ಲೋಕಾ ಚುನಾವಣೆಗೆ ವಿವಿಪ್ಯಾಟ್‌ ಕಡ್ಡಾಯ


Team Udayavani, Oct 17, 2018, 12:53 PM IST

loka.jpg

ಬೆಂಗಳೂರು: 2019ರ ಲೋಕಸಭಾ ಚುನಾವಣಾ ಮತದಾನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪೂರ್ವಸಿದ್ಧತಾ ಕಾರ್ಯಗಳು ಈಗಾಗಲೇ ಆರಂಭವಾಗಿದ್ದು, ಇದೇ ಮೊದಲ ಬಾರಿಗೆ ಬೆಂಗಳೂರು ನಗರ ವ್ಯಾಪ್ತಿಯ ಪ್ರತಿಯೊಂದು ಮತಗಟ್ಟೆಯಲ್ಲೂ ವಿವಿ ಪ್ಯಾಟ್‌ಅನ್ನು ಕಡ್ಡಾಯಗೊಳಿಸಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ಎಂ.ವಿಜಯಶಂಕರ್‌  ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾರದರ್ಶಕವಾಗಿ ಚುನಾವಣೆ ನಡೆಸಲು ಕೇಂದ್ರ ಚುನಾವಣೆ ಆಯೋಗ ಬದ್ಧವಾಗಿದೆ. ಈಗಾಗಲೇ ಬಿಇಎಲ್‌ ತಾಂತ್ರಿಕ ಸಿಬ್ಬಂದಿ ಸಹಯೋಗದೊಂದಿಗೆ ವಿದ್ಯುನ್ಮಾನ ಮತಯಂತ್ರಗಳ ಪ್ರಥಮ ಹಂತದ ತಪಾಸಣೆ (ಎಫ್ಎಲ್ಸಿ)ಪ್ರಾರಂಭಿಸಲಾಗಿದ್ದು,

ಇವಿಎಂ ಯಂತ್ರಗಳ ಬಗ್ಗೆ ಜನಪ್ರತಿನಿಧಿಗಳಿಗೆ ಅನುಮಾನಗಳಿದ್ದರೆ ಅದನ್ನು ಬಗೆ ಹರಿಸಿಕೊಳ್ಳಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು. ಚುನಾವಣೆಯಲ್ಲಿ 5,225 ಬ್ಯಾಲೆಟ್‌ ಯೂನಿಟ್‌, 3,985 ಕಂಟ್ರೋಲ್ ಯೂನಿಟ್‌ ಹಾಗೂ 4,276  ವಿವಿ ಪ್ಯಾಟ್‌ ಅಳವಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ವಿವರಿಸಿದರು.

ಎಷ್ಟು ಮತದಾರರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಏಳು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 32,00,942 ಮತದಾರರಿದ್ದು,  ಇದರಲ್ಲಿ 1,65,134 ಪುರುಷರು 15,05,808 ಮಹಿಳೆಯರು ಸೇರಿದ್ದಾರೆ. ಮತಗಟ್ಟೆಗಳ ಪುನರ್‌ ವಿಂಗಡಣೆ ನಂತರ 2,997 ಮತಗಟ್ಟೆಗಳಿದ್ದು ಮತದಾರರ ಹೆಸರು ಕೈಬಿಟ್ಟಿದ್ದರೆ ಅಂತಹವರು ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಮತದಾರರ ಗುರುತಿನ ಚೀಟಿ ಹೊಂದಿದ ಮಾತ್ರಕ್ಕೆ ನೋಂದಾಯಿತ ಮತದಾರರಾಗುವುದಿಲ್ಲ. ಹೊಸದಾಗಿ ಮತದಾರರಾಗಿ ನೋಂದಣಿಯಾಗಲು, ನಮೂನೆ-6ರಲ್ಲಿ ಭರ್ತಿ ಮಾಡಿ, ಅದರೊಂದಿಗೆ ಒಂದು ಭಾವಚಿತ್ರ, ವಿಳಾಸ ದೃಢೀಕರಣ ಹಾಗೂ ಸಹಿ ಮೂಲಕ ಸಲ್ಲಿಸಬಹುದು ಎಂದು ಹೇಳಿದರು.
ಯಲಹಂಕದಲ್ಲಿ ಕ್ಷೇತ್ರದಲ್ಲಿ-376 ಬ್ಯಾಟರಾಯನಪುರ-397, ಯಶವಂತಪುರ-461, ದಾಸರಹಳ್ಳಿ-409,

ಮಹದೇವಪುರ-466, ಬೆಂಗಳೂರು ದಕ್ಷಿಣ-520, ಆನೇಕಲ್‌-368 ಮತಗಟ್ಟೆಗಳಿವೆ. 2019, ಜ.1ಕ್ಕೆ 18ವರ್ಷ ತುಂಬಿದ ಪ್ರತಿಯೊಬ್ಬರು ಮತದಾನಕ್ಕೆ ಅರ್ಹರಾಗಿದ್ದು, ವಯಸ್ಸಿನ ದೃಢೀಕರಣ ಪ್ರಮಾಣ ಪತ್ರ, ಎಸ್ಸೆಸ್ಸೆಲ್ಸಿ ಅಂಕಪಟ್ಟಿಯ ಪ್ರತಿಯನ್ನು ನಮೂನೆ-6ರಲ್ಲಿ ಲಗತ್ತಿಸಿ ಕಂದಾಯ ಇಲಾಖೆ, ಬೆಂಗಳೂರು ಒನ್‌ ಹಾಗೂ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ನುಡಿದರು.

ಗುರುತಿನ ಚೀಟಿ ಪಡೆಯಲು ಅಥವಾ ಗುರುತಿನ ಚೀಟಿಯಲ್ಲಿ ಯಾವುದೇ ತಪ್ಪುಗಳಿದ್ದರೆ ಅದನ್ನು ಸರಿಪಡಿಸಲು  www.ceokarnataka.kar.nic.in ಅಥವಾ http://www.ceokarnataka.kar.nic.in/ ಅನ್ನು ಸಂಪರ್ಕಿಸಬಹುದಾಗಿದೆ. ಅಲ್ಲದೆ ವೆಬ್‌ ಸೈಟ್‌ ಮೂಲಕ ಹೆಸರನ್ನು ನೋಂದಯಿಸಬಹುದಾಗಿದೆ.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.