ನಗರದಲ್ಲಿ ಭಾರೀ ಮಳೆ; ನಾಗರಿಕರ ಪರದಾಟ


Team Udayavani, Feb 10, 2019, 6:34 AM IST

nagarada.jpg

ಬೆಂಗಳೂರು: ತಮಿಳುನಾಡು ಹಾಗೂ ದಕ್ಷಿಣ ಒಳನಾಡು ಭಾಗದಲ್ಲಿ (ಕಡಿಮೆ ಒತ್ತಡದ ತಗ್ಗು) ಟ್ರಫ್ ಉಂಟಾದ ಪರಿಣಾಮ ರಾಜಧಾನಿಯಲ್ಲಿ ಶನಿವಾರ ಸತತ ಮೂರು ಗಂಟೆಗಳ ಕಾಲ ಸುರಿದ ಮಳೆಗೆ ಸಾರ್ವಜನಿಕರು ಪರದಾಡಿದರು.

ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಆರಂಭವಾದ ಮಳೆ ಸಂಜೆ 7.30ವರೆಗೆ ಭರ್ಜರಿ ಮಳೆ ಸುರಿದು ನಗರವನ್ನು ತಂಪಾಗಿಸಿದೆ. ಕೆಲ ದಿನಗಳಿಂದ ತಾಪಮಾನ ನಿಧಾನವಾಗಿ 32 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಕಾಣುತ್ತಿದ್ದು, ಈ ಅಂಶವೂ ಕೂಡಾ ಮಳೆ ಸುರಿಯಲು ಕಾರಣವಾಗಿದೆ.

ಸಂಜೆ ವೇಳೆ ಮಳೆ ಸುರಿದಿದ್ದರಿಂದ ಕಚೇರಿಗಳಿಂದ ಮನೆ ಸೇರುವವರು, ಕಾಲೇಜು ವಿದ್ಯಾರ್ಥಿಗಳು, ಬೀದಿ ಬದಿ ವ್ಯಾಪಾರಸ್ಥರು ಸೇರಿದಂತೆ ನಗರದ ಜನತೆ ತೊಂದರೆ ಅನುಭವಿಸುವಂತಾಯಿತು. ಮುಖ್ಯವಾಗಿ ಪುರಭವನ, ಮೈಸೂರು ರಸ್ತೆ ಜಂಕ್ಷನ್‌, ಯಶವಂತಪುರ, ಮೆಜೆಸ್ಟಿಕ್‌, ಚಾಲಕ್ಯ ಸರ್ಕಲ್‌ ಸೇರಿದಂತೆ ಹಲವೆಡೆ ಸಿಗ್ನಲ್‌ಗ‌ಳಲ್ಲಿ ವಾಹನ ದಟ್ಟಣೆ ಕಂಡುಬಂತು. 

ರಸ್ತೆ ಹಾಗೂ ಪಾದಾಚಾರಿ ಮಾರ್ಗದಲ್ಲಿನ ಗುಂಡಿಗಳಲ್ಲಿ ನೀರುತುಂಬಿ, ಮಾರ್ಗ ಕಾಣದಂತಾಗಿ ವಾಹನ ಸವಾರರು ಮತ್ತು ಪಾದಚಾರಿಗಳು ತೊಂದರೆಗೀಡಾದರು. ಓಕಳಿಪುರ ಕೆಳಸೇತುವೆ, ನಾಯಂಡಹಳ್ಳಿ, ಮಂತ್ರಿ ಮಾಲ್‌ ಎದುರು, ಮೆಜೆಸ್ಟಿಕ್‌ ಸೇರಿದಂತೆ ಹಲವು ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು ವಾಹನ ಸವಾರರು ಪರದಾಡಿದರು. ಜತೆಗೆ ತಗ್ಗು ಪ್ರದೇಶಗಳಿರುವ ಬಡಾವಣೆಗಳ ಕೆಲ ಮನೆಗಳಿಗೆ ನೀರು ನುಗ್ಗಿದೆ. ಜಯನಗರ ಮೆಟ್ರೋ ನಿಲ್ದಾಣದ ಬಳಿ ನಿಲ್ಲಿಸಿದ್ದ ಕಾರಿನ ಒಳಗೆ ನೀರು ನುಗ್ಗಿದ ಘಟನೆ ನಡೆದಿದೆ.

9ಕ್ಕೂ ಹೆಚ್ಚು ಮರಗಳು ಧರೆಗೆ: ಜೋರಾಗಿ ಸುಳಿದ ಮಳೆಯಿಂದಾಗಿ ಗಾಂಧಿನಗರದಲ್ಲಿ 2, ಎಂ.ಜಿ.ರಸ್ತೆ, ಬಸವನಗುಡಿ, ನಿಮಾನ್ಸ್‌ ಆಸ್ಪತ್ರೆ, ಕೆ.ಆರ್‌.ರಸ್ತೆ, ಕೋರಮಂಗಲ, ವಿಜಯನಗರ, ಬಸವೇಶ್ವರ ನಗರ, ಮಹಾಲಕ್ಷ್ಮೀ ಬಡಾವಣೆಯಲ್ಲಿ ತಲಾ 1 ಮರ ಸೇರಿದಂತೆ 9ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ. ಮರಗಳ ತೆರವು ಕಾರ್ಯಕ್ಕೆ ಬಿಬಿಎಂಪಿ ಅರಣ್ಯ ವಿಭಾಗದ ಸಿಬ್ಬಂದಿ ಧಾವಿಸಿದ್ದು, ರಾತ್ರಿವರೆಗೂ ತೆರವು ಕಾರ್ಯಾಚರಣೆ ನಡೆಸಿದರು.

ಮಳೆಯ ಪ್ರಮಾಣ: ಸಂಪಂಗಿರಾಮ ನಗರದಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ಮಳೆಯ ಪ್ರಮಾಣ 67 ಮಿ.ಮೀ. ದಾಖಲಾಗಿದೆ. ಬಸವನಗಡಿ 66 ಮಿ.ಮೀ., ಪಟ್ಟಾಭಿರಾಮನಗರ 58 ಮಿ.ಮೀ., ಹೊಯ್ಸಳನಗರ 43 ಮಿ.ಮೀ., ಲಾಲ್‌ಬಾಗ್‌ 38 ಮಿ.ಮೀ., ಎಚ್‌ಎಸ್‌ಆರ್‌ ಲೇಔಟ್‌ 36 ಮಿ.ಮೀ., ಕೊನೇನ ಅಗ್ರಹಾರ 24 ಮಿ.ಮೀ., ಬೆಳ್ಳಂದೂರು 17 ಮಿ.ಮೀ.,

ರಾಜರಾಜೇಶ್ವರಿ ನಗರ 16 ಮಿ.ಮೀ., ಅಟ್ಟೂರು 13 ಮಿ.ಮೀ., ಯಲಹಂಕ, ಸಾರಕ್ಕಿ 12 ಮಿ.ಮೀ., ಬೊಮ್ಮನಹಳ್ಳಿ 10 ಮಿ.ಮೀ. ಮಳೆಯ ಬಿದ್ದಿರುವುದಾಗಿ ದಾಖಲಾಗಿದೆ. ಉಳಿದಂತೆ ತಾವರೆಕೆರೆ, ಯಶವಂತಪುರ, ಕೆಂಗೇರಿ, ಕೋರಮಂಗಲ, ಬಿಳೇಕಹಳ್ಳಿ, ದೊರೆಸಾನಿಪಾಳ್ಯ, ಅಗ್ರಹಾರ ದಾಸರಹಳ್ಳಿ, ರಾಜಮಹಲ್‌ ಗುಟ್ಟಹಳ್ಳಿ, ದಯಾನಂದ ನಗರ ಸೇರಿದಂತೆ ವಿವಿಧೆಡೆ ತುಂತುರು ಮಳೆ ಬಿದ್ದಿದೆ.

ಮಳೆ ಮುಂಜಾಗ್ರತೆಗೆ ಡಿಸಿಎಂ ಸೂಚನೆ: ನಗರದಲ್ಲಿ ಅಕಾಲಿಕ ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್‌ ಸೂಚಿಸಿದ್ದಾರೆ. ಶನಿವಾರ ಸಂಜೆ ದಿಢೀರ್‌ ಮಳೆ ಆರಂಭವಾದ ಹಿನ್ನೆಲೆಯಲ್ಲಿ ನಗರದ ಕೆಲ ರಸ್ತೆಗಳಲ್ಲಿ ದಟ್ಟಣೆ ಉಂಟಾಗಿತ್ತು.

ಜತೆಗೆ 10ಕ್ಕೂ ಹೆಚ್ಚು ಕಡೆಗಳಲ್ಲಿ ಮರಗಳು ಉರುಳಿದರಿಂದ ಜನರು ತೊಂದರೆ ಅನುಭವಿಸುವಂತಾಗಿತ್ತು. ನಗರದಲ್ಲಿ ಇನ್ನೂ ಎರಡು ದಿನಗಳು ಮಳೆಯಾಗುವ ಸಾಧ್ಯತೆಯಿರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ್ದಾರೆ. ಇದರೊಂದಿಗೆ ಪಾಲಿಕೆಯ ನಿಯಂತ್ರಣ ಕೊಠಡಿಗಳು 24 ಗಂಟೆಗಳು ಕಾರ್ಯನಿರ್ವಹಿಸುವಂತೆ ಹಾಗೂ ಸಮಸ್ಯೆಗಳಿಗೆ ಪರಿಹಾರ ತಂಡಗಳು ಶೀಘ್ರ ತೆರಳಲು ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.