ಜಯದೇವದಿಂದ 200 ಬಡರೋಗಿಗಳಿಗೆ ಉಚಿತ ಚಿಕಿತ್ಸೆ
Team Udayavani, Oct 19, 2018, 1:13 PM IST
ಬೆಂಗಳೂರು: ನಗರದ ಖ್ಯಾತ ಜಯದೇವ ಹೃದ್ರೋಗ ವಿಜಾnನ ಮತ್ತು ಸಂಶೋಧನಾ ಸಂಸ್ಥೆ (ಎಸ್ಜೆಐಸಿಆರ್) ಆಯೋಜಿಸಿದ್ದ ಆಂಜಿಯೋಪ್ಲಾಸ್ಟಿ ಕಾರ್ಯಾಗಾರದಲ್ಲಿ ಸುಮಾರು 200 ಬಡರೋಗಿಗಳಿಗೆ ಯಶಸ್ವಿಯಾಗಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನಡೆಸಿ ಉಚಿತವಾಗಿ ಸ್ಟಂಟ್ ಅಳವಡಿಸಲಾಗಿದೆ.
ಸೋಮವಾರ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಮಾತನಾಡಿ, 200 ಆಂಜಿಯೋಪ್ಲಾಸ್ಟಿ ಚಿಕಿತ್ಸೆಗಳನ್ನು ಕೇವಲ 4 ದಿವಸಗಳಲ್ಲಿ ಮಾಡುವುದು ಒಂದು ಬೃಹತ್ ಸಾಧನೆ. ಈ ಅಸಾಧಾರಣ ಕಾರ್ಯಾಗಾರವನ್ನು ಯಶಸ್ವಿಯಾಗಿ ನಿರ್ವಹಿಸುವಲ್ಲಿ ನಮ್ಮಲ್ಲಿರುವ ಏಳು ಕ್ಯಾತ್ಲ್ಯಾಬ್ಗಳು, 75 ನುರಿತ ವೈದ್ಯರು, ತಂತ್ರಜ್ಞರು, ಶುಶ್ರೂಷಕರು ಹಾಗೂ ನೌಕರರರು ಕಾರಣ.
ಅವರ ಕುಶಲತೆ, ಕಾರ್ಯದಕ್ಷತೆ ಮತ್ತು ಸಮರ್ಪಣಾ ಭಾವದ ಸೇವೆಯ ಜತೆ ಗುಣಮಟ್ಟದ ಮೂಲಭೂತ ಸೌಕರ್ಯಗಳ ಪೂರೈಕೆಯಿಂದ ಇದು ಸಾಧ್ಯವಾಗಿದೆ. ಚಿಕಿತ್ಸೆ ಪಡೆದವರೆಲ್ಲರೂ ಬಡರೈತರು, ದಿನಗೂಲಿ ನೌಕರರು, ಆಟೋರಿûಾ ಚಾಲಕರು, ಬೀದಿಬದಿ ಕಾರ್ಮಿಕರು ಹಾಗೂ ನಿಸ್ಸಹಾಯಕ ಹಿರಿಯ ನಾಗರಿಕರರಾಗಿದ್ದಾರೆ. ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳ, ಆಂಧ್ರ ಮತ್ತು ತೆಲಂಗಾಣದ ಹೃದ್ರೋಗಿಗಳಿಗೂ ಚಿಕಿತ್ಸೆ ನೀಡಲಾಗಿದೆ ಎಂದರು.
ಡಾ. ಗೋವಿಂದರಾಜು ಸುಬ್ರಮಣಿ ಹಾರ್ಟ್ ಫೌಂಡೇಷನ್, ಇಲಿನಾಯಿಸ್, ಅಮೆರಿಕ ಮತ್ತು ಮೆಡಾóನಿಕ್ ವ್ಯಾಸ್ಕಾಲರ್ ಡಿವಿಷನ್ ಕಾರ್ಯಾಗಾರಕ್ಕೆ ಸ್ಟಂಟ್ಗಳನ್ನು ಉದಾರವಾಗಿ ನೀಡಿರುವುದು ಶ್ಲಾಘನೀಯ. ಡಾ. ಜಿ. ಸುಬ್ರಮಣಿರವರ ದೇಶಾಭಿಮಾನ, ಸಾಮಾಜಿಕ ಕಳಕಳಿ, ಉದಾರ ಕೊಡುಗೆ ಹಾಗೂ ಕಳೆದ ಒಂಬತ್ತು ವರ್ಷಗಳಿಂದ ಬಡರೋಗಿಗಳ ಚಿಕಿತ್ಸೆಯಲ್ಲಿ ಭಾಗವಹಿಸುತ್ತಿರುವುದು,
ಇತರೆ ಅನಿವಾಸಿ ಭಾರತೀಯ ವೈದ್ಯರುಗಳಿಗೆ ಮಾದರಿಯಾಗಿದೆ. ಮೆಡಾóನಿಕ್ ಕಂಪನಿ ಸತತವಾಗಿ 11 ವರ್ಷಗಳಿಂದ ಸಹಾಯಹಸ್ತವನ್ನು ಮುಂದುವರಿಸಿರುವುದು ಹಾಗೂ ನಮ್ಮ ಜನರಿಗೆ ಸಹಾಯ ಮಾಡುವ ಅವಕಾಶ ನನಗೆ ದೊರೆತದ್ದು ನನ್ನ ಅದೃಷ್ಟ ಎಂದು ಡಾ. ಮಂಜುನಾಥ್ ತಿಳಿಸಿದರು.
ಶೇ. 35 ರಷ್ಟು ಮಹಿಳಾ ರೋಗಿಗಳು: ಕಾರ್ಯಾಗಾರದಲ್ಲಿ ಶೇ. 25 ರೋಗಿಗಳು 50ವರ್ಷಕ್ಕೂ ಕಡಿಮೆ ವಯಸ್ಕರಾಗಿದ್ದು, 28 ವರ್ಷದ ಕಿರಿಯ ಹಾಗೂ 81 ವರ್ಷದ ಹಿರಿಯ ನಾಗರಿಕರಿಗೆ ಚಿಕಿತ್ಸೆ ಮಾಡಲಾಯಿತು. ಹೆಚ್ಚಿನ ರೋಗಿಗಳಲ್ಲಿ ಧೂಮಪಾನ, ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ, ಮಿತಿಮೀರಿದ ಕೊಬ್ಬಿನಾಂಶ ಕಂಡುಬಂದಿದೆ. ಚಿಕಿತ್ಸೆ ಪಡೆದ 200 ರೋಗಿಗಳಲ್ಲಿ ಶೇ. 35 ರಷ್ಟು ಮಹಿಳಾ ರೋಗಿಗಳಾಗಿದ್ದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ