ಶಕ್ತಿ ಕೇಂದ್ರದಲ್ಲಿ ಆಯುಧ ಪೂಜೆ
Team Udayavani, Oct 19, 2018, 1:13 PM IST
ಬೆಂಗಳೂರು: ಶಕ್ತಿ ಕೇಂದ್ರ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಬುಧವಾರ ಸಚಿವರು, ಅಧಿಕಾರಿ, ನೌಕರರು ಆಯುಧ ಪೂಜಾ ಆಚರಣೆಯನ್ನು ಸಂಭ್ರಮದಿಂದ ನಡೆಸಿದರು.
ವಿಧಾನಸೌಧ ಹಾಗೂ ವಿಕಾಸಸೌಧದ ಪ್ರಮುಖ ಪ್ರವೇಶ ದ್ವಾರಗಳನ್ನು ಬಾಳೆಕಂಬ, ಮಾವಿನ ಸೊಪ್ಪು, ವಿಶೇಷ ಹೂವಿನ ಅಲಂಕಾರದಿಂದ ಸಿಂಗರಿಸಲಾಗಿತ್ತು. ಮುಖ್ಯಮಂತ್ರಿಗಳ ಕಚೇರಿ ಸಚಿವರು, ಮುಖ್ಯ ಕಾರ್ಯದರ್ಶಿಗಳು, ಹಿರಿಯ ಅಧಿಕಾರಿಗಳ ಕಚೇರಿ ಸೇರಿದಂತೆ ಎಲ್ಲ ಕಚೇರಿ, ಕೊಠಡಿ, ಉಗ್ರಾಣ, ಭದ್ರತಾ ಕೊಠಡಿಗಳನ್ನು ಹೂವಿನ ಅಲಂಕಾರ ಮಾಡಲಾಗಿತ್ತು.
ಪ್ರವೇಶ ದ್ವಾರಗಳು, ಕಚೇರಿ ಆವರಣ, ಕಾರಿಡಾರ್, ಲಿಫ್ಟ್, ಮೆಟ್ಟಿಲುಗಳ ಬಳಿ ಚಿತ್ತಾಕರ್ಷಕ ರಂಗೋಲಿ ಮೂಡಿದ್ದವು. ಕಂಪ್ಯೂಟರ್, ಲ್ಯಾಪ್ಟಾಪ್, ಕಪಾಟು, ಕಚೇರಿ ಸಾಮಗ್ರಿ, ಸಲಕರಣೆಗಳಿಗೂ ಪೂಜೆ ನೆರವೇರಿಸಿದ್ದು ಕಂಡುಬಂತು. ವಿಕಾಸಸೌಧ, ವಿಧಾನಸೌಧ ನಡುವಿನ ಮುನೇಶ್ವರ ದೇವಾಲಯದ ಬಳಿ ಸರ್ಕಾರಿ ಕಾರುಗಳನ್ನು ಸಾಲಾಗಿ ನಿಲ್ಲಿಸಿ ಪೂಜೆ ಮಾಡಲಾಯಿತು.
ಸಚಿವ ಸಂಪುಟದ ಸಭಾಂಗಣದ ಪ್ರವೇಶ ದ್ವಾರವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಮಧ್ಯಾಹ್ನ 2.30ರ ಸುಮಾರಿಗೆ ಸಚಿವ ಸಂಪುಟದ ಪ್ರವೇಶ ದ್ವಾರದ ಮುಂದೆ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಸಚಿವರಾದ ಎಚ್.ಡಿ.ರೇವಣ್ಣ, ಬಂಡೆಪ್ಪ ಕಾಶೆಂಪುರ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್