ದೊಮ್ಮಸಂದ್ರಕ್ಕೆ ಗಾಂಧಿಗ್ರಾಮ ಪುರಸ್ಕಾರ
Team Udayavani, Oct 4, 2018, 12:32 PM IST
ದೊಮ್ಮಸಂದ್ರ: ಆನೇಕಲ್ ತಾಲೂಕಿನ ದೊಮ್ಮಸಂದ್ರ ಗ್ರಾಪಂಯು 2017- 18ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ ಪ್ರತಿನಿಧಿಗಳು ಪ್ರಶಸ್ತಿ ಸ್ವೀಕರಿಸಿದರು.
ಬೆಂಗಳೂರು ನಗರ ಜಿಲ್ಲೆ, ಆನೇಕಲ್ ತಾಲೂಕಿನ ದೊಮ್ಮಸಂದ್ರ ಗ್ರಾಪಂ, ಗ್ರಾಮೀಣಾ ಭಿವೃದ್ಧಿ, ಪಂಚಾಯತ್ ರಾಜ್ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಿದೆ. ಗ್ರಾಪಂನ ಈ ಕಾರ್ಯವೈಖರಿ ಗುರುತಿಸಿ ಈ ಪುರಸ್ಕಾರ ನೀಡಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಇತ್ತೀಚೆಗೆ ವಿಧಾನಸೌಧದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೊಮ್ಮಸಂದ್ರ ಗ್ರಾ.ಪಂ ಅಧ್ಯಕ್ಷ ಬಿ.ಸಿ.ಉಮೇಶ್ ಬಾಬು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಜೇತ ಅವರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಂದ ಗಾಂಧಿ ಗ್ರಾಮ ಪುರಸ್ಕಾರವನ್ನು ಸ್ವೀಕರಿಸಿದರು. ಪಂಚಾಯಿತಿಯ ಎಲ್ಲ ಸದಸ್ಯರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ