ಸ್ಮಾರ್ಟ್‌ ಸಿಟಿ: ಕನಸಿನ ಯೋಜನೆಗಳಿಗೆ ಕತ್ತರಿ


Team Udayavani, Sep 24, 2018, 12:31 PM IST

smart-city.jpg

ಬೆಂಗಳೂರು: ಅಧಿಕಾರ ಅವಧಿ ಮುಗಿಯುತ್ತಾ ಬಂದರೂ ಜಾರಿಯಾಗದ “ಸ್ಮಾರ್ಟ್‌ ಸಿಟಿ’ಯ ಕನಸಿನ ಯೋಜನೆಗಳನ್ನು ಕೈಬಿಟ್ಟು, ಅಲ್ಪಾವಧಿಯಲ್ಲಿ ಅನುಷ್ಠಾನಗೊಳಿಸಬಹುದಾದ ಕಾರ್ಯಕ್ರಮಗಳನ್ನು ಮಾತ್ರ ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ಉದ್ದೇಶಿಸಿದ್ದು, ಈ ಸಂಬಂಧ ಸೋಮವಾರದೊಳಗೆ ಪರಿಷ್ಕೃತ ಯೋಜನಾ ಪಟ್ಟಿ ಸಲ್ಲಿಸಲು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಸೂಚಿಸಿದೆ.

ಈ ಪರಿಷ್ಕರಣೆಯಿಂದ “ಸ್ಮಾರ್ಟ್‌ ಸಿಟಿ’ ಅಡಿ ರಾಜ್ಯದ ಏಳೂ ನಗರಗಳಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಿದ್ದ ಮಹತ್ವಾಕಾಂಕ್ಷಿ ಯೋಜನೆಗಳಿಗೆ ಹಾಗೂ ಯೋಜನಾ ಮೊತ್ತಕ್ಕೆ ಕತ್ತರಿ ಬೀಳಲಿದ್ದು, ಮುಂದಿನ ಆರು ತಿಂಗಳಲ್ಲಿ ಮಾಡಿ ಮುಗಿಸಬಹುದಾದ ಯೋಜನೆಗಳಿಗೆ ಮಾತ್ರ ಈ ಭಾಗ್ಯ ಸಿಗಲಿದೆ.

ಅದರಂತೆ ರಾಜಧಾನಿ ಬೆಂಗಳೂರಿನಲ್ಲಿ ಕೆರೆಗಳು, ವಿವಿಧ ಮಾರುಕಟ್ಟೆಗಳ ಅಭಿವೃದ್ಧಿ ಸೇರಿದಂತೆ ಹಲವು ಯೋಜನೆಗಳ ಪಟ್ಟಿಯನ್ನು ಕೇಂದ್ರದ ಮುಂದಿಡಲಾಗಿತ್ತು. ಈಗ ಪರಿಷ್ಕರಣೆಯಿಂದ ಪ್ರಮುಖವಾಗಿ ಟೆಂಡರ್‌ ಶ್ಯೂರ್‌ ಮಾದರಿಯಲ್ಲಿ ಸ್ಮಾರ್ಟ್‌ ರಸ್ತೆ ಕನಸು ಮಾತ್ರ ಕೈಗೂಡುವ ಸಾಧ್ಯತೆ ಇದೆ ಎಂದು ಕರ್ನಾಟಕ ನಗರ ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ಹಣಕಾಸು ನಿಗಮ (ಕೆಯುಐಡಿಎಫ್ಸಿ)ದ ಮೂಲಗಳು ತಿಳಿಸಿವೆ.

ಸರ್ಕಾರದ ಬಳಿ ಸಮಯಾವಕಾಶ ತುಂಬಾ ಕಡಿಮೆ ಇದೆ. ಆದ್ದರಿಂದ ಭೂವಿವಾದ, ಕಾನೂನಿನ ಅಡತಡೆಗಳು, ಒತ್ತುವರಿ ತೆರವು ಕಿರಿಕಿರಿ, ಪುನರ್‌ವಸತಿ ಕಲ್ಪಿಸುವುದು ಮತ್ತಿತರ ಯಾವುದೇ ಸಮಸ್ಯೆಗಳು ಇಲ್ಲದ, ಸುಲಿಲತವಾಗಿ ಅನುಷ್ಠಾನಗೊಳಿಸಬಹುದಾದ ಯೋಜನೆಗಳನ್ನು ಸದ್ಯಕ್ಕೆ ಕೈಗೆತ್ತಿಕೊಳ್ಳದಿರಲು ಉದ್ದೇಶಿಸಲಾಗಿದೆ. ಹಾಗಾಗಿ, ಈ ಮೊದಲಿನ ಕನಸಿನ ಯೋಜನೆಗಳನ್ನು ಬದಿಗೊತ್ತಿ, ವಾಸ್ತವಿಕ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುತ್ತಿದೆ. ಇಲ್ಲವಾದರೆ, ಮಂಜೂರಾದ ಹಣ ವಾಪಸ್‌ ಹೋಗುವ ಸಾಧ್ಯತೆ ಇದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಉದ್ದೇಶಿಸಿದ್ದ ಯೋಜನೆಗಳು: ಸ್ಮಾರ್ಟ್‌ ಸಿಟಿ ಯೋಜನೆ ಅಡಿ ಈ ಮೊದಲು ಬೆಂಗಳೂರಿನಲ್ಲಿ 640.85 ಕೋಟಿ ರೂ. ವೆಚ್ಚದಲ್ಲಿ 56 ಕಿ.ಮೀ. ಟೆಂಡರ್‌ ಶ್ಯೂರ್‌ ರಸ್ತೆ ನಿರ್ಮಾಣ, 94 ಕೋಟಿ ರೂ.ಗಳಲ್ಲಿ ರಸೆಲ್‌ ಮಾರುಕಟ್ಟೆ, ಬಸ್‌ ಡಿಪೊ, ಸಾರ್ವಜನಿಕ ಉದ್ಯಾನ, ಮೆಟ್ರೋ ನಿಲ್ದಾಣ ಸೇರಿದಂತೆ ಶಿವಾಜಿನಗರದ ಅಭಿವೃದ್ಧಿ, 67.97 ಕೋಟಿ ವೆಚ್ಚದಲ್ಲಿ ಕೆ.ಆರ್‌. ಮಾರುಕಟ್ಟೆ ಅಭಿವೃದ್ಧಿ, 20 ಕೋಟಿಯಲ್ಲಿ ಕಬ್ಬನ್‌ ಉದ್ಯಾನದ ಅಪರೂಪದ ಸಸ್ಯಗಳ ವೈವಧ್ಯತೆಯಿಂದ ಕೂಡಿದ ಜಾಗದ ಸಂರಕ್ಷಣೆ ಮತ್ತು ಮರು ಅಭಿವೃದ್ಧಿ, 28.65 ಕೋಟಿಯಲ್ಲಿ ಕೊಳಚೆ ಪ್ರದೇಶದಲ್ಲಿ ವಸತಿ ಸೌಲಭ್ಯ ಹೆಚ್ಚಿಸುವುದು, 30 ಕೋಟಿ ವೆಚ್ಚದಲ್ಲಿ ಬೆನ್ನಿಗಾನಹಳ್ಳಿ, ಹಲಸೂರು ಕೆರೆ, ಸ್ಯಾಂಕಿ ಕೆರೆ, ಬೆನ್ನಿಗಾನಹಳ್ಳಿ ಕೆರೆ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿತ್ತು.

ಪರಿಷ್ಕೃತ ಯೋಜನೆ: ಪರಿಷ್ಕರಣೆ ಪರಿಣಾಮ ಮುಖ್ಯವಾಗಿ 640 ಕೋಟಿ ವೆಚ್ಚದಲ್ಲಿ ಟೆಂಡರ್‌ ಶ್ಯೂರ್‌ ರಸ್ತೆ ನಿರ್ಮಾಣ, 250 ಕೋಟಿ ವೆಚ್ಚದಲ್ಲಿ ಕಮಾಂಡ್‌ ಸೆಂಟರ್‌, 70 ಕೋಟಿಯಲ್ಲಿ ಕೆ.ಆರ್‌.ಮಾರುಕಟ್ಟೆ ಮರು ಅಭಿವೃದ್ಧಿಯನ್ನು ಮಾತ್ರ ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಪಟ್ಟಿಯನ್ನು ಸೋಮವಾರ ಕೇಂದ್ರ ಸರ್ಕಾರಕ್ಕೆ ರಾಜ್ಯದ ಕೆಯುಐಡಿಎಫ್ಸಿ ಸಲ್ಲಿಸಲಿದೆ.

ಆದರೆ, ಈ ಪೈಕಿ ಸ್ಮಾರ್ಟ್‌ರಸ್ತೆ ಮಾತ್ರ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳಲಿದೆ. ಕೆ.ಆರ್‌. ಮಾರುಕಟ್ಟೆ ಪುನರ್‌ ಅಭಿವೃದ್ಧಿ ಕಾರ್ಯ ವಿಳಂಬವಾಗಲಿದೆ. ಇನ್ನು ಒಂದೇ ಕಡೆ ಕುಳಿತು ನಿಯಂತ್ರಿಸಬಹುದಾದ ವ್ಯವಸ್ಥೆ ಕಮಾಂಡ್‌ ಸೆಂಟರ್‌. ಈಗಾಗಲೇ ಸಂಚಾರ, ಜಲಮಂಡಳಿ ಮತ್ತಿತರ ವ್ಯವಸ್ಥೆಯಲ್ಲಿ ಇದು ಚಾಲ್ತಿಯಲ್ಲಿದೆ. ಎಲ್ಲವನ್ನೂ ಸೇರಿ ಕಮಾಂಡ್‌ ಸೆಂಟರ್‌ ರೂಪಿಸಲು ಉದ್ದೇಶಿಸಲಾಗಿದೆ. 

ಇದಲ್ಲದೆ, 750 ಕೋಟಿ ರೂ. ವೆಚ್ಚದಲ್ಲಿ ಇ-ಶೌಚಾಲಯಗಳು, ಬಹುಮಹಡಿ ವಾಹನ ನಿಲುಗಡೆ ವ್ಯವಸ್ಥೆ ಮತ್ತಿತರ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗುವುದು. ಒಟ್ಟಾರೆ ಈ ಮೊದಲು ಸ್ಮಾರ್ಟ್‌ಸಿಟಿ ಅಡಿ ಬೆಂಗಳೂರಿಗೆ 2,219 ಕೋಟಿ ರೂ. ಮೀಸಲಿಡಲಾಗಿತ್ತು. ಇದು ಈಗ 2,150 ಕೋಟಿ ರೂ.ಗೆ ಸೀಮಿತವಾಗಿದೆ. ಈಗಾಗಲೇ 100 ಕೋಟಿ ರೂ. ಬಿಡುಗಡೆಯಾಗಿದ್ದು, ಇದರಲ್ಲಿ ಕೇಂದ್ರದ ಹಣ 50 ಕೋಟಿ ರೂ. ಇದೆ. ಮುಂದಿನ ಕಂತಿನ ಹಣ ಬಿಡುಗಡೆ ಆಗಬೇಕಾದರೆ, ಈಗಾಗಲೇ ನೀಡಿದ ಅನುದಾನದಲ್ಲಿ ಶೇ. 70ರಷ್ಟು ವಿನಿಯೋಗಿಸಿರಬೇಕು. 

ಪರಿಷ್ಕೃತ ಪಟ್ಟಿಯಲ್ಲಿನ ಯೋಜನೆಗಳು
ಯೋಜನೆ    ವೆಚ್ಚ

-56 ಕಿ.ಮೀ ಸ್ಮಾರ್ಟ್‌ ರಸ್ತೆ    640 ಕೋಟಿ ರೂ.
-ಕೆ.ಆರ್‌.ಮಾರುಕಟ್ಟೆ ಅಭಿವೃದ್ಧಿ    70 ಕೋಟಿ ರೂ.
-ಕಮಾಂಡ್‌ ಸೆಂಟರ್‌    250 ಕೋಟಿ ರೂ.

* ವಿಜಯಕುಮಾರ್‌ ಚಂದರಗಿ 

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.