ನಗರದಲ್ಲಿ ಅವಾಂತರ ಸೃಷ್ಟಿಸಿದ ವರ್ಷಧಾರೆ


Team Udayavani, Sep 26, 2018, 12:42 PM IST

nagaradalli.jpg

ಬೆಂಗಳೂರು: ನಗರದಲ್ಲಿ ಸೋಮವಾರದ ಮಳೆ ಸೃಷ್ಟಿಸಿದ ಅವಾಂತರದ ಬಿಸಿ ಮಂಗಳವಾರ ಕೂಡ ತಟ್ಟಿತು. ಕೆಲವು ತಗ್ಗುಪ್ರದೇಶಗಳಲ್ಲಿ ಬೆಳಗಿನಜಾವ ಕೂಡ ನೀರಿನ ಪ್ರಮಾಣ ತಗ್ಗಿರಲಿಲ್ಲ. ಪರಿಣಾಮ ಕೆಲಸಕ್ಕೆ ತೆರಳಲು ಜನ ಪರದಾಡಿದರು. 

ಬಿಳೇಕಹಳ್ಳಿ, ಹೆಬ್ಟಾಳ ಮೆಲ್ಸೇತುವೆ, ರಾಜಾಜಿನಗರ, ಮಲ್ಲೇಶ್ವರ ಸೇರಿದಂತೆ ಮತ್ತಿತರ ಪ್ರದೇಶಗಳ ಆಯ್ದ ಭಾಗಗಳು ಜಲಾವೃತಗೊಂಡು, ಬೆಳಗ್ಗೆ ರಸ್ತೆಗಿಳಿದ ಜನರ ಓಟಕ್ಕೆ ಬ್ರೇಕ್‌ ಹಾಕಿತು. ಕೆಲವೆಡೆ ಮನೆಯಿಂದ ಹೊರಬರಲಿಕ್ಕೆ ಆಗಲಿಲ್ಲ. ಇನ್ನು ಹಲವೆಡೆ ಸಂಚಾರ ದಟ್ಟಣೆಯಿಂದ ಜನ ಗಂಟೆಗಟ್ಟಲೆ ರಸ್ತೆಯಲ್ಲಿ ಕಾಲಕಳೆದರು.

ಬಿಳೇಕಹಳ್ಳಿಯ ವಂದನ ಓನೆಕ್ಸ್‌ ಅಪಾರ್ಟ್‌ಮೆಂಟ್‌ ಅಕ್ಷರಶಃ ದ್ವೀಪವಾಗಿ ಮಾರ್ಪಟ್ಟಿತು. ನೆಲಮಹಡಿಯಲ್ಲಿದ್ದ ವಾಹನಗಳು ನೀರಿನಲ್ಲಿ ತೇಲಾಡಿದವು. ಮನೆ ನಲ್ಲಿಯಲ್ಲಿ ಕೊಳಚೆ ನೀರು ಬರುತ್ತಿದೆ. ಆಫೀಸ್‌ಗೆ ಹೋಗೋಕೆ ಆಗುತ್ತಿಲ್ಲ, ಮಕ್ಕಳನ್ನು ಶಾಲೆಗೆ ಕಳಿಸೋಕೆ ಆಗುತ್ತಿಲ್ಲ. ಒಂದು ಕಿ.ಮೀ. ದೂರದ ನೀರೆಲ್ಲವೂ ಅಪಾರ್ಟ್‌ಮೆಂಟ್‌ಗೆ ಬರುತ್ತಿದೆ ಎಂದು ಅಪಾರ್ಟ್‌ಮೆಂಟ್‌ ನಿವಾಸಿ ಚೌಧರಿ ಆಕ್ರೋಶ ವ್ಯಕ್ತಪಡಿಸಿದರು. 

ಇನ್ನು ಹೆಬ್ಟಾಳ ಮೇಲ್ಸೇತುವೆ ಕಳಗೆ ನೀರು ನಿಂತು ಮುಖ್ಯರಸ್ತೆ ಸಂಪೂರ್ಣ ಜಲಾವೃತಗೊಂಡಿತು. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಕಡೆಯಿಂದ ಹೆಬ್ಟಾಳದ ಕಡೆ ಹೋಗಲು ಸಾರ್ವಜನಿಕರು ಹರಸಾಹಸಪಟ್ಟರು. ಗಂಟೆಗಟ್ಟಲೆ ಈ ಮಾರ್ಗದಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ವಿವಿಧ ಅಂಡರ್‌ಪಾಸ್‌ಗಳಲ್ಲಿ ಮೊಣಕಾಲುವರೆಗೂ ನೀರು ನಿಂತಿದ್ದರಿಂದ ವಾಹನ ಸಂಚಾರ ಕೆಲವೆಡೆ ನಿರ್ಬಂಧಿಸಲಾಗಿತ್ತು. ನವರಂಗ್‌ ಬಳಿ ಪಾದಚಾರಿ ಮಾರ್ಗ ಕುಸಿದ ಬಗ್ಗೆ ವರದಿಯಾಗಿದೆ. ಬೊಮ್ಮನಹಳ್ಳಿ ವ್ಯಾಪ್ತಿಯ ಅನುಗ್ರಹ ಲೇಔಟ್‌ 1ನೇ ಹಂತದಲ್ಲಿ ಮನೆಗಳಿಗೆ ನೀರುಗಿದ್ದ ಹಿನ್ನೆಲೆ ಅಲ್ಲಿನ ನಿವಾಸಿಗಳು ಆತಂಕದಲ್ಲಿ ರಾತ್ರಿ ಕಳೆದರು. 

ತಿಂಗಳಾಂತ್ಯದವರೆಗೆ ಮಳೆ?: ಈ ಮಧ್ಯೆ ಮಂಗಳವಾರ ಮಳೆ ಅಬ್ಬರಿಸಿದ್ದು, ತಿಂಗಳಾಂತ್ಯದವರೆಗೂ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಟ್ರಫ್ ಮತ್ತು ಚಂಡಮಾರುತದ ಪರಿಚಲನೆ ಕಂಡುಬಂದ ಹಿನ್ನೆಲೆಯಲ್ಲಿ ಮಳೆಯಾಗುತ್ತಿದ್ದು, ಇನ್ನೂ ಎರಡು-ಮೂರು ದಿನಗಳು ಇದು ಮುಂದುವರಿಯಲಿದೆ. ಮಂಗಳವಾರ ಬೆಳಿಗ್ಗೆ 25.4 ಮಿ.ಮೀ. ಮಳೆ ದಾಖಲಾಗಿದ್ದು, ಇಡೀ ತಿಂಗಳಲ್ಲಿ 193 ಮಿ.ಮೀ.ಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಇನ್ನು ಮಂಗಳವಾರ ಸಂಜೆ ಕಗ್ಗಲಿಪುರದಲ್ಲಿ 32 ಮಿ.ಮೀ., ದೊಡ್ಡಗುಬ್ಬಿಯಲ್ಲಿ 11 ಮಿ.ಮೀ., ಎಚ್‌. ಗೊಲ್ಲಹಳ್ಳಿ, ಬೆಟ್ಟ ಹಲಸೂರಿನಲ್ಲಿ 8 ಮಿ.ಮೀ., ಸೀಗೇಹಳ್ಳಿಯಲ್ಲಿ 6 ಮಿ.ಮೀ., ದೊಡ್ಡಜಾಲದಲ್ಲಿ 5 ಮಿ.ಮೀ., ಚಿಕ್ಕನಹಳ್ಳಿಯಲ್ಲಿ 4 ಮಿ.ಮೀ., ಬಸವೇಶ್ವರನಗರ, ಯಕಹಂಕ, ಮಾರೇನಹಳ್ಳಿಯಲ್ಲಿ 3 ಮಿ.ಮೀ. ಮಳೆ ಬಿದ್ದಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.