ಒಲ್ಲದ ಮನಸ್ಸಿನಿಂದ ಪೂನಾ ಒಪ್ಪಂದಕ್ಕೆ ಸಹಿ
Team Udayavani, Sep 25, 2018, 12:03 PM IST
ಬೆಂಗಳೂರು: ಇಕ್ಕಟ್ಟಿನ ಪರಿಸ್ಥಿತಿಗೆ ಸಿಲುಕಿ ಪೂನಾ ಒಡಂಬಡಿಕೆಗೆ ಸಹಿ ಹಾಕಿದ ಡಾ.ಬಿ.ಆರ್.ಅಂಬೇಡ್ಕರ್, ಆ ದಿನವನ್ನು ತಳ ಸಮುದಾಯಗಳ ಪಾಲಿನ ಕರಾಳ ದಿನ ಎಂದು ಕರೆಯುತ್ತಿದ್ದರು ಎಂದು ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ತಿಳಿಸಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ಕನ್ನಡ ಸಾಹಿತ್ಯ ಪರಿಷತ್ನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ 1932 ಪೂನಾ ಒಡಂಬಡಿಕೆ ಅಂದು-ಇಂದು? ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಳ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಅಂಬೇಡ್ಕರ್ ಸವರ್ಣೀಯರಿಗೆ ದ್ವಿಮತದಾನ ಸೇರಿ ಹಲವು ಹಕ್ಕುಗಳಿಗೆ ಬೇಡಿಕೆ ಇಟ್ಟಿದ್ದರು.
ಆದರೆ, ದ್ವಿಮತದಾನದಿಂದ ವ್ಯವಸ್ಥೆಯಲ್ಲಿ ಅಸಮಾನತೆ ಉಂಟಾಗುತ್ತದೆ ಎಂದು ಅಂಬೇಡ್ಕರ್ ಅವರ ಬೇಡಿಕೆಗಳಿಗೆ ಒಪ್ಪದ ಗಾಂಧೀಜಿ, ಉಪವಾಸ ಸತ್ಯಾಗ್ರಹ ಆರಂಭಿಸಿದರು. ಗಾಂಧೀಜಿ ಸತ್ಯಾಗ್ರಹ ತೀವ್ರವಾಗುತ್ತಿದ್ದಂತೆ ಅಂದಿನ ಪ್ರಮುಖ ಮುಖಂಡರು ಬೇಡಿಕೆ ಹಿಂಪಡೆಯಲು ಒತ್ತಡ ಹಾಕಿದರು. ಇದಕ್ಕೆ ಕಟ್ಟುಬಿದ್ದು ಅಂಬೇಡ್ಕರ್ ಒಲ್ಲದ ಮನಸ್ಸಿನಿಂದ ಪೂನಾ ಒಪ್ಪಂದಕ್ಕೆ ಸಹಿ ಹಾಕಿ ನಮ್ಮ ಜನರ ಪಾಲಿನ ಕರಾಳ ದಿನ ಕರೆದಿದ್ದರು ಎಂದು ಹೇಳಿದರು.
ದಲಿತರಿಗೆ ರಾಜಕೀಯ ಸ್ಥಾನಮಾನ ಸಿಕ್ಕರೆ ಮಾತ್ರ ಅಭಿವೃದ್ಧಿ ಸಾಧ್ಯವೆಂದು ತಿಳಿದಿದ್ದ ಅಂಬೇಡ್ಕರ್ ದ್ವಿಮತದಾನಕ್ಕೆ ಬೇಡಿಕೆ ಇಟ್ಟಿದ್ದರು. ಅದು ಸಾಧ್ಯವಾಗದೆ ಕೇವಲ ಚುನಾವಣಾ ಮೀಸಲು ಕ್ಷೇತ್ರ ಅವಕಾಶ ಲಭ್ಯವಾಯಿತು. ಆದರೆ, ಆ ಕ್ಷೇತ್ರಗಳಲ್ಲಿ ಇಂದಿಗೂ ಗೆಲುವು ಸಾಧಿಸಲು ಮೇಲ್ವರ್ಗದವರ ಕೈಚಾಚಬೇಕಿದೆ. ಅವರ ವಿರೋಧ ಕಟ್ಟಿಕೊಂಡು ಗೆದ್ದವರೇ ಇಲ್ಲ.
ಇದಕ್ಕೆ ಮುಖ್ಯಕಾರಣ ಒಗ್ಗಟ್ಟಿನ ಕೊರತೆ. ಇನ್ನು ರಾಜ್ಯದಲ್ಲಿ 36 ಮೀಸಲು ಕ್ಷೇತ್ರಗಳಿದ್ದು, ಅವುಗಳಿಂದ ಆಯ್ಕೆಯಾಗಿ ಬಂದವರು ಒಗ್ಗಟ್ಟಿನಿಂದ ನಿಂತರೆ ತಳ ಸಮುದಾಯಗಳ ಅಭಿವೃದ್ಧಿ ಕಷ್ಟವೇನಲ್ಲ ಎಂದು ಅಭಿಪ್ರಾಯಪಟ್ಟರು. ಭಾರತೀಯ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ ಡಾ.ಮನೋಹರ ಯಾದವ್ ಮಾತನಾಡಿ, ಇಂದು ಊರುಗಳಲ್ಲಿ ರಸ್ತೆ, ಮನೆಗಳ ರೂಪ ಬದಲಾಗಿರಬಹುದು ಜಾತಿ ಮನಸ್ಥಿತಿ ಬದಲಾಗಿಲ್ಲ.
ಅದಕ್ಕಾಗಿಯೇ ಕರ್ನಾಟಕದಲ್ಲಿ ಇಂದಿಗೂ ದಲಿತರೊಬ್ಬರು ಮುಖ್ಯಮಂತ್ರಿಯಾಗಲಿಲ್ಲ. ದಲಿತರಿಗಾಗಿ ಒಂದು ಸಹಕಾರಿ ಬ್ಯಾಂಕ್ ಇಲ್ಲ ಎಂದು ಹೇಳಿದರು. ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ಬರಹಗಾರ ಸುರೇಶ್ ಗೌತಮ್, ಪತ್ರಕರ್ತೆ ಶಾಂತಕುಮಾರಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?