ಇನ್ನೂ ಎರಡು ದಿನ ಮಳೆ ಅಬ್ಬರ
Team Udayavani, Sep 25, 2018, 12:04 PM IST
ಬೆಂಗಳೂರು: ವಾತಾವರಣದಲ್ಲಿ ಉಂಟಾದ ಬದಲಾವಣೆಗಳಿಂದ ಕಡಿಮೆ ಒತ್ತಡದ ತಗ್ಗು (ಟ್ರಫ್) ಮತ್ತು ಚಂಡಮಾರುತದ ಪರಿಚಲನೆಯಿಂದಾಗಿ ಭಾನುವಾರ ಹಾಗೂ ಸೋಮವಾರ ಧಾರಾಕಾರ ಮಳೆಯಾಗಿದ್ದು, ಮುಂದಿನ ಎರಡು ದಿನ ಕೂಡ ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ದಕ್ಷಿಣ ಭಾಗ, ತಮಿಳುನಾಡು ಹಾಗೂ ಕೇರಳ ಭಾಗದಲ್ಲಿ ಗಾಳಿಯ ಒತ್ತಡ (ವಿಂಡ್ ಡಿ ಕನೆಕ್ಟ್) ಕಡಿಮೆಯಾದ ಪರಿಣಾಮ ಹೆಚ್ಚಿನ ಮಳೆಯಾಗಿದೆ. ಅದರಂತೆ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ.
ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯ ಹಲವಾರು ಭಾನುವಾರ ಸುರಿದ ಮಳೆಗೆ ಚಂಡಮಾರುತ ಕಾರಣವಲ್ಲ.
ಬದಲಿಗೆ ವಾತಾವರಣದಲ್ಲಿ ಉಂಟಾದ ಬದಲಾವಣೆಗಳಿಂದ ಕಡಿಮೆ ಒತ್ತಡದ ತಗ್ಗು ನಿರ್ಮಾಣವಾಗಿದ್ದು, ಭಾರಿ ಮಳೆಗೆ ಕಾರಣವಾಗಿದೆ. ಇನ್ನು ಎರಡು ದಿನಗಳು ಇದೇ ರೀತಿಯ ವಾತಾವರಣ ಮುಂದುವರಿಲಿದ್ದು, ರಾಜ್ಯದ ಹಲವೆಡೆ ಸಾಧಾರಣದಿಂದ ಕೂಡಿದ ಹಗುರ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರಲ್ಲೂ ಭಾರೀ ಮಳೆ: ಮೇಲ್ಮೆ„ಸುಳಿಗಾಳಿಯಿಂದಾಗಿ ಭಾನುವಾರ ಹಲವಾರು ಭಾಗಗಳಲ್ಲಿ ಭಾರಿ ಮಳೆಯಾಗಿದೆ. ಬೆಂಗಳೂರು ನಗರ ಜಿಲ್ಲೆಯ ಹಲವಾರು ಭಾಗಗಳಲ್ಲಿ ಮುಂದಿನ ಎರಡು ದಿನಗಳು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನ ಹಲವೆಡೆಯೂ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಕೇಂದ್ರದ ನಿರ್ದೇಶಕಿ ಗೀತಾ ಅಗ್ನಿಹೋತ್ರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ