ದಸರಾಗೆ ಖಾಸಗಿ ಬಸ್‌ ದರದ ಬರ


Team Udayavani, Oct 12, 2018, 11:56 AM IST

blore-5.jpg

ಬೆಂಗಳೂರು: ನಾಡಹಬ್ಬ ದಸರಾಗೆ ಇನ್ನೂ ಒಂದು ವಾರ ಬಾಕಿ ಇರುವಾಗಲೇ ಖಾಸಗಿ ಬಸ್‌ಗಳ ಪ್ರಯಾಣ ದರ ಗಗನಕ್ಕೇರಿದ್ದು, ಅಕ್ಷರಶಃ ಸುಲಿಗೆಗೆ ನಿಂತಿವೆ. ಹಬ್ಬದ ಅಂಗವಾಗಿ ಈಗಾಗಲೇ ಬೆಂಗಳೂರಿನಿಂದ ವಿವಿಧ
ಊರುಗಳಿಗೆ ತೆರಳುವ ಬಸ್‌, ರೈಲುಗಳು ಭರ್ತಿಯಾಗಿದ್ದು, ಪರಿಸ್ಥಿತಿ ಲಾಭ ಪಡೆಯಲು ಖಾಸಗಿ ಬಸ್‌ಗಳು ಬೇಕಾಬಿಟ್ಟಿ ದರ ನಿಗದಿಪಡಿಸಿವೆ. ಇದರಿಂದ ಹಬ್ಬದ ಆಚರಣೆಗಾಗಿ ತೆರಳುವ ಜನ, ಬಸ್‌ ಪ್ರಯಾಣಕ್ಕಾಗಿಯೇ ಸಾವಿರಗಟ್ಟಲೆ ಹಣ ಸುರಿಯಬೇಕಾಗಿದೆ. ಇದು ಸಾಮಾನ್ಯ ದಿನಗಳಿಗಿಂತ ಹೆಚ್ಚು-ಕಡಿಮೆ ದುಪ್ಪಟ್ಟು ಆಗಿದೆ.

ಗುರುವಾರ ಮತ್ತು ಶುಕ್ರವಾರ ಹಬ್ಬದ ರಜೆ ಹಾಗೂ ಶನಿವಾರ-ಭಾನುವಾರ ವಾರಾಂತ್ಯ ದಿನಗಳು ಸೇರಿದಂತೆ ಸತತ ನಾಲ್ಕು ದಿನಗಳು ರಜೆ ಆಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಉದ್ಯೋಗಿಗಳೆಲ್ಲರೂ ತಮ್ಮ ಊರುಗಳತ್ತ ಮುಖಮಾಡಿದ್ದಾರೆ. ರೈಲುಗಳಂತೂ ತಿಂಗಳ ಹಿಂದೆಯೇ ಭರ್ತಿಯಾಗಿವೆ. ಸರ್ಕಾರಿ ಬಸ್‌ಗಳ ಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ. ಜನ ಹೆಚ್ಚುವರಿ ಬಸ್‌ಗಳ ಎದುರುನೋಡುತ್ತಿದ್ದಾರೆ.

ಪ್ರತಿ ಹಬ್ಬದ ಸೀಜನ್‌ಗಳಲ್ಲಿ ಹೀಗೆ ಖಾಸಗಿ ಬಸ್‌ಗಳಿಂದ ಸುಲಿಗೆ ಮಾಡಲಾಗುತ್ತದೆ. ಇದರ ವಿರುದ್ಧ ಇದುವರೆಗೆ ಸರ್ಕಾರದಿಂದ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರಯಾಣಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ಗಳ ಪ್ರಯಾಣ ದರವು ಹಬ್ಬದ ಸೀಜನ್‌ನಲ್ಲಿ ಸಾಮಾನ್ಯ ಶೇ. 20ರಷ್ಟು ಪ್ರಯಾಣ ದರ ಹೆಚ್ಚಿರುತ್ತದೆ. ವಿವಿಧ ಕಡೆಗಳಿಂದ ಈ ಬಸ್‌ಗಳು ಬೆಂಗಳೂರಿಗೆ ಹೆಚ್ಚು-ಕಡಿಮೆ ಖಾಲಿ ಬಂದಿರುತ್ತವೆ. ಆ ಹೊರೆಯನ್ನು ಸರಿದೂಗಿಸಲು ಈ ದರ ವಿಧಿಸಲಾಗಿರುತ್ತದೆ.

ಈ ಬಾರಿ ಹಬ್ಬದ ಹಿನ್ನೆಲೆಯಲ್ಲಿ ಸುಮಾರು ಸಾವಿರ ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಲಾಗಿದೆ. ಖಾಸಗಿ ಬಸ್‌ಗಳ ಪ್ರಯಾಣ ದರ ಬೆಂಗಳೂರಿನಿಂದ ಹುಬ್ಬಳ್ಳಿ, ಬೆಳಗಾವಿ, ಮಂಗಳೂರು, ವಿಜಯಪುರ, ಶಿವಮೊಗ್ಗ ಸೇರಿದಂತೆ ವಿವಿಧೆಡೆ ತೆರಳುವ ಬಸ್‌ ಗಳ ಪ್ರಯಾಣ ದರ ಸರಾಸರಿ 1,300ರಿಂದ 1,500 ರೂ. ಇದೆ. ಹಬ್ಬಕ್ಕೆ ಇನ್ನು ಎರಡು ದಿನಗಳು ಬಾಕಿ ಇರುವಾಗ, ಈ ದರ ಮತ್ತಷ್ಟು ಏರಿಕೆ ಆಗಲಿದೆ!

ಹೆಚ್ಚುವರಿ ರೈಲು ಬೋಗಿಗಳು, ಬಸ್‌ಗಳೂ ಈಗಾಗಲೇ ಭರ್ತಿಯಾಗಿವೆ. ಸಾಲು ರಜೆ ಹಿನ್ನೆಲೆಯಲ್ಲಿ ಬೇಡಿಕೆ ಹೆಚ್ಚಿದೆ.
ಅದರಲ್ಲೂ ಉತ್ತರ ಕರ್ನಾಟಕಕ್ಕೆ ಹೋಗುವವರ ಸಂಖ್ಯೆ ಹೆಚ್ಚಿದೆ. ಆದರೆ, ಆ ಭಾಗದ ಎಲ್ಲ ಊರುಗಳಿಗೆ ತೆರಳುವ ಬಹುತೇಕ ಖಾಸಗಿ ಬಸ್‌ಗಳಲ್ಲಿ ಪ್ರಯಾಣ ದರ ಸಾವಿರ ರೂ.ಗಿಂತ ಹೆಚ್ಚಿದೆ. ಪ್ರತಿ ಸಲ ಈ ಸಮಸ್ಯೆ ಇರುತ್ತದೆ. ಸರ್ಕಾರ ಮಧ್ಯಪ್ರವೇಶಿಸಿ, ಇದಕ್ಕೆ ಕಡಿವಾಣ ಹಾಕಬೇಕು ಎಂದು ಹುಬ್ಬಳ್ಳಿಯ ಸುನೀಲ್‌ ಆಗ್ರಹಿಸುತ್ತಾರೆ.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.