ಕಲಾವಿದರು ಬೇಕು, ಹಣ ಕೇಳಬಾರದು!


Team Udayavani, Sep 19, 2018, 12:43 PM IST

kalvidaru.jpg

ಬೆಂಗಳೂರು: “ಕಲಾವಿದರೇ ಬನ್ನಿ… ಆದರೆ ಸಂಭಾವನೆ ಮಾತ್ರ ಕೇಳಬೇಡಿ, ಇದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಡವಳಿಕೆ.

ರಂಗಭೂಮಿ ತಂಡಗಳನ್ನು ಮತ್ತು ಕಲಾವಿದರನ್ನು ಪೋತ್ಸಾಹಿಸಿ, ಪೋಷಿಸುವ ನಿಟ್ಟಿನಲ್ಲಿ ಇಲಾಖೆ ಪ್ರತಿವರ್ಷ ನಾಟಕ, ರಂಗೋತ್ಸವಗಳ ಪ್ರಾಯೋಜಕತ್ವವನ್ನು ವಹಿಸಿಕೊಳ್ಳುತ್ತದೆ.ಆದರೆ ಈ ರಂಗೋತ್ಸವ ಮತ್ತು ನಾಟಕಗಳು ಮುಗಿದ ತಕ್ಷಣ, ಕಲಾ ತಂಡಗಳಿಗೆ ನೀಡಬೇಕಾದ ಸಂಭಾವನೆ ನೀಡುವುದನ್ನೇ ಮರೆತು ಬಿಡುತ್ತದೆ.

ಹೀಗಾಗಿ, ಇಲಾಖೆ ಪ್ರಾಯೋಜಕತ್ವದಡಿ ನಾಟಕ ಮತ್ತು ರಂಗೋತ್ಸವದಲ್ಲಿ ಪಾಲ್ಗೊಂಡಿರುವ ಹಲವು ಕಲಾ ತಂಡಗಳು ಮತ್ತು ಕಲಾವಿದರು ಚಾತಕಪಕ್ಷಿಯಂತೆ ಇಲಾಖೆ ಕೊಡಬೇಕಿರುವ ಸಂಭಾವನೆಗಾಗಿ ಎದುರು ನೋಡುತ್ತಿದ್ದಾರೆ. 

ನಾಟಕೋತ್ಸದ ಹಣ ನೀಡಿಲ್ಲ: ಕಳೆದ ಡಿಸೆಂಬರ್‌-ಜನವರಿಯಲ್ಲಿ ಬೆಂಗಳೂರಿನ ಕಲಾಗ್ರಾಮ ಸೇರಿದಂತೆ ವಿವಿಧ ಕಲಾಕ್ಷೇತ್ರಗಳಲ್ಲಿ “ಬೆಂಗಳೂರು ನಾಟಕ ಉತ್ಸವ’ವನ್ನು ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ರಂಗ ಸಂಪದ, ರಂಗ ಪಯಣ, ರಂಗ ನಿರಂತರ, ವಿಜಯನಗರ ಬಿಂಬ ಸೇರಿದಂತೆ ಬೆಂಗಳೂರಿನಲ್ಲಿರುವ ಸುಮಾರು 20 ರಂಗ ತಂಡಗಳು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮ ನೀಡಿದ್ದವು.

ಈ ಉತ್ಸವ ಆರಂಭಕ್ಕೂ ಮುನ್ನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರತಿ ರಂಗ ತಂಡಗಳಿಗೆ 25 ಸಾವಿರ ರೂ.ಸಂಭಾವನೆ ನೀಡುವ ವಾಗ್ಧಾನ ಮಾಡಿತ್ತು. ಆದರೆ, ಇಲ್ಲಿವರೆಗೂ ರಂಗಕಲಾವಿದರಿಗೆ ನೀಡಬೇಕಿರುವ ಸಂಭಾವನೆ ನೀಡಿಲ್ಲ.

ಈ ವಿಷಯವನ್ನು ರಂಗ ತಂಡಗಳು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರೂ, ಇಲ್ಲಿಯವರೆಗೂ ಯಾವುದೇ ಪ್ರಯೋಜನಯಾಗಿಲ್ಲ. ಇಲಾಖೆ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿದರೂ ಸಂಭಾವನೆ ಬಿಡುಗಡೆ ಬಗ್ಗೆ ಮಾತನಾಡುತ್ತಿಲ್ಲ. ಪ್ರತಿದಿನ ಒಂದಲ್ಲ, ಒಂದು ಸಬೂಬು ಹೇಳಿ ಜಾರಿಕೊಳ್ಳುತ್ತಾರೆ ಎಂದು ಹೆಸರು ಹೇಳಲು ಇಚ್ಚಿಸದ ರಂಗಕಲಾವಿದರೊಬ್ಬರು ದೂರುತ್ತಾರೆ.

ಪ್ರಯೋಜಕತ್ವದ ಹಣ ಕೊಡಿ: ಕಳೆದ ಮಾರ್ಚ್‌ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಯೋಜಕತ್ವದಲ್ಲಿ ರಂಗ ಸಂಪದ ತಂಡ ರವೀಂದ್ರ ಕಲಾಕ್ಷೇತ್ರದಲ್ಲಿ “ಸಂದರ್ಭ’, ಎಂಬ ನಾಟಕವನ್ನು ಪ್ರದರ್ಶಿಸಿತು.ಇದಕ್ಕೂ ಮೊದಲು 25 ಸಾವಿರ ರೂ. ಗಳ ಪ್ರಯೋಜಕತ್ವದ ಸಂಭಾವನೆ ನೀಡುವ ಭರವಸೆ ನೀಡಿತ್ತು.

ಹೀಗಾಗಿ 6,360 ರೂ. ನೀಡಿ ರಂಗಸಂಪದ ತಂಡ ವತಿಯಿಂದ ರವೀಂದ್ರ ಕಲಾಕ್ಷೇತ್ರವನ್ನು ಮುಂಗಡವಾಗಿ ಬುಕ್‌ ಮಾಡಲಾಗಿತ್ತು. ಆದರೆ ಪ್ರದರ್ಶನ ಮುಗಿದ ಮೇಲೆ ಇಲಾಖೆ ಸಂಭಾವನೆ ನೀಡುವುದನ್ನೇ ಮರೆತಿದೆ ಎಂದು ರಂಗಸಂಪದ ತಂಡದ ನಾಗೇಶ್‌ ದೂರಿದ್ದಾರೆ. ಹಲವಾರು ತಂಡಗಳು ಕಚೇರಿಗೆ ಅಲೆದಾಡುತ್ತಿದ್ದು,ಇಲಾಖೆಯನ್ನು ನಂಬಿ ಕಾರ್ಯಕ್ರಮ ನೀಡುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.

ಸಚಿವರಿಗೆ ಪತ್ರ: ಕಲಾವಿದರ ಈ ಅಳಲು ಇದೀಗ ಕರ್ನಾಟಕ ನಾಟಕ ಅಕಾಡೆಮಿ ಮೆಟ್ಟಿಲೇರಿದೆ. ರಂಗಭೂಮಿ ಕಲಾವಿದರ ಆಸರೆಗೆ ಬಂದಿರುವ ನಾಟಕ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾ ಅವರಿಗೆ ಪತ್ರ ಬರೆದಿದೆ.  ರಾಜ್ಯದ ಹಲವೆಡೆಗಳಲ್ಲಿರುವ ಕಲಾವಿದರು ಸಾಲ ಮಾಡಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಾರೆ. ಇಂತಹ ಕಲಾವಿದರುಗಳಿಗೆ ಸಂಭಾವನೆ ನೀಡದೇ ಅಲೆದಾಡಿಸುವ ಪರಿ ಸರಿಯಲ್ಲ. ಹೀಗಾಗಿ, ಆರ್ಥಿಕ ಸಂಕಷ್ಟದಲ್ಲಿ ರಂಗಭೂಮಿ ಕಲಾವಿದರ ನೆರವಿಗೆ ಬರುವಂತೆ ಮನವಿ ಮಾಡಿದೆ. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಾಲಿ ನಿರ್ದೇಶಕರಾಗಿರುವ ವಿಶುಕುಮಾರ್‌ ಅವರು ನವೆಂಬರ್‌ನಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದು, ಅದಕ್ಕೂ ಮೊದಲು ಕಲಾವಿದರುಗಳಿಗೆ ನೀಡಬೇಕಾದ ಸಂಭಾವನೆ ಬಿಡುಗಡೆ ಮಾಡಬೇಕು ಎಂಬುದು ಕಲಾವಿದರ ಅಳಲು.

ಕಲಾವಿದರು ಆರ್ಥಿಕ ಸಂಕಷ್ಟದಲ್ಲಿದ್ದಾರೆ.ಹೀಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಯೋಜಕತ್ವದಲ್ಲಿ ನಡೆದ ರಂಗೋತ್ಸವಗಳಲ್ಲಿ ಭಾಗವಹಿಸಿದ ಕಲಾವಿದರಿಗೆ, ಸಂಭಾವನೆ ನೀಡುವಂತೆ ಅಕಾಡೆಮಿ ವತಿಯಿಂದ ಸಚಿವರಿಗೆ ಪತ್ರ ಬರೆಯಲಾಗಿದೆ. 
-ಜೆ.ಲೋಕೇಶ್‌, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.