ನೇಪಾಳದೊಂದಿಗೆ ಕಸಾಪ ನೆಂಟಸ್ತನ


Team Udayavani, Sep 24, 2018, 12:30 PM IST

nepala.jpg

ಬೆಂಗಳೂರು: ಭಾಷೆ ಹಾಗೂ ಸಾಹಿತ್ಯದ ಬೆಳವಣಿಗೆ ದೃಷ್ಟಿಯಿಂದ ನೇಪಾಳದೊಂದಿಗೆ ನೆಂಟಸ್ತನ ಮಾಡಲು ಕನ್ನಡ ಸಾಹಿತ್ಯ ಪರಿಷತ್‌ ಮುಂದಾಗಿದೆ. ಆ  ನಿಟ್ಟಿನಲ್ಲಿ ಕನ್ನಡದ ಹೆಸರಾಂತ ಸಾಹಿತಿಗಳ ಕವಿತೆಗಳು ನೇಪಾಳಿ ಭಾಷೆಗೆ, ಹಾಗೇ ಆ ಭಾಷೆಯ ಹೆಸರಾಂತ ಕವಿಗಳ ಕವಿತೆಗಳು ಕನ್ನಡ ಭಾಷೆಯಲ್ಲಿ  ದೊರೆಯುವಂತೆ ಮಾಡುವ ಯೋಜನೆ ಸಿದ್ಧಪಡಿಸಿದ್ದು, ಇನ್ನು 3 ತಿಂಗಳಲ್ಲಿ ಓದುಗರಿಗೆ ಲಭ್ಯವಾಗಲಿದೆ. 

ನೇಪಾಳಿ ಭಾಷಾ ಸಾಂಸ್ಕೃತಿಕ ಮತ್ತು ಸಾಹಿತ್ಯ ವಿಭಾಗದ 6 ಮಂದಿ ಒಳಗೊಂಡ ನಿಯೋಗ ಕಳೆದ ವರ್ಷ ನೇಪಾಳ ಕಲಾ ಡಾಟ್‌.ಕಾಂ ಮುಖ್ಯಸ್ಥೆ  ಮಮಿಲಾ ಜೋಷಿ ನೇತೃತ್ವದಲ್ಲಿ ಬೆಂಗಳೂರಿಗೆ ಭೇಟಿ ನೀಡಿತ್ತು. ಈ ವೇಳೆ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಮನು ಬಳಿಗಾರ್‌ ರನ್ನು ಭೇಟಿ ಮಾಡಿ,  ಕವಿತೆಗಳ ವಿನಿಮಯದ ಸಂಬಂಧ ಮಾತುಕತೆ ನಡೆಸಿತ್ತು. 

ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್‌ ಮತ್ತು ಮಮಿಲಾ ಜೋಷಿ ಅವರು ಕವಿತೆ ವಿನಿಮಯದ  ಕುರಿತು ಒಪ್ಪಿಗೆ ಸೂಚಿಸಿದ್ದರು. ಈ ವೇಳೆ ಕನ್ನಡ ಸಾಹಿತ್ಯ ಲೋಕದ ಜ್ಞಾನಪೀಠ ಪುರಸ್ಕೃತ ಕವಿಗಳ ಜತೆಗೆ ಇತರೆ 50 ಕವಿಗಳ ಕವಿತೆಗಳನ್ನು ನೇಪಾಳಿ  ಭಾಷೆಗೆ, ಹಾಗೆಯೆ ನೇಪಾಳಿ ಭಾಷೆಯ 50 ಕವಿತೆಗಳನ್ನು ಕನ್ನಡಕ್ಕೆ ಭಾಷಾಂತರಿಸಿ ಪುಸ್ತಕ ರೂಪದಲ್ಲಿ ಪ್ರಕಟಿಸುವ ಸಂಬಂಧದ ಒಪ್ಪಂದಕ್ಕೆ ಪರಿಷತ್ತಿನ  ಹಿರಿಯರ ಸಮ್ಮುಖದಲ್ಲಿ ಸಹಿ ಹಾಕಲಾಗಿತ್ತು. 

ಯಾವ ಕವಿಗಳ ಕವಿತೆಗಳು?: ಜ್ಞಾನಪೀಠ ಪುರಸ್ಕೃತರಾದ ಕುವೆಂಪು, ಡಾ.ದ.ರಾ.ಬೇಂದ್ರೆ, ಡಾ.ವಿ.ಕೃ.ಗೋಕಾಕ್‌, ಡಾ.ಚಂದ್ರಶೇಖರ ಕಂಬಾರ,  ಡಾ.ಯು.ಆರ್‌.ಅನಂತಮೂರ್ತಿ ಜತೆಗೆ ರಾಷ್ಟ್ರಕವಿ ಡಾ.ಜಿ.ಎಸ್‌.ಶಿವರುದ್ರಪ್ಪ, ಪಿ. ಲಂಕೇಶ್‌, ಡಾ.ಸಿದ್ದಲಿಂಗಯ್ಯ, ಡಾ.ಕೆ.ಎಸ್‌. ನಿಸಾರ್‌ ಅಹಮದ್‌,  ಡಾ.ಚಂದ್ರಶೇಖರ ಪಾಟೀಲ, ಡಾ.ಬರಗೂರ ರಾಮಚಂದ್ರಪ್ಪ, ಸಿದ್ಧಯ್ಯ ಪುರಾಣಿಕ್‌, ಡಾ.ದೊಡ್ಡರಂಗೇಗೌಡ, 

ಡಾ.ಚನ್ನವೀರ ಕಣವಿ, ಡಾ.ಸುಮತೀಂದ್ರ ನಾಡಿಗ, ಡಾ.ಎಚ್‌.ಎಸ್‌.ವೆಂಕಟೇಶ ಮೂರ್ತಿ, ಡಾ.ಜಯಂತ ಕಾಯ್ಕಿಣಿ, ಪ್ರೊ. ತೇಜಸ್ವಿನಿ ಕಟ್ಟಿಮನಿ ಸೇರಿದಂತೆ ನಾಡಿನ 50  ಹೆಸರಾಂತ ಸಾಹಿತಿಗಳ ಕವಿತೆಗಳು ನೇಪಾಳಿ ಭಾಷೆಗೆ ಅನುವಾದವಾಗಲಿವೆ. ಕುವೆಂಪು ಕವಿತೆಗಳನ್ನು ಎನ್‌.ಎಸ್‌. ನಟರಾಜ, ದ.ರಾ.ಬೇಂದ್ರೆ  ಕವಿತೆಯನ್ನು ಕೆ.ಎಸ್‌. ರಾಘವೇಂದ್ರ, ಡಾ.ಯು.ಆರ್‌. ಅನಂತಮೂರ್ತಿ ಕವಿತೆಯನ್ನು ಸುಕೇತು ಮೆಹ್ತಾ

ಮತ್ತು ಶರತ್‌ ಅನಂತಮೂರ್ತಿ, ಡಾ.ಜಿ.ಎಸ್‌.ಶಿವರುದ್ರಪ್ಪ ಕವಿತೆಗಳನ್ನು ಜಿ.ಎಸ್‌.ಆಮೂರ, ಪಿ.ಲಂಕೇಶ್‌ ಅವರ ಕವಿತೆಗಳನ್ನು ಪಿ.ರಾಮಮೂರ್ತಿ ಆಂಗ್ಲ ಭಾಷೆಗೆ ಭಾಷಾಂತರಿಸಿದ್ದಾರೆ. ಇನೂ,° ಹಲವು ಕವಿಗಳ ಕವಿತೆಗಳ ಇಂಗ್ಲಿಷ್‌ ಅನುವಾದವನ್ನು ಬೇರೆ-ಬೇರೆ ಅನುವಾದಕರಿಗೆ ಕಸಾಪ ವಹಿಸಿದೆ. ನಂತರ  ಅವುಗಳನ್ನು ನೇಪಾಳಿ ಭಾಷಾಂತರಕಾರರು ತಮ್ಮ ಭಾಷೆಗೆ ತರ್ಜುಮೆ ಮಾಡುತ್ತಾರೆ. 

ನೇಪಾಳಿ ಭಾಷೆಯ ಕವಿಗಳು: ಅದೇರೀತಿ ನೇಪಾಳಿ ಹೆಸರಾಂತ ಕವಿ ಗೋಪಾಲ ಪ್ರಸಾದ್‌ ರಿಮಾಲ್‌, ಲಕ್ಷಿ ಪ್ರಸಾದ್‌ ದೇವ್‌ಕೋಟ, ತುಳಸಿ ದಿವಾಸ್‌,  ಶೈಲೇಂದ್ರ ಸರ್ಕಾರ್‌, ನರೇಶ್‌ ಶಕ್ಯಾ, ಎಸ್‌.ಪಿ.ಕೋಯಿರಾಲ, ಅವಿನಾಶ್‌ ಶ್ರೇಷ್ಠ, ಕೃಷ್ಣ ಸೇನ್‌ ಇನ್ನಿತರ ಕವಿಗಳ ಕವಿತೆಗಳನ್ನು ಆಂಗ್ಲ ಭಾಷೆಗೆ, ಅಲ್ಲಿಂದ  ಕನ್ನಡಕ್ಕೆ ಅನುವಾದ ಮಾಡಲಾಗುತ್ತದೆ.

ಮುದ್ರಣ ಹಂತದಲ್ಲಿ ಪುಸ್ತಕ: ಕನ್ನಡ ಭಾಷೆಯ ಕವಿತೆಗಳನ್ನು ಈಗಾಗಲೇ ಇಂಗ್ಲಿಷ್‌ ಭಾಷೆಗೆ ಅನುವಾದ ಮಾಡಿ ನೇಪಾಳಿಗೂ  ಭಾಷಾಂತರಗೊಳಿಸಲಾಗಿದ್ದು, ನೇಪಾಳಿ ಕವಿತೆಗಳನ್ನು ಕನ್ನಡಕ್ಕೆ ಭಾಷಾಂತರಿಸುವ ಕಾರ್ಯವೂ ಮುಗಿದು, ಪುಸ್ತಕಗಳು ಮುದ್ರಣ ಹಂತದಲ್ಲಿವೆ. 3  ತಿಂಗಳಲ್ಲಿ ಈ ಕೆಲಸ ಪೂರ್ಣ ಗೊಳ್ಳಲಿದ್ದು, ಶೀಘ್ರದಲ್ಲೇ ಅವುಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗುವುದು ಎಂದು ಕಸಾಪ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.

ಭಾಷಾ ಬೆಳವಣಿಗೆ ಹಿನ್ನೆಲೆಯಲ್ಲಿ ಕಸಾಪ ನೇಪಾಳದೊಂದಿಗೆ  ನೆಂಟಸ್ತಿಕೆ ಮಾಡಲು ಮುಂದಾಗಿದೆ. ಈ ಕೊಡು-ಕೊಳ್ಳುವಿಕೆ ಪ್ರಕ್ರಿಯೆಯಿಂದಾಗಿ ಕನ್ನಡ ಭಾಷಾ ಸೊಗಡು, ನೇಪಾಳಿಗೆ  ಹಾಗೂ ಅಲ್ಲಿನ ಸಾಹಿತ್ಯದ ಸೊಗಡು ಕನ್ನಡಿಗರಿಗೆ  ದೊರೆಯಲಿದೆ. 
-ಡಾ.ಮನು ಬಳಿಗಾರ್‌, ಕಸಾಪ ಅಧ್ಯಕ್ಷ

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.