ಕಳಪೆ ಕಾಮಗಾರಿ: ಗುತ್ತಿಗೆದಾರರಿಗೆ ಲಕ್ಷ ರೂ. ದಂಡ


Team Udayavani, Oct 4, 2018, 12:07 PM IST

blore-8.jpg

ಬೆಂಗಳೂರು: ಹೈಕೋರ್ಟ್‌ ಮಧ್ಯ ಪ್ರವೇಶದ ನಂತರವೂ ವೈಜ್ಞಾನಿಕವಾಗಿ ರಸ್ತೆಗುಂಡಿ ಮುಚ್ಚದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮೇಯರ್‌ ಗಂಗಾಂಬಿಕೆ ಅವರು, ಸಮರ್ಪಕವಾಗಿ ಕಾಮಗಾರಿ ನಡೆಸದ ಗುತ್ತಿಗೆದಾರರಿಗೆ ಸ್ಥಳದಲ್ಲೇ ಒಂದು ಲಕ್ಷ ರೂ. ದಂಡ ಹಾಕಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಪಾಲಿಕೆಯಿಂದ ನಗರದಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳ ಪರಿಶೀಲನೆಗಾಗಿ ಪೂರ್ವ ವಲಯ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ದ್ವಿಚಕ್ರ ವಾಹನದಲ್ಲಿ ಸಂಚಾರ ನಡೆಸಿದ ಅವರು, ರಸ್ತೆಗುಂಡಿ ದುರಸ್ತಿ, ಜಾಹೀರಾತು ಫ‌ಲಕ (ಸ್ಟ್ರಕ್ಚರ್‌) ತೆರವು, ಒಎಫ್ಸಿ ಕೇಬಲ್‌, ಕೆಳಸೇತುವೆಗಳ ನಿರ್ವಹಣೆ ಸೇರಿದಂತೆ ಇತರೆ ಕಾಮಗಾರಿಗಳನ್ನು ಪರಿಶೀಲಿಸಿದರು.

ಮೊದಲಿಗೆ ಜಯಮಹಲ್‌ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾಮಗಾರಿ ವೀಕ್ಷಿಸಿದ ಅವರು, ಸಮರ್ಪಕವಾಗಿ ಗುಂಡಿಗಳನ್ನು ದುರಸ್ತಿಪಡಿಸದಿರುವುದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಜತೆಗೆ ಕೂಡಲೇ ಸಂಬಂಧಪಟ್ಟ ಗುತ್ತಿಗೆದಾರರಿಂದ ಒಂದು ಲಕ್ಷ ರೂ. ಸಂಗ್ರಹಿಸಿ ರಶೀದಿ ಪಡೆಯಿರಿ ಎಂದು ತಾಕೀತು ಮಾಡಿದ ಅವರು, ನಗರದಾದ್ಯಂತ ಗುಂಡಿಗಳನ್ನು ವೈಜ್ಞಾನಿಕವಾಗಿ ಮುಚ್ಚದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ತಾವು ಸಂಚರಿಸಿದ ಬಹುತೇಕ ಮುಖ್ಯರಸ್ತೆಗಳಲ್ಲಿ ಬೀದಿ ದೀಪಗಳು ಇಲ್ಲದಿರುವುದನ್ನು ಕಂಡು ಕೋಪಗೊಂಡ ಅವರು, ಮುಖ್ಯರಸ್ತೆಗಳಲ್ಲಿಯೇ ಬೀದಿ ದೀಪಗಳ ನಿರ್ವಹಣೆ ಮಾಡದಿದ್ದರೆ, ಸಾರ್ವಜನಿಕರು ಹೇಗೆ ಓಡಾಡಬೇಕು. ಕೂಡಲೇ ಬೀದಿ ದೀಪ ನಿರ್ವಹಣೆ ಗುತ್ತಿಗೆದಾರರಿಗೆ 50 ಸಾವಿರ ರೂ. ದಂಡ ವಿಧಿಸುವಂತೆ ಸೂಚಿಸಿದರು. ಕೂಡಲೇ ಬೀದಿ ದೀಪಗಳನ್ನು ಸರಿಪಡಿಸುವಂತೆ ತಾಕೀತು ಮಾಡಿದರು.

ತಡರಾತ್ರಿವರೆಗೆ ತಪಾಸಣೆ: ಪಾಲಿಕೆಯ ಕೇಂದ್ರ ಕಚೇರಿಯಿಂದ ರಾತ್ರಿ 10.30ಕ್ಕೆ ನಗರದ ಪ್ರದಕ್ಷಿಣೆ ಪ್ರಾರಂಭಿಸಿದ ಮೇಯರ್‌ ತಡರಾತ್ರಿ 1.30ರವರೆಗೆ ಪರಿಶೀಲನೆ ನಡೆಸಿದರು. ವಿವಿಧ ಭಾಗಗಳಲ್ಲಿನ ಸಮಸ್ಯೆಗಳನ್ನು ಖುದ್ದಾಗಿ ಕಂಡ ಅವರು ತಕ್ಷಣವೇ ಸಮಸ್ಯೆ ನಿವಾರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
 
ಅದರಂತೆ ಕಸ್ತೂರ ಬಾ ರಸ್ತೆಯ ವಿಶ್ವೇಶ್ವರಯ್ಯ ವಸ್ತು ಸಂಗ್ರಹಾಲಯದ ಬಳಿ ಚರಂಡಿ ಕಾಮಗಾರಿ, ಕನ್ನಿಂಗ್‌ ಹ್ಯಾಮ್‌ ರಸ್ತೆ ಬಳಿ ಜಾಹೀರಾತು ಫ‌ಲಕದ ಚೌಕಟ್ಟು, ಹೆಬ್ಟಾಳ ರಸ್ತೆಯ ಗಂಗಾನಗರ ಬಳಿಯ ಕೆಳಸೇತುವೆ ಸೀಲಿಂಗ್‌ ಬಿಟ್ಟಿರುವುದನ್ನು ಶೀಘ್ರ ಸರಿಪಡಿಸುವಂತೆ ಸೂಚಿಸಿದರು. ಜತೆಗೆ ಆರ್‌.ಟಿ. ನಗರದ ಬಳಿಯ ಚರಂಡಿ ಕಾಮಗಾರಿಯನ್ನು
ತ್ವರಿತವಾಗಿ ಕೈಗೊಳ್ಳುವಂತೆ ಹೇಳಿದರು. 

ಸೂಚನೆಗಳನ್ನು ಏಕೆ ಪಾಲಿಸುತ್ತಿಲ್ಲ: ಕನ್ನಿಂಗ್‌ಹ್ಯಾಮ್‌ ರಸ್ತೆಯಲ್ಲಿ ಎಲ್ಲೆಂದರಲ್ಲಿ ಒಎಫ್ಸಿ ಕೇಬಲ್‌ ಅಳವಡಿಸಿರುವುದನ್ನು ಕಂಡು ಗರಂ ಅದ ಮೇಯರ್‌ ಮುಖ್ಯ ಇಂಜಿನಿಯರ್‌ ಪ್ರಸಾದ್‌ ಅವರನ್ನು ತರಾಟೆಗೆ ತೆಗೆದುಕೊಂಡರು. ಅನಧಿಕೃತವಾಗಿ ಅಳವಡಿಸಿರುವ ಕೇಬಲ್‌ಗ‌ಳನ್ನು ತೆರವು ಮಾಡಿ ಡಕ್ಟ್ಗಳಲ್ಲಿ ಅಳವಡಿಸುವಂತೆ ಸೂಚಿಸಿದ್ದರೂ ಪಾಲನೆಯಾಗದಿರಲು ಕಾರಣವೇನು. ಅನಧಿಕೃತವಾಗಿ ಅಳವಡಿಸಿದವರ ವಿರುದ್ದ ಯಾವ ಕ್ರಮ ಕೈಗೊಂಡಿದ್ದೀರಾ? ಕೂಡಲೇ ಕೇಬಲ್‌ಗ‌ಳನ್ನು ತೆರವುಗೊಳಿಸಿ ಸಂಬಂಧಿಸಿದವರಿಗೆ ನೋಟಿಸ್‌ ಜಾರಿಗೊಳಿಸಿ ಎಂದು ಖಡಕ್‌ ಸೂಚನೆ ನೀಡಿದರು.

ಪರಿಶೀಲನೆ ವೇಳೆ ಉಪಮೇಯರ್‌ ರಮೀಳಾ ಉಮಾಶಂಕರ್‌, ಆಡಳಿತ ಪಕ್ಷ ನಾಯಕ ಎಂ. ಶಿವರಾಜು ಸೇರಿದಂತೆ ಪ್ರಮುಖರು ಹಾಜರಿದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.