ಸಾವಿನಲ್ಲಿ ಅಂತ್ಯಗೊಂಡ ಟೆಕ್ಕಿ ಸಹಜೀವನ


Team Udayavani, Sep 26, 2018, 12:41 PM IST

savinalli.jpg

ಬೆಂಗಳೂರು: ಸಾಫ್ಟ್ವೇರ್‌ ಇಂಜಿನಿಯರ್‌ಗಳಿಬ್ಬರ ನಾಲ್ಕು ವರ್ಷಗಳ “ಲಿವಿಂಗ್‌ ಟುಗೆದರ್‌’ ಸಂಬಂಧ ಯುವಕನ ಸಾವಿನಲ್ಲಿ ಅಂತ್ಯಗೊಂಡಿದೆ.

ದೊಡ್ಡತೋಗೂರಿನ ಶ್ರೀವಾರಿ ಅಪಾರ್ಟ್‌ಮೆಂಟ್‌ನಲ್ಲಿ ಸಹಜೀವನ ನಡೆಸುತ್ತಿದ್ದ ಯುವತಿಯ ಜತೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿಕೊಂಡು ಆಕೆಯನ್ನು ಫ್ಲ್ಯಾಟ್‌ನಿಂದ ಹೊರಹಾಕಿ ಒಳಗಿನಿಂದ ಡೋರ್‌ಲಾಕ್‌ ಮಾಡಿಕೊಂಡ ನಂಜನಗೂಡು ಮೂಲದ ಚಂದ್ರಶೇಖರ್‌ (33) ಸೋಮವಾರ ರಾತ್ರಿ 8-30ರ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತನ್ನ ಸಾವಿನ ಕುರಿತು ಎರಡು ಪುಟಗಳ ಡೆತ್‌ನೋಟ್‌ ಬರೆದಿರುವ ಚಂದ್ರಶೇಖರ್‌, ಈ ಜೀವನದಲ್ಲಿ ಅತ್ಯಂತ ಬೇಸರಗೊಂಡಿದ್ದೇನೆ. ಬದುಕಲು ಇಷ್ಟವಿಲ್ಲ. ಹೀಗಾಗಿ, ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿದ್ದಾನೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾವಿಗೂ ಮುನ್ನ ಪರಸ್ಪರ ಹೊಡೆದಾಟ!: ಸೋಮವಾರ ಸಂಜೆ ಇಬ್ಬರ ನಡುವೆಯೂ ಜಗಳವಾಗಿದ್ದು ಚಂದ್ರಶೇಖರ್‌ ಹಾಗೂ ಶ್ರುತಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಆಕೆಯ ಮೈ ಮೇಲೆ ಬಾಸುಂಡೆ ರೀತಿಯ ಗಾಯಗಳಾಗಿದ್ದು, ಕೈ ಕಾಲಿನಲ್ಲಿಯೂ ಹೊಡೆತದ ಗುರುತುಗಳಿವೆ. ಬಳಿಕ ಆಕೆಯ ತಲೆ, ಕೈ ಕಾಲುಗಳಿಗೆ ದೊಡ್ಡದಾದ ಫ್ಲಾಸ್ಟರ್‌ ಅಂಟಿಸಿದ್ದಾನೆ. ಆತನೂ ರಕ್ತಬರದಂತೆ ಕೈಗೆ ಅಂಟಿಸಿಕೊಂಡಿದ್ದಾನೆ.

ಬಳಿಕ ಜಗಳ ವಿಕೋಪಕ್ಕೆ ರಾತ್ರಿ 8ಗಂಟೆ ಸುಮಾರಿಗೆ ಶ್ರುತಿಯನ್ನು ಫ್ಲ್ಯಾಟ್‌ನಿಂದ ಹೊರದಬ್ಬಿ ಅವಾಚ್ಯ ಪದಗಳಿಂದ ನಿಂದಿಸಿ ಒಳಗಿನಿಂದ ಡೋರ್‌ ಲಾಕ್‌ ಮಾಡಿಕೊಂಡು ಬಳಿಕ ಕೊಠಡಿಗೆ ತೆರಳಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊರಗಡೆಯೇ ಇದ್ದ  ಶ್ರುತಿ 20 ನಿಮಿಷ ಬಿಟ್ಟು, ಬಾಗಿಲು ತೆರೆಯುವಂತೆ ಕೂಗಿದ್ದಾರೆ. ಒಳಗಡೆಯಿಂದ ಪ್ರತಿಕ್ರಿಯೆ ಬಾರದಿದ್ದಕ್ಕೆ ಕಿಟಕಿಯಿಂದ ನೋಡಿದಾಗ ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. 

ಚಂದ್ರು ನೇಣುಹಾಕಿಕೊಂಡಿರುವುದನ್ನು ನೋಡತ್ತಲೇ ಆಘಾತಗೊಂಡು ಅಕ್ಕ-ಪಕ್ಕದ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅವರ ಸಹಾಯದಿಂದ ಬಾಗಿಲು ಹೊಡೆದು ಒಳನುಗ್ಗಿ ಆತನನ್ನು ಕೆಳಗಿಳಿಸಿ ಉಸಿರಾಡುವಂತೆ ಮಾಡಲು ಪ್ರಯತ್ನಿಸಲಾಯಿತು. ಬಳಿಕ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದೆವು. ಆದರೆ, ವೈದ್ಯರು ಮೃತಪಟ್ಟಿರುವುದನ್ನು ದೃಢಪಡಿಸಿದರು ಎಂದು ಯುವತಿ ಹೇಳಿದ್ದಾಳೆ ಎಂದು ಅಧಿಕಾರಿಗಳು ವಿವರಿಸಿದರು. 

ಮೃತ ಚಂದ್ರಶೇಖರ್‌ ತಂದೆ ಶಿವಪ್ಪ ನೀಡಿದ ದೂರಿನ ಮೇರೆಗೆ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ಪೋಷಕರಿಗೆ ಹಸ್ತಾಂತರಿಸಲಾಗಿದೆ. ಶ್ರುತಿಯನ್ನು ಅವರ ತಂದೆ ಮನೆಗೆ ಕರೆದೊಯ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಕಣ್ಣೀರಿಟ್ಟ ತಂದೆ!: ಶಿವಪ್ಪ ದಂಪತಿಗೆ ಚಂದ್ರಶೇಖರ್‌ ಒಬ್ಬನೇ ಮಗನಾಗಿದ್ದ. ವಿಷಯ ತಿಳಿದ ಕೂಡಲೇ ಬಂದ ಅವರು ಮಗನ ಶವ ನೋಡುತ್ತಲೇ ದಿಗ್ಭ್ರಾಂತಿಗೆ ಒಳಗಾಗಿ, ಒಬ್ಬನೇ ಮಗ ಆತನ ಸಂತೋಷದ ಜೀವನ ನೋಡಲು ಆಗಲೇ ಇಲ್ಲ ಎಂದು ಕಣ್ಣೀರು ಹಾಕಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಹಲವು ಬಾರಿ ಠಾಣೆ ಮೆಟ್ಟಿಲೇರಿದ್ದ ಜೋಡಿ!: ನಂಜನಗೂಡು ಮೂಲದ ಚಂದ್ರಶೇಖರ್‌ ಹಾಗೂ ಮೈಸೂರು ಮೂಲದ ಶ್ರುತಿ ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗಿಗಳಾಗಿದ್ದಾಗ  ಐದು ವರ್ಷಗಳ ಹಿಂದೆ ಪ್ರೀತಿಸಿದ್ದರು. ಬಳಿಕ ನಾಲ್ಕು ವರ್ಷಗಳಿಂದ ಸಹಜೀವನ ನಡೆಸುತ್ತಿದ್ದರು. ಕಳೆದ ಒಂದೂವರೆ ವರ್ಷದ ಹಿಂದೆ ಶ್ರಿವಾರಿ ಅಪಾರ್ಟ್‌ಮೆಂಟ್‌ಗೆ ಶಿಫ್ಟ್ ಆಗಿದ್ದರು.

ಇಬ್ಬರು ನಡುವೆಯೂ ಕ್ಷುಲ್ಲಕ ಕಾರಣಗಳಿಗೆ ಜಗಳವಾಗಿದ್ದು, ಪೊಲೀಸ್‌ ಠಾಣೆ ಮೆಟ್ಟಿಲೇರುತ್ತಿದ್ದರು. ಬಳಿಕ ಅವರೇ ರಾಜಿಯಾಗಿ ಹೋಗುತ್ತಿದ್ದರು. ಇಬ್ಬರೂ ಜಗಳಕ್ಕೆ ನಿಖರ ಕಾರಣ ತಿಳಿಸುತ್ತಿರಲಿಲ್ಲ. ದೂರು ನೀಡುವ ಮುನ್ನವೇ ವಾಪಾಸ್‌ ಹೋಗುತ್ತಿದ್ದರು. ಇಬ್ಬರ ರಿಲೇಶನ್‌ಶಿಪ್‌ ಬಗ್ಗೆ ಎರಡೂ ಮನೆಯ ಪೋಷಕರಿಗೂ ತಿಳಿದಿತ್ತು ಎಂದು ಪೊಲೀಸರು ತಿಳಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.