ಗಂಗಾಂಬಿಕೆ ಮೇಯರ್‌ ಅಭ್ಯರ್ಥಿ?


Team Udayavani, Sep 25, 2018, 12:03 PM IST

gangambike-mallikarjun.jpg

ಬೆಂಗಳೂರು: ಬಿಬಿಎಂಪಿ ಮೇಯರ್‌ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಬುಧವಾರ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ನಗರ ಶಾಸಕರು ಹಾಗೂ ಪಾಲಿಕೆ ಸದಸ್ಯರ ಸಭೆ ನಡೆಯಲಿದೆ. ಸಭೆಯಲ್ಲಿ ಮೇಯರ್‌ ಸ್ಥಾನದ ಆಕಾಂಕ್ಷಿಗಳ ಪೈಕಿ ಯಾರನ್ನು ಮೇಯರ್‌ ಅಭ್ಯರ್ಥಿ ಮಾಡಬೇಕು ಎಂಬುದು ತೀರ್ಮಾನವಾಗಲಿದೆ. 

ಸದ್ಯದ ಮಾಹಿತಿಯಂತೆ ಜಯನಗರ ವಾರ್ಡ್‌ನ ಗಂಗಾಬಿಕೆ ಮಲ್ಲಿಕಾರ್ಜುನ್‌ ಮೇಯರ್‌ ಅಭ್ಯರ್ಥಿಯ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದು, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹಾಗೂ ನಗರದ ಪ್ರಭಾವಿ ಶಾಸಕ ರಾಮಲಿಂಗಾರೆಡ್ಡಿ ಅವರು ಗಂಗಾಬಿಕೆ ಅವರ ಹೆಸರನ್ನು ಮೇಯರ್‌ ಸ್ಥಾನಕ್ಕೆ ಶಿಫಾರಸ್ಸು ಮಾಡಿದ್ದಾರೆ ಎನ್ನಲಾಗಿದೆ. 

ಇನ್ನು ಶಾಂತಿನಗರ ವಾರ್ಡ್‌ನ ಸೌಮ್ಯಾ ಶಿವಕುಮಾರ್‌ ಸಹ ಮೇಯರ್‌ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಕಳೆದ ಬಾರಿ ಪಕ್ಷದ ನಾಯಕರ ತೀರ್ಮಾನದಂತೆ ಮೇಯರ್‌ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದು, ಈ ಬಾರಿಯಾದರೂ ಅವಕಾಶ ನೀಡುವಂತೆ ಪಕ್ಷದ ನಾಯಕರ ಮೇಲೆ ಪ್ರಭಾವ ತರುತ್ತಿದ್ದಾರೆ ಎನ್ನಲಾಗಿದ್ದು, ಸೌಮ್ಯಾ ಅವರನ್ನು ಮೇಯರ್‌ ಅಭ್ಯರ್ಥಿ ಮಾಡಲು ಶಾಂತಿನಗರ ಶಾಸಕ ಎನ್‌.ಎ.ಹ್ಯಾರೀಸ್‌ ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಉಪಮೇಯರ್‌ ಆಕಾಂಕ್ಷಿಗಳು 12 ಮಂದಿ!: ಮೇಯರ್‌ ಸ್ಥಾನದಂತೆ ಉಪಮೇಯರ್‌ ಸ್ಥಾನಕ್ಕೆ ಜೆಡಿಎಸ್‌ನಲ್ಲಿ ಪೈಪೋಟಿ ಹೆಚ್ಚಾಗಿದ್ದು, ಉಪಮೇಯರ್‌ ಅಭ್ಯರ್ಥಿ ಆಯ್ಕೆಗೂ ಬುಧವಾರ ಅಥವಾ ಗುರುವಾರ ಸಭೆ ನಡೆಯಲಿದೆ. ಪಾಲಿಕೆಯ 15 ಜೆಡಿಎಸ್‌ ಸದಸ್ಯರ ಪೈಕಿ ಈಗಾಗಲೆ 3 ಸದಸ್ಯರು ಉಪಮೇಯರ್‌ ಹುದ್ದೆ ಪಡದಿದ್ದಾರೆ. ಇದೀಗ ಉಪಮೇಯರ್‌ ಹುದ್ದೆಗೆ ಮೀಸಲಾತಿ ಸಾಮಾನ್ಯವಾಗಿದ್ದು, 12 ಸದಸ್ಯರೂ ಈ ಬಾರಿ ತಮಗೆ ಉಪಮೇಯರ್‌ ಸ್ಥಾನ ಪಡೆಯಲು ಲಾಬಿ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.