ನಗರದಲ್ಲಿ ವಿಜೃಂಭಣೆಯ ದಸರಾ ಆಚರಣೆ


Team Udayavani, Oct 20, 2018, 12:38 PM IST

nagaradalli.jpg

ಬೆಂಗಳೂರು: ಜೆ.ಸಿ.ನಗರದಲ್ಲಿ ಶುಕ್ರವಾರ ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಜೆ.ಸಿ.ನಗರ ದಸರಾ ಮಹೋತ್ಸವ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸುತ್ತಮುತ್ತಲ ಪ್ರದೇಶಗಳಿಂದ ಅಲಂಕೃತ ರಥಗಳಲ್ಲಿ ಉತ್ಸವ ಮೂರ್ತಿ ಹೊತ್ತು ಬಂದಿದ್ದ ತೇರು ಹಾಗೂ ಪಲ್ಲಕಿಗಳನ್ನು ಕಂಡು ಭಕ್ತರು ಪುಳಕಿತರಾದರು.

ರಾತ್ರಿ 9.30ರ ಸುಮಾರಿಗೆ ಆರಂಭವಾದ ಪಲ್ಲಕ್ಕಿ ಮೆರವಣಿಗೆ ಶಿವಾಜಿನಗರ, ಆರ್‌.ಟಿ.ನಗರ, ಲಕ್ಷ್ಮೀದೇವಮ್ಮ ಬ್ಲಾಕ್‌, ಸಿಬಿಐ ರಸ್ತೆ, ಮಠದಹಳ್ಳಿ, ಮೋತಿನಗರ, ಗಂಗೇನಹಳ್ಳಿ, ಸುಲ್ತಾನ್‌ಪಾಳ್ಯ, ಯಶವಂತಪುರ, ಹೆಬ್ಟಾಳ, ಗಂಗಾನಗರ ಭಾಗಗಳಿಂದ ದೇವರ ಮೂರ್ತಿಗಳು ಅಲಂಕೃತಗೊಂಡ ರಥಗಳಲ್ಲಿ ಜೆ.ಸಿ.ನಗರದ ದಸರಾ ಮೈದಾನದತ್ತ ಸಾಗಿ ಬಂದವು. ದರೊಂದಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಪ್ರತಿಮೆಯ ಮೆರವಣಿಗೆ ಆಕರ್ಷಣೀಯವಾಗಿತ್ತು.

ಮಧ್ಯರಾತ್ರಿ ಸುಮಾರಿಗೆ ಮೈದಾನಕ್ಕೆ ವಿವಿಧೆಡೆಯ ರಥಗಳು ಬಂದು ತಲುಪಿದ ಬಳಿಕ ಬನ್ನಿಮರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಲಾಯಿತು. ಅರಮನೆ ರಸ್ತೆಯ ಮಾರ್ಗವಾಗಿ ಸಾಗಿದ ಮೆರವಣಿಗೆ ಮುಂಜಾನೆ ವೇಳೆಗೆ ದರಸಾ ಮೈದಾನ ತಲುಪಿತ್ತು. ಪ್ರತಿವರ್ಷ ನಡೆಯುವ ಮಹೋತ್ಸವದಲ್ಲಿ ಭಾಗಿಯಾಗಲು ಸುತ್ತಮುತ್ತಲಿನ ರಸ್ತೆಗಳಲ್ಲಿ ಸಾವಿರಾರು ರಸ್ತೆಗಳು ಸೇರಿದ್ದ ದೃಶ್ಯ ಕಂಡುಬಂತು. 

ರಥಗಳು ಸಾಗಿಬಂದ ಪ್ರತಿಯೊಂದು ರಸ್ತೆಗಳ ಇಕ್ಕೆಲಗಳಲ್ಲಿಯೂ ಜಾತ್ರೆಯ ವಾತಾವರಣ ನಿರ್ಮಾಣವಾಗಿತ್ತು. ಹೂವಿನ ಪಲ್ಲಕಿ, ಪೂಜಾ ಕುಣಿತ, ಡೊಳ್ಳು ಕುಣಿತ, ಕೀಲು ಕುದುರೆ, ಗೊರವರ ಕಣಿತ, ಕರಡಿ ಮೇಳ ಸೇರಿದಂತೆ ವಿವಿಧ ಜನಪದ ಕಲಾತಂಡಗಳು ಮೆರವಣಿಗೆಯ ಮೆರಗು ಹೆಚ್ಚಿಸುವಂತಿತ್ತು. 

ಪಟಾಕಿ ಹಚ್ಚಿ ಸಂಭ್ರಮಿಸಿದ ಭಕ್ತರು: ಜೆ.ಸಿ.ನಗರ ದಸರಾ ಮೈದಾನಕ್ಕೆ ದೇವರುಗಳನ್ನು ಮೆರವಣಿಗೆಯ ಮೂಲಕ ತರುವ ವೇಳೆ ಭಕ್ತರು ರಸ್ತೆಗಳಲ್ಲಿ ಪಾಟಕಿಗಳನ್ನು ಸಿಡಿಸಿ ಸಂಭ್ರಮಿಸಿದರು. ಆಕಾಶಗಳಲ್ಲಿ ಸಿಡಿಯುತ್ತಿದ್ದ ಪಟಾಕಿಗಳನ್ನು ನೋಡಲು ಹಾಗೂ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ಜನರು ಮಹಡಿ ಮೇಲೆ ನಿಂತಿದ್ದರು.

ವಿಜೃಂಭಣೆಯ ದುರ್ಗಾದೇವಿ ಮೆರವಣಿಗೆ: ನವರಾತ್ರಿ ಉತ್ಸವದ ಅಂಗವಾಗಿ ನಗರದ ಮನೆಗಳಲ್ಲಿ ಪ್ರತಿಷ್ಠಾಪಿಸಿದ್ದ ಗೊಂಬೆ ಪ್ರದರ್ಶನಕ್ಕೆ ತೆರೆಬಿತ್ತು. ಇದೇ ಸಂದರ್ಭದಲ್ಲಿ ನಾನಾ ಪ್ರದೇಶಗಳಲ್ಲಿ ನವದುರ್ಗೆಯರನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಿ ಸಂಜೆ ದುರ್ಗಾದೇವಿ ಮೂರ್ತಿಗಳನ್ನು ಮೆರವಣಿಗೆ ನಡೆಸಿದ ಬಳಿಕ ಹಲಸೂರು ಕೆರೆ ಸೇರಿದಂತೆ ನಗರದ ವಿವಿಧ ಕೆರೆಗಳಲ್ಲಿ ವಿಸರ್ಜಿಸಲಾಯಿತು.

ಪ್ರಮುಖವಾಗಿ ಬೆಂಗಾಳಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶಗಳಲ್ಲಿ ದೇವಿಯ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಐದು ದಿನಗಳ ಪೂಜಿಸಲಾಗಿದ್ದು, ದಸರಾ ದಿನವಾದ ಶುಕ್ರವಾರ ನಗರದ ವಿವಿಧ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ಬಣ್ಣದೋಕುಳಿಯ ನಡುವೆ ದೇವಿ ಮೂರ್ತಿಯನ್ನು ವಿಸರ್ಜಿಸಲಾಯಿತು. ಇದರೊಂದಿಗೆ ನಗರದ ಪ್ರಮುಖ ಭಾಗಗಳಲ್ಲಿ ಆಯೋಜಿಸಿದ್ದ ದಾಂಡಿಯಾ ನೃತ್ಯದಲ್ಲಿ ಮಹಿಳೆಯರು, ಮಕ್ಕಳು ಭಾಗವಹಿಸಿ ಸಂಭ್ರಮಿಸಿದ್ದು ವಿಶೇಷವಾಗಿತ್ತು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.