ಉಗ್ರನ ಸೆರೆಗೆ ಅತಿವೃಷ್ಟಿ ಕಾರಣ


Team Udayavani, Oct 13, 2018, 12:45 PM IST

blore-1.jpg

ಬೆಂಗಳೂರು: ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರಿಂದ ಬಂಧನವಾಗಿರುವ ಲಷ್ಕರೆ-ಇ-ತೊಯ್ಬಾ ಸಂಘಟನೆ ಉಗ್ರ ಪಿ.ಎ.ಸಲೀಂ ಇತ್ತೀಚೆಗೆ ಕೇರಳದಲ್ಲಿ ಸಂಭವಿಸಿದ ನೆರೆ ಸಂದರ್ಭದಲ್ಲಿ ಕಣ್ಣೂರಿನ ಪಿಣರಾಯಿ ಕಾಡಿನಿಂದ ಹೊರಬಂದಿದ್ದು, ಈ ಮಾಹಿತಿ ಪಡೆದು ಬಂಧಿಸಲಾಯಿತು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

2008ರಲ್ಲಿ ನಡೆದ ಸ್ಫೋಟದ ಬಳಿಕ ಗಲ್ಫ್ ದೇಶಗಳಲ್ಲಿ ತಲೆಮರೆಸಿಕೊಂಡಿದ್ದ. ಅಂದಿನಿಂದ ರಾಜ್ಯ ಪೊಲೀಸರ ಜತೆಗೆ ಕೇಂದ್ರ ಗುಪ್ತಚರ ಇಲಾಖೆ ಮತ್ತು ರಾ ಅಲ್ಲದೆ ನಾನಾ ತನಿಖಾ ಸಂಸ್ಥೆಗಳು ಈತನ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದವು. ಕೇರಳ ಪೊಲೀಸರಿಗೂ ಪತ್ತೆಯಾಗಿರಲಿಲ್ಲ. ಆದರೆ, ಕೆಲ ವರ್ಷಗಳಿಂದ ಪಿಣರಾಯಿ ಅರಣ್ಯದಲ್ಲಿ ತಲೆಮರೆಸಿಕೊಂಡಿದ್ದ ಮಾಹಿತಿ ತನಿಖಾ ಸಂಸ್ಥೆಗಳಿಗೆ ಸಿಕ್ಕಿತ್ತು. ಆದರೆ, ಬಂಧನ ಸಾಧ್ಯವಾಗಿರಲಿಲ್ಲ.

ಈ ಮಧ್ಯೆ ಕೆಲ ತಿಂಗಳ ಹಿಂದೆ ಕೇರಳದಲ್ಲಿ ಸಂಭವಿಸಿದ ಜಲಪ್ರಳಯದಿಂದ ಕಾಡಿನಲ್ಲಿ ಭೂಕುಸಿತ ಉಂಟಾಗಿತ್ತು. ಇದರಿಂದ ಆತಂಕಗೊಂಡ ಸಲೀಂ ತನ್ನ ಸ್ಥಳ ಬದಲಾವಣೆಗೆ ಸಂಬಂಧಿಯೊಬ್ಬರನ್ನು ಸಂಪರ್ಕಿಸಿ, ನಾಡಿನೊಳಗೆ ಬಂದಿದ್ದ. ಈತ ರಹಸ್ಯವಾಗಿ ಕೇರಳದಲ್ಲಿ ಓಡಾಡುತ್ತಿರುವ ಮಾಹಿತಿ ಅರಿತ ಕೇರಳ ಪೊಲೀಸರು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಲ್ಲದೆ, ಆರೋಪಿ ಆಗಾಗ್ಗೆ ಪಿಣರಾಯಿಯಲ್ಲಿರುವ ತನ್ನ ಮನೆಗೆ ಬಂದು ಹೋಗುತ್ತಿದ್ದ.
 
ಕಾಡಿನಿಂದಲೇ ಸಂಘಟನೆ: ಕಳೆದ ಆರೇಳು ವರ್ಷಗಳಿಂದ ಆರೋಪಿ ಕಾಡಿನಲ್ಲೇ ವಾಸವಾಗಿದ್ದ. ವೇಷ ಬದಲಿಸಿ ಅಪರೂಪಕ್ಕೊಮ್ಮೆ ಮಾತ್ರ ನಾಡಿನೊಳಗೆ ಬಂದು ಹೋಗುತ್ತಿದ್ದ. ಕಾಡಿನಿಂದಲೇ ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಸಕ್ರಿಯವಾಗಿರುವ ತನ್ನ ಲಷ್ಕರೆ-ಇ-ತೊಯ್ಬಾ ಸಂಘಟನೆ ಕಾರ್ಯಕರ್ತರ ಜತೆ ನಿರಂತರ ಸಂಪರ್ಕದಲ್ಲಿದ್ದ. ಜತೆಗೆ ತನ್ನ ವಿರುದ್ಧ ಇರುವ ಕೆಲ ತಾಂತ್ರಿಕ ಸಾಕ್ಷ್ಯಗಳನ್ನು ನಾಶಪಡಿಸಿದ್ದಾನೆ. ಆದರೆ, ಕೆಲ ಸಾಕ್ಷ್ಯಗಳನ್ನು ಬೇರೆಡೆ ಮುಚ್ಚಿಟ್ಟಿರುವ ಸಾಧ್ಯತೆಗಳಿವೆ. ಇನ್ನು ಬಿಡುವಿದ್ದ ವೇಳೆಯಲ್ಲಿ ಈ ಮೊದಲಿನಂತೆ ಸರ್ಕ್ನೂಟ್‌ ತಯಾರು ಮಾಡುತ್ತಿದ್ದ ಎಂದು ಮೂಲಗಳು ತಿಳಿಸಿವೆ.

ರೆಡ್‌ಕಾರ್ನರ್‌ ನೋಟಿಸ್‌: ಪಿ.ಎ.ಸಲೀಂ ವಿರುದ್ಧ ಕೇಂದ್ರ ಗುಪ್ತಚರ ಇಲಾಖೆ ಮತ್ತು ರಾ ಈ ಹಿಂದೆ ರೆಡ್‌ ಕಾರ್ನರ್‌ ನೋಟಿಸ್‌ ಹೊರಡಿಸಿತ್ತು. ಇದನ್ನು ಅರಿತ ಸಲೀಂ ಗಲ್ಫ್ ದೇಶಗಳಿಂದ ರಹಸ್ಯ ಮಾರ್ಗವಾಗಿ ಕೇರಳ ಸೇರಿಕೊಂಡಿದ್ದ. ಹೀಗಾಗಿ ಈತನ ಬಳಿಯಿರುವ ಪಾಸ್‌ಪೋರ್ಟ್‌ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
 
ತನಿಖೆಗೆ ಸಹಕರಿಸದ ಸಲೀಂ: ಆರೋಪಿ ಸಲೀಂ ಸಿಸಿಬಿ ಪೊಲೀಸರ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ಹೇಳಲಾಗಿದೆ. ಆರೋಪಿಗೆ ಕನ್ನಡ, ಇಂಗ್ಲೀಷ್‌ ಮತ್ತು ತಮಿಳು ಭಾಷೆಗಳು ಅರ್ಥವಾಗುತ್ತಿದ್ದು, ಮಾತನಾಡುವುದಿಲ್ಲ. ಆದರೆ, ಮಲಾಯಳಂನಲ್ಲಿ ಮಾತ್ರ ಉತ್ತರಿಸುತ್ತಾನೆ. ಆರೋಪಿ ಸ್ಫೋಟಕ್ಕೂ ಮೊದಲು ತನ್ನ ಸಂಘಟನೆ ಸದಸ್ಯರ ಜತೆ ಬೆಂಗಳೂರಿಗೆ ಬಂದಿರುವುದಾಗಿ ಒಪ್ಪಿಕೊಳ್ಳುವ ಸಲೀಂ ಸ್ಫೋಟದ ಬಗ್ಗೆ ಮಾಹಿತಿ ಇಲ್ಲ ಎಂದು ಸುಳ್ಳು ಹೇಳುತ್ತಿದ್ದಾನೆ.
ಹೀಗಾಗಿ ಆರೋಪಿಯನ್ನು ತೀವ್ರ ರೀತಿಯಲ್ಲಿ ವಿಚಾರಣೆ ಮಾಡುವ ಸಾಧ್ಯತೆಯಿದೆ.

ಪ್ರಕರಣದ ಕೆಲ ಆರೋಪಿಗಳು ಕರ್ನಾಟಕದಲ್ಲಿ ಸ್ಫೋಟಿಸಲು ಎರ್ನಾಕುಲಂನಲ್ಲಿ ಕಾರೊಂದನ್ನು ಕಳ್ಳತನ ಮಾಡಿದ್ದರು. ಆದರೆ, ಸ್ಥಳೀಯ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದರು. ಒಂದು ವೇಳೆ ಆರೋಪಿಗಳು ಬಂಧನವಾಗದಿದ್ದರೆ, ಕಾರಿನಲ್ಲಿ ಅಮೋನಿಯಂ ನೈಟ್ರೇಟ್‌, ಜೆಲಿಟಿನ್‌ ಪುಡಿಗಳ ಜತೆ ಸಿಲಿಂಡರ್‌ಗಳನ್ನು ಹಾಕಿ ಮೆಜೆಸ್ಟಿಕ್‌, ಕೆ.ಆರ್‌.ಮಾರುಕಟ್ಟೆ ಸೇರಿ ಕೆಲ ಜನಜಂಗುಳಿ ಇರುವ ಸ್ಥಳಗಳಲ್ಲಿ ಸ್ಫೋಟಿಸಲು ಸಂಚು ರೂಪಿಸಿದ್ದರು. ಆದರೂ ಕೆಲ ಆರೋಪಿಗಳು ಸ್ಫೋಟಕ್ಕೂ ಕೆಲ ದಿನಗಳ ಮೊದಲು ಮುಂಜಾನೆ 3ಗಂಟೆಯಿಂದ ಮಡಿವಾಳದಿಂದ ಮೈಸೂರು ರಸ್ತೆವರೆಗೂ ಸ್ಫೋಟದ ಸ್ಥಳಗಳನ್ನು ಗುರುತಿಸುತ್ತಿದ್ದರು.

ಅಷ್ಟರಲ್ಲಿ ಬೆಳಗ್ಗೆ 5 ಗಂಟೆ ಆಗಿತ್ತು. ಈ ವೇಳೆ ತಮ್ಮ ಬಳಿಯಿದ್ದ ಪೆಟ್ಟಿಗೆಯಲ್ಲಿ ಇದ್ದ ಇನ್ನಷ್ಟು ಸ್ಫೋಟಕ ವಸ್ತುಗಳನ್ನು ಕೊಂಡೊಯ್ದು ಚನ್ನಪಟ್ಟಣ ಬಳಿ ಬಿಸಾಡಿ ಹೋಗಿದ್ದರು. ಅನಂತರ ಮತ್ತೆ ಬಂದು ನಿಗದಿ ಮಾಡಿದ್ದ ಸ್ಥಳಗಳಲ್ಲಿ ಸುಧಾರಿತ ಸ್ಫೋಟಕ ಸಾಧನ ಸ್ಫೋಟಿಸುತ್ತಾರೆ ಎಂದು ಮೂಲಗಳು ತಿಳಿಸಿವೆ. 

ಆಟೋ ಚಾಲಕ ಆಗಿದ್ದ ಸಲೀಂ ಸಲೀಂ ಮೂಲತಃ ಆಟೋ ಚಾಲಕನಾಗಿದ್ದು, ನಾಸೀರ್‌ ಮದನಿಯ ಪಿಡಿಪಿ ಪಕ್ಷದ ಕಾರ್ಯಕರ್ತನಾಗಿದ್ದ. ನಂತರ ಸಂಬಂಧಿ ಸತ್ತಾರ್‌ ಸಲಹೆ ಮೇರೆಗೆ ಉಗ್ರ ಸಂಘಟನೆಯಲ್ಲಿ ಸಕ್ರಿಯವಾಗು ತ್ತಾನೆ.
ಆದರೆ, 2008ರ ಸ್ಫೋಟದ ಬಳಿಕ ಆರೋಪಿ ಗಲ್ಫ್ ದೇಶಗಳಿಂದ ಬಂದು ಕೇರಳದ ಕಾಡಿನಲ್ಲಿ ತಲೆಮರೆಸಿಕೊಂಡಿದ್ದ ಎಂದು ತಿಳಿದು ಬಂದಿದೆ.

 ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.