ವಿಷ್ಣುವರ್ಧನ್‌ ಕುರಿತ ಸಮಗ್ರ ಸಂಪುಟ


Team Udayavani, Oct 17, 2018, 12:54 PM IST

vishnuvardhan.jpg

ಬೆಂಗಳೂರು: ಬೆಳ್ಳಿತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಕನ್ನಡದ ಮೇರುನಟ ಡಾ. ವಿಷ್ಣುವರ್ಧನ್‌ ಅವರ ಸಮಗ್ರ ಸಂಪುಟವನ್ನು ಪ್ರಕಟಿಸುವ ಕುರಿತು ಕನ್ನಡ ಸಾಹಿತ್ಯ ಪರಿಷತ್ತು ಆಲೋಚನೆ ನಡೆಸಿದೆ ಎಂದು ಕಸಾಪ ಅಧ್ಯಕ್ಷ  ಡಾ.ಮನು ಬಳಿಗಾರ್‌ ಹೇಳಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಡಾ.ವಿಷ್ಣುವರ್ಧನ ಕಲಾ ದತ್ತಿ ಪ್ರಶಸ್ತಿ’ಯನ್ನು ಹಿರಿಯ ಚಿತ್ರ ನಟ ರಮೇಶ್‌ ಭಟ್‌ ಅವರಿಗೆ ಪ್ರದಾನ ಮಾಡಿ ಮಾತನಾಡಿದ ಅವರು ವಿಷ್ಣುವರ್ಧನ್‌ ಅವರ ಸಮಗ್ರ ಸಂಪುಟದ ಪ್ರಕಟಣೆಯ ಹಕ್ಕನ್ನು ಪರಿಷತ್‌ಗೆ ನೀಡಿದ್ದೇ ಆದರೆ ಪರಿಷತ್‌ ವತಿಯಿಂದಲೇ ಸಂಪುಟ ಪ್ರಕಟಿಸಲಾಗುವುದು ಎಂದು ಭರವಸೆ ನೀಡಿದರು.

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ವಿಷ್ಣು ಸ್ಮಾರಕ ನಿರ್ಮಾಣ ಕಾರ್ಯ ಶೀಘ್ರವೇ ಆರಂಭಿಸುವಂತೆ ಪರಿಷತ್‌ ವತಿಯಿಂದ ಸರಕಾರದ ಮೇಲೆ ಒತ್ತಡ ತರಲಾಗುವುದು. ಮುಖ್ಯಮಂತ್ರಿಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಚಿತ್ರರಂಗದವರೇ ಆಗಿರುವುದರಿಂದ ವಿಷ್ಣು ಸ್ಮಾರಕ ನಿರ್ಮಾಣದ ಕುರಿತು ಮಾತುಕತೆ ನಡೆಸುವುದಾಗಿ ತಿಳಿಸಿದರು.

ವಿಷ್ಣವರ್ಧನ ದತ್ತಿ ಪ್ರಶಸ್ತಿಗೆ ಪಾತ್ರರಾಗಿರುವ ಹಿರಿಯ ನಟ ರಮೇಶ್‌ ಭಟ್‌, ವಿಷ್ಣು ವರ್ಧನ್‌ ಅವರ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.ಉತ್ತಮ ಅಭಿನಯದ ಮೂಲಕ ನಾಡಿನ ಜನರ ಮನಸ್ಸನ್ನು ಗೆದ್ದಿದ್ದಾರೆ.ರಮೇಶ್‌ ಭಟ್‌ ಅವರಿಗೆ ತಮ್ಮ ಗೆಳೆಯನ ಹೆಸರಿನಲ್ಲಿ ಪ್ರಶಸ್ತಿ ದೊರಕಿರುವುದು ಸಂತಸವಾಗಿದೆ ಎಂದರು.

ಸಂದರ್ಭದಲ್ಲಿ ಮಾತನಾಡಿದ ಚಿತ್ರಕಲಾವಿದ ರಮೇಶ್‌ ಭಟ್‌, ನನ್ನ ಸಿನಿ ಪಯಣದಲ್ಲಿ ಹಲವಾರು ಪ್ರಶಸ್ತಿ ಹಾಗೂ ಗೌರವಗಳನ್ನು ಪಡೆದಿದ್ದೇನೆ. ಆದರೆ ವಿಷ್ಣುವರ್ಧನ್‌ ಹೆಸರಿನ ಈ ಪ್ರಶಸ್ತಿ ನನ್ನ ಮಡಿಲು ಸೇರಿರುವುದು ಮನಸ್ಸಿಗೆ ತುಂಬಾ ಖುಷಿಕೊಟ್ಟಿದೆ. ಗೌರವ ನನ್ನ ಜವಾಬ್ದಾರಿಯನ್ನೂ ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಿದರು.

ಡಾ. ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್‌ ಮಾತನಾಡಿ, “ವಿಷ್ಣುವರ್ಧನ್‌ ಅವರ ಸ್ಮಾರಕ ನಿರ್ಮಾಣ ಕಾರ್ಯ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕಸಾಪ ಧನಿ ಎತ್ತಬೇಕು. ವಿಷ್ಣು ಸ್ಮಾರಕ ನಿರ್ಮಾಣ ಕಾರ್ಯ ಸರಕಾರದಿಂದ ಆಗದಿದ್ದಾರೆ ಡಾ. ವಿಷ್ಣು ಸೇನಾ ಸಮಿತಿ ವತಿಯಿಂದಲೇ ನಿರ್ಮಿಸುತ್ತೇವೆ. ಅದಕ್ಕಾದರೂ ಸರಕಾರ ಅನುಮತಿ ನೀಡಬೇಕು ಎಂದರು.

ಡಾ.ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್‌, ಕಸಪಾ ಕೋಶಾಧ್ಯಕ್ಷ ಮಲ್ಲಿಕಾರ್ಜುನಪ್ಪ, ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ ಮತ್ತಿತರರು ಉಪಸ್ಥಿತರಿದ್ದರು.

ಟೀ ಅಂಗಡಿಯಿಂದ ಚಿತ್ರರಂಗಕ್ಕೆ: ದೀರ್ಘ‌ವಾದ ಪರಂಪರೆಯನ್ನು ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನನ್ನ ಬಾಲ್ಯದ ಬಹುತೇಕ ಸಮಯ ಕಳೆದಿದ್ದೇನೆ. 60ವರ್ಷದ ಹಿಂದೆ  ಪರಿಷತ್ತು ಹಿಂದಿರುವ ಮಾಡಲ್‌ ಹೈಸ್ಕೂಲ್‌ನಲ್ಲಿ ಓದುತ್ತಿದ್ದ ನಾನು ನಾಟಕ, ಆಟ, ಗೆಳೆಯರೊಂದಿಗೆ ಹರಟೆ ಹೀಗೆ ಬಹುತೇಕ ಸಮಯವನ್ನು ಈ ಜಾಗದಲ್ಲೇ ಕಳೆದಿದ್ದೇನೆ.

ನಾಟಕದ ಗೀಳಿನಿಂದ ಅರ್ಧದಲ್ಲೇ ಓದು ಕೈಬಿಟ್ಟ ನಾನು ಗಾಂಧಿಬಜಾರ್‌ನಲ್ಲಿ ಟೀ ಅಂಗಟಿ ಇಟ್ಟುಕೊಂಡಿದ್ದ ನನ್ನನ್ನು ಚಿತ್ರರಂಗ ಈ ಮಟ್ಟಕ್ಕೆ ಬೆಳೆಸಿದೆ. ಬಾಲ್ಯದಿಂದಲೇ ವಿಷ್ಣು ಪರಿಚಯವಿತ್ತಾದರೂ, ನಿರ್ದೇಶಕ ಭಾರ್ಗವ ಅವರ ಜೀವನಚಕ್ರ ಚಿತ್ರದ ಮೂಲಕ ನನ್ನ ವಿಷ್ಣುವರ್ಧನ್‌ ಅವರೊಂದಿನ ಸಂಬಂಧ ಮತ್ತಷ್ಟು ಗಟ್ಟಿಗೊಂಡಿತು. ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.