ಬೆಂಗಳೂರು ಪುಸ್ತಕೋತ್ಸವಕ್ಕೆ ಚಾಲನೆ
Team Udayavani, Oct 16, 2018, 2:25 PM IST
ಬೆಂಗಳೂರು: ತಾಳೆಗರಿಯಿಂದ ಹಿಡಿದು ಸುಧಾರಿತ ತಂತ್ರಜ್ಞಾನದ ಕಾಲದಲ್ಲಿಯೂ ಪುಸ್ತಕಗಳು ತನ್ನದೇ ಪ್ರಾಮುಖ್ಯತೆ ಪಡೆದಿವೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ಅಭಿಪ್ರಾಯಪಟ್ಟಿದ್ದಾರೆ.
ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಸೋಮವಾರದಿಂದ ಆರಂಭವಾಗಿ ರುವ 13ನೇ ಬೆಂಗಳೂರು ಪುಸ್ತಕೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ಆಸ್ತಿ ಹಂಚುವ ವೇಳೆ ಮನೆಯಲ್ಲಿ ಮಹಾಭಾರತ ಪುಸ್ತಕವಿದ್ದರೂ ಕೂಡ ಅದನ್ನು ಹಂಚಿಕೆ ಮಾಡಲಾಗು ತ್ತಿತ್ತು. ಮಹಾಭಾರತ ಪುಸ್ತಕಕ್ಕಾಗಿ ಆಸ್ತಿಯನ್ನೇ ಬಿಟ್ಟುಕೊಡುತ್ತಿದ್ದ ಉದಾಹರ ಣೆಗಳಿವೆ ಎಂದು ತಿಳಿಸಿದರು.
ನಮ್ಮ ದೇಶದ ಪುಸ್ತಕ ಸಂಸ್ಕೃತಿಗೂ ವಿದೇಶಿ ಪುಸ್ತಕದ ಸಂಸ್ಕೃತಿಗೂ ಸಾಕಷ್ಟು ವ್ಯತ್ಯಾಸವಿದೆ. ಒಂದು ನಾಟಕ ನೋಡುವ ವೇಳೆ ತನಗೆ ಅರಿವಿಲ್ಲದಂತೆ ಮೈ ಮರೆಯುವ ತನ್ಮಯತೆ ಪುಸ್ತಕ ಓದುವಾಗಲೂ ಕಾಣಬಹುದು. ವಿದೇಶಗಳಲ್ಲಿ ಇದು ಸಾಧ್ಯವಿಲ್ಲ ಎಂದು ಹೇಳಿದರು.
ಕರ್ನಾಟಕ ಪುಸ್ತಕ ಅಕಾಡೆಮಿ ಅಧ್ಯಕ್ಷೆ ಡಾ. ವಸುಂಧರಾ ಭೂಪತಿ ಮಾತನಾಡಿ, ಪುಸ್ತಕೋತ್ಸವದ ಮೂಲಕ ಈ ಬಾರಿಯ ದಸರಾ ಆಚರಣೆ ಮಾಡುವ ಸಂಸ್ಕೃತಿ ಎಲ್ಲರೂ ಅಳವಡಿಸಿಕೊಳ್ಳಬೇಕು. ಪ್ರತಿ ಮನೆಯಲ್ಲಿ ಗ್ರಂಥಾಲಯಕ್ಕಾಗಿ ಕೊಠಡಿಗಳನ್ನು ನಿರ್ಮಿಸುವ ಮನೋಭಾವ ಎಲ್ಲರಲ್ಲಿಯೂ ಬೆಳೆಯಬೇಕು ಎಂದು ಸಲಹೆ ನೀಡಿದರು.
ಕಸಾಪ ಅಧ್ಯಕ್ಷ ಮನು ಬಳಿಗಾರ್ ಮಾತನಾಡಿದರು. ಎಸ್ಬಿಐ ವಾಯುವ್ಯ ವಿಭಾಗದ ಪ್ರಾದೇಶಿಕ ಪ್ರಧಾನ ವ್ಯವಸ್ಥಾಪಕ ವಿನ್ಸೆಂಟ್ ಎಂ.ಡಿ., ಬೆಂಗಳೂರು ಪುಸ್ತಕ ಪ್ರಕಾಶಕರ ಸಂಘ ಅಧ್ಯಕ್ಷ ರಾಮಚಂದ್ರ ಎ.ಎನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!