ಮಾದಕ ವಸ್ತು ಮಾರಾಟ: ಬಂಧನ
Team Udayavani, Mar 3, 2019, 6:46 AM IST
ಬೆಂಗಳೂರು: ಅಕ್ರಮವಾಗಿ ನೆಲೆಸಿ, ಮಾದಕ ವಸ್ತು ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ಪ್ರಜೆ¿ೊಬ್ಬ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಮಹಿಳೆ ಮತ್ತು ಮಾದಕ ದ್ರವ್ಯ ದಳದ ಬಲೆಗೆ ಬಿದ್ದಿದ್ದಾನೆ.
ಬಿ.ಜೋಸೆಫ್(29) ಬಂಧಿತ. ಆರೋಪಿ ಕೆ.ಆರ್.ಪುರ ಠಾಣಾ ವ್ಯಾಪ್ತಿಯ ಟಿ.ಸಿ.ಪಾಳ್ಯ ಮುಖ್ಯರಸ್ತೆಯಲ್ಲಿ ಮಾದಕ ವಸ್ತು ಕೊಕೇನ್ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆರೋಪಿಯನ್ನು ಮಾದಕ ವಸ್ತು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ 3 ಲಕ್ಷ ರೂ. ಮೌಲ್ಯದ 20 ಗ್ರಾಂ ಕೊಕೇನ್, 9 ಗ್ರಾಂ ಎಂಡಿಎಂಎ ಮತ್ತು 12 ಗ್ರಾಂನ 36 ಎಕ್ಟಸಿ ಎಂಬ ಮಾದಕ ಮಾತ್ರೆಗಳು ಹಾಗೂ ಒಂದು ಬೈಕ್, ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.
ಕೆಲ ವರ್ಷಗಳ ಹಿಂದೆ ವ್ಯವಹಾರ ವೀಸಾದಡಿ ಭಾರತಕ್ಕೆ ಬಂದಿರುವ ಜೋಸೆಫ್, ಕೆ.ಆರ್.ಪುರದಲ್ಲಿ ವಾಸವಾಗಿದ್ದ. ವೀಸಾ ಅವಧಿ ಮುಕ್ತಾಯಗೊಂಡರೂ ಅಕ್ರಮವಾಗಿ ನೆಲೆಸಿದ್ದ ಆರೋಪದ ಮೇಲೆ 2018ರಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಜಾಮೀನು ಪಡೆದು ಹೊರ ಬಂದಿದ್ದವನು ಜೀವನ ನಿರ್ವಹಣೆಗಾಗಿ ಆಫ್ರಿಕಾ ಮೂಲಕ ಮುಂಬೈ, ಗೋವಾ ಮಾರ್ಗವಾಗಿ ಮಾದಕ ವಸ್ತುಗಳನ್ನು ತರಿಸುತ್ತಿದ್ದ.
ನಂತರ ಅವುಗಳನ್ನು ಸಣ್ಣ ಪ್ಯಾಕೆಟ್ಗಳನ್ನಾಗಿ ಮಾಡಿ ನೈಜೀರಿಯಾ ಹಾಗೂ ಇತರೆ ವಿದೇಶಿ ಪ್ರಜೆಗಳಿಗೆ ಮಾರಾಟ ಮಾಡುತ್ತಿದ್ದ. ಈ ವಿದೇಶಿ ಪ್ರಜೆಗಳ ಮೂಲಕ ಸ್ಥಳೀಯ ವಿದ್ಯಾರ್ಥಿಗಳು ಹಾಗೂ ಕೆಲ ಮಾದಕ ವ್ಯಸನಿಗಳನ್ನು ಪರಿಚಯಿಸಿಕೊಂಡು ನೇರವಾಗಿ ಮಾರಾಟ ಮಾಡುತ್ತಿದ್ದ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ. ಆರೋಪಿಯ ವಿರುದ್ಧ ಕೆ.ಆರ್.ಪುರ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆ ಹಾಗೂ ವಿದೇಶಿಯರ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್