ತೊಂದರೆಯಾಗದಂತೆ ಕಾಮಗಾರಿ ನಡೆಸಿ
Team Udayavani, Sep 23, 2018, 12:58 PM IST
ಬೆಂಗಳೂರು: ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮೇಯರ್ ಆರ್.ಸಂಪತ್ರಾಜ್ ತಿಳಿಸಿದರು.
ಶನಿವಾರ ಗಾಂಧಿನಗರದಲ್ಲಿ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿ, ರಸ್ತೆ ಡಾಂಬರೀಕರಣ ಕಾಮಗಾರಿ ಹಾಗೂ ಗುಂಡಿ ದುರಸ್ತಿ ಕಾಮಗಾರಿಗಳನ್ನು ಪರಿಶೀಲಿಸಿದರು. ಈ ವೇಳೆ ಮೇಯರ್ ಅವರನ್ನು ಭೇಟಿ ಮಾಡಿದ ಸ್ಥಳೀಯ ಕಾಮಗಾರಿ ವಿಳಂಬದಿಂದಾಗಿ ತೀವ್ರ ತೊಂದರೆಯಾಗುತ್ತಿದೆ ಎಂದು ದೂರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮೇಯರ್, ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ 129 ಕೋಟಿ ರೂ. ವೆಚ್ಚದಲ್ಲಿ 17 ರಸ್ತೆಗಳನ್ನು ಅಭಿವೃದ್ಧಿಗೆ ಯೋಜನೆ ರೂಪಿಸಿದ್ದು, ಈಗಾಗಲೇ ಶೇ.60 ರಷ್ಟು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಕೆಲವು ಕಡೆ ಕಾಮಗಾರಿ ವಿಳಂಬ ಆಗಿರುವುದರಿಂದ ಸ್ಥಳೀಯರಿಗೆ ಸಮಸ್ಯೆಯಾಗುತ್ತಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ತಿಳಿಸಲಾಗಿದೆ ಎಂದರು.
ಸ್ಥಳೀಯರ ಆಕ್ರೋಶ: ವೈಟ್ ಟಾಪಿಂಗ್ ಕಾಮಗಾರಿ ಪರಿಶೀಲನೆ ನಡೆಸುವ ವೇಳೆ ಸ್ಥಳಿಯರು, ನಮ್ಮ ಮನೆಯ ಪಂಪ್ಗ್ಳಿಗೆ ಸ್ಯಾನಿಟರಿ ನೀರು ಸೇರುತ್ತಿದ್ದು, ನೀರು ಉಪಯೋಗಿಸಲು ಸಾಧ್ಯವಾಗುತ್ತಿಲ್ಲ. ಈಗಾಗದರೆ ನಾವು ಏನು ಮಾಡುವುದು. ಆ ಕಲುಷಿತ ನೀರನ್ನು ಹೇಗೆ ಬಳಸಲು ಸಾಧ್ಯ ಎಂದು ಕಿಡಿಕಾರಿದರು. ತ್ವರಿತವಾಗಿ ರಸ್ತೆ ಕಾಮಗಾರಿ ಮುಗಿಸಿ, ನಮ್ಮ ಸಮಸ್ಯೆಗೆ ಮುಕ್ತಿಕೊಡಿ ಎಂದು ಮನವಿ ಮಾಡಿಕೊಂಡರು.
ಆಗ ಮೇಯರ್ ಪಕ್ಕದಲ್ಲಿಯೇ ಇದ್ದ ಸಂಪ್ ನೀರಿನ ವಾಸನೆ ಗ್ರಹಿಸಿದಾಗ ದುರ್ವಾಸನೆ ಇರುವುದು ಕಂಡುಬಂತು. ಇದರಿಂದ ಕೆರಳಿದ ಮೇಯರ್, ಸಮಸ್ಯೆಗೆ ತಿಳಿದರೂ ಏಕೆ ಕ್ರಮಕ್ಕೆ ಮುಂದಾಗಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಜತೆಗೆ ಕೂಡಲೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ