ ಆದೇಶಿಸಿದೆ.

ವಿವಾಹ ವಿಚಾರಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಪತಿ ಅಥವಾ ಆತನ ಕುಟುಂಬ ಸದಸ್ಯರಿಗೆ ಯಾರಾದರೂ ತೊಂದರೆ ಕೊಡುವುದು, ಬೆದರಿಸುವುದು ಗೊತ್ತಾದರೇ ಕೂಡಲೇ ಕೆ.ಆರ್‌. ಪುರ ಠಾಣೆ ಪೊಲೀಸರು ರಕ್ಷಣೆ ಒದಗಿಸಬೇಕು. ಅವರ ಜೀವಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳುವುದು ಪೊಲೀಸರ ಜವಾಬ್ದಾರಿ ಎಂದು ನ್ಯಾಯಪೀಠ ನಿರ್ದೇಶಿಸಿದೆ. 

ಚಿಕ್ಕಪ್ಪನ ಕಿರುಕುಳದಿಂದ ನೊಂದಿದ್ದೇನೆ! “ತಂದೆ ತೀರಿಕೊಂಡ ಬಳಿಕ ಚಿಕ್ಕಪ್ಪ ನೀಡಿದ ದೈಹಿಕ ಕಿರುಕುಳದಿಂದ ನೊಂದಿದ್ದೇನೆ. ಸಂಬಂಧಿಕರಿಂದಲೂ ಕಿರುಕುಳ ಅನುಭವಿಸಿದ್ದೇನೆ. ಚಿಕ್ಕಮ್ಮನ ಮನೆಗೆ ಹೋಗಲು ಇಷ್ಟವಿಲ್ಲ. ವಿವಾಹವಾಗಿರುವ ಯುವಕನ ಜತೆ ಬದುಕುತ್ತೇನೆ ಎಂದು ನ್ಯಾಯಮೂರ್ತಿ ರಾಘವೇಂದ್ರ ಚೌಹಾಣ್‌ ನೇತೃತ್ವದ ವಿಭಾಗೀಯ ಪೀಠದೆದುರು ಸಂತ್ರಸ್ತೆ ಅಳಲು ತೋಡಿಕೊಂಡಿದ್ದರು. ಯುವಕ ಕೂಡ, ತಾನು ಆಕೆಯ ಜವಾಬ್ದಾರಿ ಹೊರುತ್ತೇನೆ ಎಂದಿದ್ದ. ಇಬ್ಬರ ಹೇಳಿಕೆ ಪರಿಗಣಿಸಿದ ನ್ಯಾಯಪೀಠ, ಸಂತ್ರಸ್ತೆಗೆ 17 ವರ್ಷವಾಗಿದ್ದು,
ತನ್ನಿಷ್ಟದ ನಿರ್ಧಾರ ಕೈಗೊಳ್ಳಲು ಸಮರ್ಥರಾಗಿದ್ದಾರೆ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೆ, ಪ್ರತಿ ತಿಂಗಳ ಎರಡನೇ ಶುಕ್ರವಾರ ಪ್ರಕರಣದ ವಿಚಾರಣೆ (ಇನ್‌ ಕ್ಯಾಮೆರಾ) ನಡೆಸಲು ನಿರ್ಧರಿಸಿದ್ದು, ಸೆ.14ರಂದು ವಿಚಾರಣೆ ನಡೆಯಲಿದೆ.
 ಮಂಜುನಾಥ ಲಘುಮೇನಹಳ್ಳಿ.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.