ಶಿಕ್ಷಕರಿಗೂ ಪರೀಕ್ಷೆ; ಫೇಲಾದ್ರೆ ಗೇಟ್‌ಪಾಸ್‌?


Team Udayavani, Oct 16, 2018, 2:19 PM IST

blore-3.jpg

ಬೆಂಗಳೂರು: “ಬಿಬಿಎಂಪಿ ರೋಷಿಣಿ’ ವಿದ್ಯಾರ್ಥಿಗಳ ಕಲಿಕಾ ಸಾಮಥ್ಯಊ ಹೆಚ್ಚಿಸುವುದರ ಜತೆಗೆ ಶಿಕ್ಷಕರ ಮುಂದೊಂದು ಅಗ್ನಿ ಪರೀಕ್ಷೆ ಇಟ್ಟಿದೆ. ಇದರಲ್ಲಿ ಅನುತ್ತೀರ್ಣರಾದವರಿಗೆ ಗೇಟ್‌ಪಾಸ್‌ ಗ್ಯಾರಂಟಿ! ಬಿಬಿಎಂಪಿ ಒಡೆತನದ ಶಾಲಾ-ಕಾಲೇಜುಗಳನ್ನು ದತ್ತು ಪಡೆದು ಸುಮಾರು 500 ಕೋಟಿ ರೂ. ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿಗೊಳಿಸಲು ಪಾಲಿಕೆಯ ಸಹಯೋಗದಲ್ಲಿ ಮೈಕ್ರೋಸಾಫ್ಟ್ ಹಾಗೂ ಟೆಕ್‌ ಅನಂತ್‌ ಗಾರ್ಡ್‌ ಸಂಸ್ಥೆಗಳು ಯೋಜನೆ ರೂಪಿಸಿವೆ. ಅದರಂತೆ ಯೋಜನೆ ಜಾರಿಗೆ ಈಗಾಗಲೇ ಪಾಲಿಕೆ ಯೊಂದಿಗೆ ಒಪ್ಪಂದ ಮಾಡಿಕೊಂಡಿರುವ ಸಂಸ್ಥೆಗಳು, ಯೋಜನೆ ಅನುಷ್ಠಾನಕ್ಕೆ ಸಿದ್ಧತೆ ನಡೆಸಿವೆ.

ಬಿಬಿಎಂಪಿ ಶಾಲೆಗಳಿಗೆ ಅಗತ್ಯ ಮೂಲ ಸೌಕರ್ಯ ಒದಗಿಸುವುದರ ಜತೆಗೆ, ಅಲ್ಲಿನ ವಿದ್ಯಾರ್ಥಿಗಳಲ್ಲಿನ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಶಿಕ್ಷಣದ ಗುಣಮಟ್ಟ ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿರುವ ಹಿನ್ನೆಲೆಯಲ್ಲಿ ಅವರಿಗೂ ಅರ್ಹತಾ ಪರೀಕ್ಷೆ ನಡೆಸಲು ಬಿಬಿಎಂಪಿ ಮುಂದಾಗಿದೆ. 

ಅದರಂತೆ ಪಾಲಿಕೆಯ ಶಾಲಾ-ಕಾಲೇಜುಗಳಲ್ಲಿ ಕೆಲಸ ಮಾಡುವ ಶಿಕ್ಷಕರಿಗೆ ಮೈಕ್ರೋಸಾಫ್ಟ್ ಹಾಗೂ ಟೆಕ್‌ ಅನಂತ್‌ ಗಾರ್ಡ್‌ ಸಂಸ್ಥೆಗಳು 21ನೇ ಶತಮಾನದ ಕಲಿಕಾ  ಲಭ್ಯಗಳು, ಸ್ಯಾಟಲೈಟ್‌ ಹಾಗೂ ಡಿಜಿಟಲ್‌ ಶಿಕ್ಷಣ ಮತ್ತು ಬೋಧನಾ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ ನಡೆಸುತ್ತವೆ. ಅದಾದ ಬಳಿಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಿ, ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಮಾತ್ರ ಉಳಿಸಿಕೊಳ್ಳಲಾಗುತ್ತದೆ.

ಅರ್ಹತಾ ಪರೀಕ್ಷೆ ಅನಿವಾರ್ಯ: ಶಿಕ್ಷಕರನ್ನು ಕೆಲಸದಿಂದ ತೆಗೆಯುವ ಬಗ್ಗೆ ಪ್ರತಿಕ್ರಿಯಿಸಿದ ಶಿಕ್ಷಣ ವಿಭಾಗದ ಅಧಿಕಾರಿಯೊಬ್ಬರು, ಪಾಲಿಕೆಯ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಉತ್ತಮವಾಗಿಲ್ಲ ಎಂಬ ಕಾರಣದಿಂದಲೇ ಪೋಷಕರು ಮಕ್ಕಳನ್ನು ಬಿಬಿಎಂಪಿ ಶಾಲೆಗಳಿಗೆ ಸೇರಿಸುವುದಿಲ್ಲ. ಇನ್ನು ಶಾಲೆಗಳಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದಾಗ ಆಂಗ್ಲ ಭಾಷೆಯ ಶಿಕ್ಷಕರಿಗೆ ಆಂಗ್ಲ ವ್ಯಾಕರಣವೇ ಸರಿಯಾಗಿ ಗೊತ್ತಿಲ್ಲದಿರುವುದು, ಗಣಿತ ಶಿಕ್ಷರಿಗೆ ಲೆಕ್ಕವೇ ಬಾರದಿರುವುದು ಕಂಡುಬಂದಿದೆ. ಇನ್ನು ಪಾಲಿಕೆಯ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಉತ್ತಮ ಶಿಕ್ಷಕರು ಇರಬೇಕಾಗುತ್ತದೆ. ಆ ನಿಟ್ಟಿನಲ್ಲಿ ಪಾಲಿಕೆ ಈ ಕ್ರಮಕ್ಕೆ ಮುಂದಾಗಿದೆ ಎಂದು ಮಾಹಿತಿ ನೀಡಿದರು.

ಡಿಸೆಂಬರ್‌ ವೇಳೆಗೆ 6 ಮಾದರಿ ಶಾಲೆಗಳು ಪಾಲಿಕೆಯ ಶಾಲೆಗಳನ್ನು ದತ್ತು ಪಡೆದಿರುವ ಸಂಸ್ಥೆಗಳು ಡಿಸೆಂಬರ್‌ ವೇಳೆಗೆ ಪಾಲಿಕೆಯ ಆರು ಶಾಲಾ-ಕಾಲೇಜುಗಳಲ್ಲಿ ಯೋಜನೆಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಲಿವೆ. ಅದರಂತೆ ವರ್ಷಾಂತ್ಯದೊ ವೇಳೆಗೆ ಆರು ಶಾಲೆಗಳನ್ನು ಮಾದರಿ ಶಾಲೆಗಳಾಗಿ ರೂಪು ಗೊಳಿಸುವ ಮೂಲಕ ವಿದ್ಯಾರ್ಥಿಗಳನ್ನು ಪಾಲಿಕೆಯ ಶಾಲೆಗಳ ಕಡೆಗೆ ಆಕರ್ಷಿಸುವುದು ಬಿಬಿಎಂಪಿ ರೋಷಿಣಿ ಯೋಜನೆಯ ಉದ್ದೇಶವಾಗಿದೆ. 

ಏನಿದು ಬಿಬಿಎಂಪಿ ರೋಷಿಣಿ ಯೋಜನೆ?
ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವ ರೀತಿಯಲ್ಲೇ ಪಾಲಿಕೆ ಶಾಲೆ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ಒದಗಿಸುವ ಪ್ರಮುಖ ಉದ್ದೇಶದಿಂದ “ಬಿಬಿಎಂಪಿ ರೋಷಿಣಿ’ ಯೋಜನೆ ಜಾರಿಗೆ ತರಲಾಗಿದೆ. ಮಕ್ಕಳು ಶಿಕ್ಷಣದ ಜತೆ ಜತೆಗೆ ಸಾಂಸ್ಕೃತಿಕ, ಕ್ರೀಡೆ, ವ್ಯಕ್ತಿತ್ವ ವಿಕಸನ, ಸಂವಹನ ಕೌಶಲ್ಯ, ಕಂಪ್ಯೂಟರ್‌ ಹೀಗೆ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಕೂಡ ಯೋಜನೆಯ ಭಾಗವಾಗಿದೆ. ಆ ನಿಟ್ಟಿನಲ್ಲಿ ದತ್ತು ಪಡೆದ ಸಂಸ್ಥೆಗಳು ಪಾಲಿಕೆಯ ಶಾಲಾ-ಕಾಲೇಜುಗಳ ಚಿತ್ರಣವನ್ನು ಮುಂದಿನ ಐದು ವರ್ಷಗಳಲ್ಲಿ ಸಂಪೂರ್ಣವಾಗಿ ಬದಲಿಸಲಿವೆ.

“ಮಾದರಿ’ ಆಗಲಿರುವ „ ಶಾಲಾ-ಕಾಲೇಜುಗಳು
„ ಅಸ್ಟಿನ್‌ಟೌನ್‌ ಬಾಲಕಿಯರ ಪ್ರೌಢಶಾಲೆ 
„ ಗಾಂಧಿನಗರ ಪ್ರೌಢಶಾಲೆ
„ ಜಯನಗರ 1ನೇ ಬ್ಲಾಕ್‌ ಪ್ರೌಢಶಾಲೆ
„ ಮೂಡಲಪಾಳ್ಯ ಪ್ರೌಢಶಾಲೆ
„ ಕ್ಲೀವ್‌ಲ್ಯಾಂಡ್‌ಟೌನ್‌, ಪ್ರೌಢಶಾಲೆ ಹಾಗೂ ಕಾಲೇಜು
„ ಭೈರಸಂದ್ರ ಪ್ರೌಢಶಾಲೆ ಹಾಗೂ ಕಾಲೇಜು

ಯೋಜನೆ ಅನುಕೂಲವೇನು?
„ ಶಿಕ್ಷಕರಲ್ಲಿ 21ನೇ ಶತಮಾನ ಶಿಕ್ಷಣ ಶೈಲಿಯನ್ನು ರೂಪಿಸಬಹುದು
„ ವಿದ್ಯಾರ್ಥಿಗಳಿಗೆ ಡಿಜಿಟಲ್‌ ವಿಷಯಗಳ ಕುರಿತು ತಿಳಿಯುತ್ತದೆ
„ ಸ್ಯಾಟಲೈಟ್‌ ಹಾಗೂ ಆನ್‌ಲೈ ಶಿಕ್ಷಣ
„ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಮೌಲ್ಯಮಾಪನ
„ ಶಿಕ್ಷಣ ಗುಣಮಟ್ಟ ಹೆಚ್ಚಾಗಲು ರ್‍ಯಾಂಕಿಂಗ್‌ ವ್ಯವಸ್ಥೆ ಅನುಕೂಲ

ವೆಂ. ಸುನೀಲ್‌ಕುಮಾರ್‌

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.