ಕೆಲಸದ ಕರೆ ನಂಬಿ ಹಣ ವರ್ಗಾವಣೆ ಮಾಡೀರಿ ಜೋಕೆ!


Team Udayavani, Oct 11, 2018, 10:58 AM IST

blore-1.jpg

ಬೆಂಗಳೂರು: “ನಿಮಗೆ ದೊಡ್ಡ ಕಂಪನಿಯಲ್ಲಿ ಉದ್ಯೋಗ ಸಿಕ್ಕಿದೆ’ ಎಂದು ಯಾರಾದರೂ ಅಪರಿಚಿತರು ಕರೆ ಮಾಡಿದರೆ ಎಚ್ಚರದಿಂದಿರಿ! ನೌಕರಿ ಡಾಟ್‌ ಕಾಮ್‌ ಸೇರಿ ವಿವಿಧ ಸಂಸ್ಥೆಗಳಲ್ಲಿ ಹೆಸರು ಮಾಹಿತಿ ನೋಂದಾಯಿಸಿಕೊಂಡಿರುವ
ಉದ್ಯೋಗ ಆಕಾಂಕ್ಷಿಗಳನ್ನೇ ಟಾರ್ಗೆಟ್‌ ಮಾಡಿಕೊಂಡು ಹಣ ಪಡೆದು ವಂಚಿಸುವ ಆನ್‌ಲೈನ್‌ ವಂಚಕರ ತಂಡ ನಗರದಲ್ಲಿ ಸಕ್ರಿಯವಾಗಿದೆ.

ಉದ್ಯೋಗ ಆಕಾಂಕ್ಷಿಗಳ ಮಾಹಿತಿ ಸಂಗ್ರಹಿಸುವ ಖಾಸಗಿ ಸಂಸ್ಥೆಗಳನ್ನು ಟಾರ್ಗೆಟ್‌ ಮಾಡಿಕೊಂಡು, ದೂರವಾಣಿ ಕರೆ ಮಾಡಿ 15- 20 ದಿನಗಳಲ್ಲಿ ಆಫ‌ರ್‌ ಲೆಟರ್‌ ನೀಡುತ್ತೇವೆ ಎಂದು ನಂಬಿಸಿ, ಲಕ್ಷಾಂತರ ರೂ.ಗಳನ್ನು ತಮ್ಮ ಬ್ಯಾಂಕ್‌ಖಾತೆಗಳಿಗೆ ವರ್ಗಾವಣೆ ಮಾಡಿಸಿಕೊಂಡು ವಂಚಿಸಲಾಗುತ್ತಿದೆ. ವಂಚಕರ ಮಾತು ನಂಬಿ ಉದ್ಯೋಗದ ಆಸೆಯಿಂದ ಸಾವಿರ, ಲಕ್ಷಗಟ್ಟಲೆ ಹಣ ಕಳೆದುಕೊಂಡವರು ಸೈಬರ್‌ ಕ್ರೈಂ ಠಾಣೆ ಮೆಟ್ಟಿಲೇರುತ್ತಿದ್ದಾರೆ. 

ಇಂಥ ದೂರುಗಳನ್ನು ಹೊತ್ತು ನಿತ್ಯ ಕನಿಷ್ಠ ಇಬ್ಬರಾದರೂ ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿರುವ ಸೈಬರ್‌ ಕ್ರೈ ವಿಭಾಗದ ಮೊರೆ ಹೋಗುತ್ತಿದ್ದಾರೆ.

ಶೈನ್‌ ಡಾಟ್‌ ಕಾಮ್‌ ಹೆಸರಲ್ಲಿ ವಂಚನೆ!: ಪದವಿ ಮುಗಿಸಿದ್ದ ನಟರಾಜ ಲೇಔಟ್‌ನ ಯುವತಿ ಯೊಬ್ಬರು ಕೆಲಸಕ್ಕಾಗಿ ಖಾಸಗಿ ಸಂಸ್ಥೆಯಲ್ಲಿ ವಿದ್ಯಾಭ್ಯಾಸದ ಮಾಹಿತಿ ಹಂಚಿಕೊಂಡಿದ್ದರು. ಈ ಮಾಹಿತಿ ಪಡೆದ ಸೈಬರ್‌ ವಂಚಕ, ಯುವತಿಯ ತಾಯಿ ಲಕ್ಷ್ಮೀದೇವಿ ಎಂಬುವವರಿಗೆ ಕರೆ ಮಾಡಿ, ಶೈನ್‌ ಡಾಟ್‌ ಕಾಮ್‌ ನಿಂದ ಕರೆ ಮಾಡುತ್ತಿದ್ದು, ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸಕ್ಕೆ ನಿಮ್ಮ ಮಗಳ ನಂಬರ್‌ ಶಾರ್ಟ್‌ ಲಿಸ್ಟ್‌ನಲ್ಲಿದೆ. ಹೀಗಾಗಿ ಕೆಲಸ ಖಾಯಂ ಮಾಡಲು ಬ್ಯಾಂಕ್‌ ಖಾತೆಗಳ ಮಾಹಿತಿ ನೀಡುವಂತೆ ಕೇಳಿದ್ದಾನೆ.

ವಂಚಕನ ಮಾತು ಕೇಳಿದ ಲಕ್ಷ್ಮೀದೇವಿ, ಮಗಳ ಎಸ್‌ಬಿಐ ಖಾತೆಯ ವಿವರಗಳನ್ನು ನೀಡಿದ್ದಾರೆ. ಈ ಮಾಹಿತಿ ಪಡೆದ ವಂಚಕ ಅ.6ರಂದು ಖಾತೆಯಲ್ಲಿದ್ದ 56,111 ರೂ.ಗಳನ್ನು ತನ್ನ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾನೆ.
 
ಬಳಿಕ ಆತ ಕರೆ ಮಾಡಿದ್ದ ನಂಬರ್‌ಗೆ ಕರೆ ಮಾಡಿದಾಗ ಸ್ವಿಚ್‌ ಆಫ್ ಬಂದಿದೆ. ಕಡೆಗೆ ಮೋಸ ಹೋಗಿರುವುದು ಗೊತ್ತಾಗಿ ಸೈಬರ್‌ ಠಾಣೆಗೆ ದೂರು ನೀಡಿದ್ದಾರೆ. ಎರಡೂ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದೇವೆ. ವಂಚಕರು ಉದ್ಯೋಗದ ಆಮಿಷವೊಡ್ಡಿ ಹಣ ಕೇಳಿದಾಗಲೇ ಯುವಜನ ಎಚ್ಚರ ವಹಿಸ ಬೇಕು ಎಂದು ಸೈಬರ್‌ ಕ್ರೈಂ ವಿಭಾಗದ ಹಿರಿಯ ಪೊಲೀಸ್‌ ಅಧಿಕಾರಿ ಸಲಹೆ ನೀಡಿದ್ದಾರೆ.

ಡೆಲ್‌ ಕಂಪನಿ ಹೆಸರಲ್ಲಿ ಲಕ್ಷ ರೂ. ವಂಚನೆ!
ವಿಜಯನಗರದ ಯುವತಿಯೊಬ್ಬರು ಪದವಿ ಪೂರ್ಣಗೊಳಿಸಿ ಕೆಲಸದ ಹುಡುಕಾಟದಲ್ಲಿದ್ದರು. ಅದರಂತೆ, ಸೆಪ್ಟೆಂಬರ್‌ ತಿಂಗಳು, ನೌಕರಿ ಡಾಟ್‌ ಕಾಮ್‌ನಲ್ಲಿ ರೆಸ್ಯೂಮ್‌ ಅಪ್‌ಲೋಡ್‌ ಮಾಡಿದ್ದರು. ಈ ಮಾಹಿತಿ ಪಡೆದ ವಂಚಕನೊಬ್ಬ ಅಪರಿಚಿತ ನಂಬರ್‌ನಿಂದ ಕರೆ ಮಾಡಿ, ಡೆಲ್‌ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿದ್ದಾನೆ. ಅಲ್ಲದೆ, ಕೆಲಸ ಬೇಕೆಂದರೆ 50 ಸಾವಿರ ರೂ. ಅಡ್ವಾನ್ಸ್‌ ನೀಡಬೇಕು ಎಂದು ಕೇಳಿದ್ದಾನೆ. ಇದನ್ನು ನಂಬಿದ ಯುವತಿ, ವಂಚಕ ಹೇಳಿದ ಬ್ಯಾಂಕ್‌ ಖಾತೆಗೆ ಹಣ ವರ್ಗಾಯಿಸಿದ್ದಾರೆ. ಇದಾದ ಬಳಿಕವೂ ಇಲ್ಲಸಲ್ಲದ ಸಬೂಬು ಹೇಳಿ ಯುವತಿಯಿಂದ ಸೆ.25ರಿಂದ ಅ.6ರ ನಡುವೆ ಒಟ್ಟು 1.14 ಲಕ್ಷ ರೂ.ಗಳನ್ನು ತನ್ನ ಖಾತೆಗೆ ಹಾಕಿಸಿಕೊಂಡು ವಂಚಿಸಿದ್ದಾನೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.