ವೇಗ ಪಡೆಯದ ಗುಂಡಿ ದುರಸ್ತಿ


Team Udayavani, Sep 22, 2018, 1:15 PM IST

vega-pade.jpg

ಬೆಂಗಳೂರು: ರಸ್ತೆಗುಂಡಿ ವಿಚಾರದಲ್ಲಿ ಪಾಲಿಕೆಯನ್ನು ಹೈಕೋರ್ಟ್‌ ತೀವ್ರವಾಗಿ ತರಾಟೆಗೆ ತೆಗೆದುಕೊಂಡ ನಂತರ ಪಾಲಿಕೆಯ ಅಧಿಕಾರಿಗಳು ಹಗಲು ರಾತ್ರಿ ರಸ್ತೆಗುಂಡಿ ಕಾರ್ಯದಲ್ಲಿ ತೊಡಗಿದ್ದರೂ, ಹೆಚ್ಚಿನ ಗುಂಡಿಗಳು ದುರಸ್ತಿಯಾಗಿಲ್ಲ. 

ನಗರದಲ್ಲಿರುವ ಎಲ್ಲ ರಸ್ತೆಗುಂಡಿಗಳನ್ನು ಸೋಮವಾರದೊಳಗೆ (ಸೆ.24) ಮುಚ್ಚುವಂತೆ ಹೈಕೋರ್ಟ್‌ ಪಾಲಿಕೆ ಸೂಚನೆ ನೀಡಿದೆ. ಅದರಂತೆ ಬುಧವಾರದಿಂದಲೇ ಕಾರ್ಯಾಚರಣೆ ನಡೆಸುತ್ತಿರುವ ಪಾಲಿಕೆಯ ಅಧಿಕಾರಿಗಳು ಈವರೆಗೆ ದುರಸ್ತಿಪಡಿಸಿರುವ ಗುಂಡಿಗಳ ಸಂಖ್ಯೆ 1,416 ಮಾತ್ರ. ಹೀಗಾಗಿ ಉಳಿದ ಎರಡು ದಿನಗಳಲ್ಲಿ ನಗರದಲ್ಲಿರುವ ಎಲ್ಲ ಗುಂಡಿಗಳನ್ನು ಪಾಲಿಕೆ ಮುಚ್ಚುವುದೇ ಎಂಬ ಅನುಮಾನ ಮೂಡಿದೆ. 

ಹೈಕೋರ್ಟ್‌ ಸೂಚನೆ ಮೇರೆಗೆ ಬಿಬಿಎಂಪಿಯ ಎಲ್ಲ ವಲಯಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಗುಂಡಿ ಮುಚ್ಚಿವ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಶುಕ್ರವಾರ ಸರ್ಕಾರಿ ರಜೆ ದಿನವಾದರೂ ಕಾರ್ಯಾಚರಣೆ ಮುಂದುವರಿಸಲಾಗಿತ್ತು. ಅದರಂತೆ ಶುಕ್ರವಾರ 265 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಯೋಜನಾ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ತುಳಸಿನಾಥ್‌ ಮಾಹಿತಿ ನೀಡಿದ್ದಾರೆ.

ನಗರದಲ್ಲಿ ಒಟ್ಟು 3,071 ರಸ್ತೆ ಗುಂಡಿಗಳನ್ನು ಗುರುತಿಸಲಾಗಿದ್ದು, ಆ ಪೈಕಿ ಶುಕ್ರವಾರದವರೆಗೆ 899 ರಸ್ತೆ ಗುಂಡಿಗಳನ್ನು ಮುಚ್ಚಲಾಗಿತ್ತು. ಇನ್ನು ಶುಕ್ರವಾರ ಸಂಜೆವರೆಗೆ 265 ಗುಂಡಿಗಳು ಸೇರಿ ಒಟ್ಟು 1,416 ರಸ್ತೆ ಗುಂಡಿಗಳ ದುರಸ್ತಿ ಕಾರ್ಯ ನಡೆಸಿದ್ದು, ಉಳಿದ 1,655 ಗುಂಡಿಗಳನ್ನು ಸೋಮವಾರದೊಳಗೆ ಮುಚ್ಚಲಾಗುವುದು. ಆ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಹಾಗೂ ಶನಿವಾರವೂ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ವಿವರಿಸಿದರು. 

ಪಾಲಿಕೆಯ ಎಂಟು ವಲಯಗಳಲೂ ರಸ್ತೆಗುಂಡಿ ಮುಚ್ಚು ಕೆಲಸ ನಡೆಯುತ್ತಿದ್ದು, ಹಿರಿಯ ಅಧಿಕಾರಿಗಳು ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಹೈಕೋರ್ಟ್‌ ಆದೇಶದಂತೆ ಸೋಮವಾರದೊಳಗೆ ಎಲ್ಲ ಮುಚ್ಚಲಾಗುವುದು. ಮಳೆ ಬಂದರೆ ಕೋಲ್ಡ್‌ ಮಿಕ್ಸ್‌ ಬಳಸುತ್ತೇವೆ. ಕೆಲವು ರಸ್ತೆಗಳಲ್ಲಿ ಡಾಂಬರೀಕರಣ ಕಾಮಗಾರಿ ನಡೆಸಬೇಕಿರುವ ಹಿನ್ನೆಲೆಯಲ್ಲಿ ಮಣ್ಣು ಹಾಗೂ ಕಲ್ಲು ಹಾಕಿ ತಾತ್ಕಾಲಿಕವಾಗಿ ಮುಚ್ಚಲಾಗಿದೆ.
-ಎಂ.ಆರ್‌.ವೆಂಕಟೇಶ್‌, ಪ್ರಧಾನ ಇಂಜಿನಿಯರ್‌

ಗುಂಡಿ ವಿವರ (ಸೆ.21 ಸಂಜೆ.7.45ಕ್ಕೆ)
ವಲಯ    ಗುರುತಿಸಿದ ಗುಂಡಿ    ಮುಚ್ಚಿದ ಗುಂಡಿ    ಬಾಕಿ

-ಪೂರ್ವ    68    44    24
-ಪಶ್ಚಿಮ    27    27    0
-ದಕ್ಷಿಣ    71    13    58
-ಬೊಮ್ಮನಹಳ್ಳಿ    321    125    196
-ದಾಸರಹಳ್ಳಿ    125    50    75
-ಮಹದೇವಪುರ    709    131    578
-ಆರ್‌.ಆರ್‌.ನಗರ    55    0    55
-ಯಲಹಂಕ    379    66    313
-ರಸ್ತೆ ಮೂಲ ಸೌಕರ್ಯ    417    61    356
-ಒಟ್ಟು    2172    517    1655

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.