ನಟ ರಿಷಿ ವಿರುದ್ಧ ಚಿಕ್ಕಮ್ಮನಿಂದಲೇ ದೂರು
Team Udayavani, Oct 15, 2018, 12:43 PM IST
ಬೆಂಗಳೂರು: ಚಿಕ್ಕಮ್ಮನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ “ಆಪರೇಷನ್ ಅಲಮೇಲಮ್ಮ’ ಚಿತ್ರದ ನಾಯಕ ನಟ ರಿಷಿ ವಿರುದ್ಧ ಬಸವೇಶ್ವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರು ಸ್ವೀಕರಿಸಿರುವ ಪೊಲೀಸರು ಗಂಭೀರ ಸ್ವರೂಪವಲ್ಲದ ಪ್ರಕರಣ (ಎನ್ಸಿಆರ್) ದಾಖಲಿಸಿದ್ದಾರೆ.
ನಟ ರಿಷಿ, ಅವರ ತಂದೆ ನಾಗರಾಜ್, ತಾಯಿ ಅನಲಾ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನಟನ ಚಿಕ್ಕಮ್ಮ ಶಾಲಿನಿ ಗೋಪಿನಾಥ್ ದೂರು ನೀಡಿದ್ದಾರೆ. ರಿಷಿ, ಬಸವೇಶ್ವರನಗರದಲ್ಲಿರುವ ತಮ್ಮ ತಾತನ ಮನೆಯಲ್ಲಿ ಪೋಷಕರೊಂದಿಗೆ ವಾಸವಾಗಿದ್ದಾರೆ. ಅ.10ರಂದು ದೂರುದಾರರಾದ ಶಾಲಿನಿ ಗೋಪಿನಾಥ್ ಪಾರ್ಶ್ವವಾಯುವಿನಿಂದ ಬಳಲುತ್ತಿರುವ ತಮ್ಮ ತಂದೆಯನ್ನು ನೋಡೆಲೆಂದು ಮನೆಗೆ ಬಂದಿದ್ದರು.
ಆ ಸಂದರ್ಭದಲ್ಲಿ ಚಿಕ್ಕಮ್ಮನನ್ನು ಮನೆ ಒಳಗೆ ಬಿಡದ ರಿಷಿ ಮತ್ತು ಅವರ ಪೋಷಕರು, ಆಸ್ತಿ ವಿಚಾರವಾಗಿ ಜಗಳ ಮಾಡಿದ್ದಾರೆ. ಖಾಲಿ ಪೇಪರ್ಗಳ ಮೇಲೆ ಸಹಿ ಹಾಕಿ ಈ ಆಸ್ತಿಯನ್ನು ತಮ್ಮ ಹೆಸರಿಗೆ ಬರೆದುಕೊಟ್ಟರೆ ಮಾತ್ರ ಮನೆ ಒಳಗೆ ಪ್ರವೇಶ ನೀಡುವುದಾಗಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ರಿಷಿ ತಮ್ಮ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದು, ಇದರಿಂದ ಆತಂಕಗೊಂಡು ನಾನು ಜೋರಾಗಿ ಕೂಗಿಕೊಂಡಾಗ ರಿಷಿ ತಾಯಿ ಅನಲಾ ನನ್ನ ಬಾಯಿಗೆ ಬಟ್ಟೆ ತುರುಕಿದ್ದಾರೆ. ಆ ವೇಳೆ ರಿಷಿ ಮಾರಕಾಸ್ತ್ರ ತೋರಿಸಿ ಹೆದರಿಸಿ ಖಾಲಿ ಪೇಪರ್ಗೆ ಸಹಿ ಮಾಡುವಂತೆ ಒತ್ತಾಯಿಸಿದಲ್ಲದೆ, ಪ್ರಾಣಬೆದರಿಕೆ ಹಾಕಿದ್ದರು ಎಂದು ಶಾಲಿನಿ ದೂರಿನಲ್ಲಿ ಉಲ್ಲೇಖೀಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ನಟ ರಿಷಿ, ಪುನಿತ್ ರಾಜ್ಕುಮಾರ್ ನಿರ್ಮಿಸುತ್ತಿರುವ “ಕವಲುದಾರಿ’ ಸಿನಿಮಾದಲ್ಲಿ ನಾಯಕ ನಟನಾಗಿ ಕಾಣಿಸಿಕೊಳ್ಳಲಿದ್ದಾರೆ. ಜತೆಗೆ ತಮಿಳು ನಟ ಧನುಷ್ ನಿರ್ಮಾಣದ ಸಿನಿಮಾದಲೂ ನಟಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು