ನಗರದಲ್ಲಿ ಮತ್ತೆ ಕಾಂಪೋಸ್ಟ್‌ ಸಂತೆ


Team Udayavani, Oct 19, 2018, 1:13 PM IST

nagara-mathe.png

ಬೆಂಗಳೂರು: ನಗರದಲ್ಲಿ ವೈಜ್ಞಾನಿಕ ತ್ಯಾಜ್ಯ ವಿಂಗಡಣೆ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಮತ್ತೆ “ಕಾಂಪೋಸ್ಟ್‌ ಸಂತೆ’ ಆರಂಭಿಸುವ ಕುರಿತಂತೆ ಬಿಬಿಎಂಪಿಯಲ್ಲಿ ಚರ್ಚೆಗಳು ಆರಂಭವಾಗಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಿತ್ಯ ನಾಲ್ಕು ಸಾವಿರ ತ್ಯಾಜ್ಯ ಸೃಷ್ಟಿಯಾಗುತ್ತಿದೆ.

ಆದರೆ, ಶೇ.40ರಷ್ಟು ಪ್ರಮಾಣದ ತ್ಯಾಜ್ಯ ಮಾತ್ರ ವಿಂಗಡಣೆಯಾಗುತ್ತಿದ್ದು, ಉಳಿದ ತ್ಯಾಜ್ಯವನ್ನು ಕ್ವಾರಿಗಳಿಗೆ ನೇರವಾಗಿ ಸುರಿಯಲಾಗುತ್ತಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ತ್ಯಾಜ್ಯ ಸಮಸ್ಯೆ ಉದ್ಭವವಾಗುವ ಸಾಧ್ಯತೆಯಿದ್ದು, ಕೂಡಲೇ ಪಾಲಿಕೆಯ ಎಲ್ಲ ವಾರ್ಡ್‌ಗಳಲ್ಲಿ ಕಾಂಪೋಸ್ಟ್‌ ಸಂತೆಗಳನ್ನು ಆರಂಭಿಸುವ ಬಗ್ಗೆ ಆಡಳಿತ ಪಕ್ಷ ನಾಯಕ ಆಯುಕ್ತರಿಗೆ ಪತ್ರ ಬರೆದಿದ್ದಾರೆ. 

ನಗರದಲ್ಲಿ ದಿನದಿಂದ ದಿನಕ್ಕೆ ತ್ಯಾಜ್ಯ ಪ್ರಮಾಣ ಹೆಚ್ಚಾಗುತ್ತಿದ್ದು, ವಿಂಗಡಣೆ ಪ್ರಮಾಣ ಮಾತ್ರ ಕಡಿಮೆಯಾಗುತ್ತಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ತ್ಯಾಜ್ಯ ಸಮಸ್ಯೆ ಸೃಷ್ಟಿಯಾಗುವ ಆತಂಕ ಎದುರಾಗಿದೆ. ಆ ಹಿನ್ನೆಲೆಯಲ್ಲಿ ಪಾಲಿಕೆಯ ಎಲ್ಲ 198 ವಾರ್ಡ್‌ಗಳಲ್ಲಿ ತ್ಯಾಜ್ಯ ವಿಂಗಡಣೆಯ ಕುರಿತು ಜನರಿಗೆ ಜಾಗೃತಿ ಮೂಡಿಸುವ ಕಾಂಪೋಸ್ಟ್‌ ಸಂತೆಗಳನ್ನು ಆರಂಭಿಸುವಂತೆ ಪತ್ರದಲ್ಲಿ ಕೋರಿದ್ದಾರೆ. 

ಜಿ.ಪದ್ಮಾವತಿ ಅವರು ಮೇಯರ್‌ ಆಗಿದ್ದ ಸಂದರ್ಭದಲ್ಲಿ ಪ್ರತಿ ಭಾನುವಾರ ಒಂದೊಂದು ವಾರ್ಡ್‌ನಲ್ಲಿ ಕಾಂಪೋಸ್ಟ್‌ ಸಂತೆ ನಡೆಸಲಾಗುತ್ತಿತ್ತು. ಆದರೆ, ಪಾಲಿಕೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕಳೆದ ಒಂದು ವರ್ಷದಿಂದ ಯಾವುದೇ ವಾರ್ಡ್‌ನಲ್ಲಿ ಸಂತೆಗಳನ್ನು ಆಯೋಜನೆ ಮಾಡಿಲ್ಲ. ಇದರೊಂದಿಗೆ ತ್ಯಾಜ್ಯ ವಿಂಗಡಣೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನೂ ಹಮ್ಮಿಕೊಂಡಿಲ್ಲ. 

ಈ ಕುರಿತು ಸಾರ್ವಜನಿಕರು ಹಾಗೂ ಹಿರಿಯ ಪಾಲಿಕೆ ಸದಸ್ಯರು ಪಾಲಿಕೆಯ ಸಭೆಗಳಲ್ಲಿ ಮಾತನಾಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಆ ಹಿನ್ನೆಲೆಯಲ್ಲಿ ಎಂ.ಶಿವರಾಜು ಅವರು ಆಯುಕ್ತರಿಗೆ ಪತ್ರ ಬರೆದಿದ್ದು, ನಗರದಲ್ಲಿ ತ್ಯಾಜ್ಯ ಸಮಸ್ಯೆ ತಪ್ಪಿಸಲು ಹಾಗೂ ವಿಂಗಡಣೆ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಸಮರ್ಪಕವಾಗಿ ಸಂತೆಗಳನ್ನು ಆಯೋಜಿಸುವಂತೆ ತಿಳಿಸಿದ್ದಾರೆ. 

ಕಾಂಪೋಸ್ಟ್‌ ಸಂತೆಗಳ ಅನುಕೂಲಗಳೇನು?: ವಾರ್ಡ್‌ವಾರು ಆಯೋಜಿಸುವ ಕಾಂಪೋಸ್ಟ್‌ ಸಂತೆಗಳಲ್ಲಿ ವಿವಿಧ ಸಂಸ್ಥೆಗಳು, ಎನ್‌ಜಿಒಗಳು ಹಾಗೂ ಸ್ವಯಂ ಸೇವಕ ಸಂಸ್ಥೆಗಳು ಭಾಗವಹಿಸುತ್ತವೆ. ಜತೆಗೆ ಮನೆಯಲ್ಲಿಯೇ ಉಚಿತವಾಗಿ ಹಾಗೂ ಅತ್ಯಂತ ಕಡಿಮೆ ಖರ್ಚಿನಲ್ಲಿ ತ್ಯಾಜ್ಯವನ್ನು ಗೊಬ್ಬರವನ್ನಾಗಿಸುವ ಉಪಾಯಗಳು ಹಾಗೂ ತಂತ್ರಜ್ಞಾನಗಳ ಕುರಿತು ಮಾಹಿತಿ ನೀಡುತ್ತಾರೆ. ಜತೆಗೆ ಗೊಬ್ಬರವನ್ನು ಮನೆಯಲ್ಲಿಯೇ ಹೇಗೆ ಬಳಸಬಹುದು ಹಾಗೂ ಗೊಬ್ಬರದಿಂದ ಹಣ ಸಂಪಾದನೆಯ ಕುರಿತು ಸಹ ಮಾಹಿತಿ ನೀಡುತ್ತಾರೆ. ಇದರಿಂದಾಗಿ ತ್ಯಾಜ್ಯ ವಿಂಗಡಣೆ ಸಮರ್ಪಕವಾಗಿ ಆಗಿ ಪಾಲಿಕೆಯ ಮೇಲಿನ ಹೊರೆ ಕಡಿಮೆಯಾಗುತ್ತದೆ. 

ಕೇವಲ 27 ವಾರ್ಡ್‌ಗಳಲ್ಲಿ ಮಾತ್ರ ಸಂತೆ: ತ್ಯಾಜ್ಯ ವಿಂಗಡಣೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಅಧಿಕಾರಿಗಳಿಂದ ಉತ್ತಮ ಬೆಂಬಲ ದೊರೆಯದ ಹಿನ್ನೆಲೆಯಲ್ಲಿ ವಿಫ‌ಲವಾಗಿದೆ. ಪದ್ಮಾವತಿ ಅವರು ಮೇಯರ್‌ ಆಗಿದ್ದ ಅವಧಿಯಲ್ಲಿ ಪ್ರತಿ ವಾರ ಒಂದು ವಾರ್ಡ್‌ನಲ್ಲಿ ಕಡ್ಡಾಯವಾಗಿ ಕಾಂಪೋಸ್ಟ್‌ ಸಂತೆ ಆಯೋಜನೆ ಮಾಡುತ್ತಿದ್ದರು. ಆನಂತರದಲ್ಲಿ ಮೇಯರ್‌ ಆಗಲಿ, ಅಧಿಕಾರಿಗಳಾಗಲಿ ಸಂತೆ ನಡೆಸುವ ಆಸಕ್ತಿ ತೋರಿಲ್ಲ. 

ಪ್ರತಿಯೊಂದು ವಾರ್ಡ್‌ಗಳಲ್ಲಿ ಕಾಂಪೋಸ್ಟ್‌ ಸಂತೆ ಆಯೋಜನೆ ಮಾಡುವುದರಿಂದ ತ್ಯಾಜ್ಯ ವಿಂಗಡಣೆ ಪ್ರಮಾಣ ಹೆಚ್ಚಾಗುತ್ತದೆ. ಜತೆಗೆ ಸಾರ್ವಜನಿಕರಿಗೆ ತ್ಯಾಜ್ಯ ವಿಂಗಡಣೆಯ ಬಗ್ಗೆ ಜಾಗೃತಿ ಮೂಡಲಿದ್ದು, ಪಾಲಿಕೆಯ ಮೇಲಿನ ಹೊರೆ ಕಡಿಮೆಯಾಗಲಿದೆ. ಕಾಂಪೋಸ್ಟ್‌ ಸಂತೆ ನಡೆಸುವಂತೆ ಆಯುಕ್ತರಿಗೆ ಪತ್ರ ಬರೆಯಲಾಗಿದೆ.
-ಎಂ.ಶಿವರಾಜು, ಆಡಳಿತ ಪಕ್ಷ ನಾಯಕರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.