ಕಾರ್ಪೊರೇಟರ್‌ಗಳಿಗೆ ಇಂದಿರಾ ಕ್ಯಾಂಟೀನ್‌ ಊಟ


Team Udayavani, Oct 20, 2018, 12:38 PM IST

corporater.jpg

ಬೆಂಗಳೂರು: ಬಿಬಿಎಂಪಿಯ ಮಾಸಿಕ ಸಭೆಯಲ್ಲಿ ಪಾಲ್ಗೊಳ್ಳುವ ಕಾರ್ಪೊರೇಟರ್‌ಗಳಿಗೆ ಇನ್ನುಮುಂದೆ ಇಂದಿರಾ ಕ್ಯಾಂಟೀನ್‌ ಊಟ ಪೂರೈಕೆಯಾಗಲಿದೆ.

ಇಂದಿರಾ ಕ್ಯಾಂಟೀನ್‌ ಆಹಾರದ ಗುಣಮಟ್ಟ ಹಾಗೂ ರುಚಿಯ ಬಗ್ಗೆ ದೂರುಗಳು ಬರುತ್ತಿರುವುದು ಹಾಗೂ ಪಾಲಿಕೆ ಸದಸ್ಯರು ಸಹ ಆಹಾರದ ಗುಣಮಟ್ಟದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಮಾಸಿಕ ಸಭೆಗಳಲ್ಲಿ ಟೀಕೆಗಳನ್ನು ಮಾಡುತ್ತಿರುವ ಹಿನ್ನೆಲೆಯಲ್ಲಿ ಪಾಲಿಕೆಯ ಸದಸ್ಯರಿಗೆ ಇಂದಿರಾ ಕ್ಯಾಂಟೀನ್‌ನಿಂದ ಊಟ ತರಿಸಿ ಗುಣಮಟ್ಟ ಹಾಗೂ ರುಚಿಯ ಪರೀಕ್ಷೆ ಮಾಡಲು ನಿರ್ಧರಿಸಲಾಗಿದೆ.

ಪಾಲಿಕೆಯ 180ಕ್ಕೂ ಹೆಚ್ಚು ವಾರ್ಡ್‌ಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳು ಸೇವೆ ನೀಡುತ್ತಿದ್ದು, ನಿತ್ಯ 3 ಲಕ್ಷಕ್ಕೂ ಹೆಚ್ಚಿನ ಜನರಿಗೆ ತಿಂಡಿ-ಆಹಾರ ಪೂರೈಸುತ್ತಿವೆ. ಕೆಲವು ಕಡೆಗಳಲ್ಲಿ ಗುಣಮಟ್ಟ ಚೆನ್ನಾಗಿದ್ದರೆ, ಇನ್ನು ಕೆಲವು ಕಡೆ ಗುಣಮಟ್ಟ ನಿಗದಿತ ಪ್ರಮಾಣದಲ್ಲಿಲ್ಲ ಎಂಬ ಆರೋಪಗಳಿವೆ. ಇದರೊಂದಿಗೆ ಪಾಲಿಕೆಯ ಸದಸ್ಯರು ಹಾಗೂ ಅಧಿಕಾರಿಗಳು ಕ್ಯಾಂಟೀನ್‌ಗಳಲ್ಲಿನ ಆಹಾರ ಸೇವಿಸಲು ಹಿಂಜರಿಯುವುದರಿಂದ ಗುಣಮಟ್ಟದ ಬಗ್ಗೆ ತಿಳಿಯುವುದಿಲ್ಲ.

ಇದೇ ಕಾರಣದಿಂದ ಗುತ್ತಿಗೆದಾರರು ಸಹ ಗುಣಮಟ್ಟದ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ. ಹೀಗಾಗಿ ಪಾಲಿಕೆಯ ಸದಸ್ಯರಿಗೂ ಇಂದಿರಾ ಕ್ಯಾಂಟೀನ್‌ ಊಟ ಪೂರೈಕೆ ಮಾಡಿದಾಗ ಗುಣಮಟ್ಟದ ಬಗ್ಗೆ ಪ್ರಶ್ನಿಸುತ್ತಾರೆ ಎಂಬ ಭಯದಿಂದಾರೂ ಜನರಿಗೆ ಗುಣಮಟ್ಟದ ಆಹಾರ ದೊರೆಯಲಿ ಎಂಬ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಹೇಳುತ್ತಾರೆ.
ಸುಮ್ಮನೆ ಆರೋಪ
ಇಂದಿರಾ ಕ್ಯಾಂಟೀನ್‌ಗಳಿಂದ ನಿತ್ಯ ಲಕ್ಷಾಂತರ ಜನರಿಗೆ ಆಹಾರ ಪೂರೈಕೆ ಮಾಡಲಾಗುತ್ತಿದೆ. ಆದರೆ, ಪಾಲಿಕೆ ಸಭೆಗಳಲ್ಲಿ ಕೆಲವು ಸದಸ್ಯರು ಉದ್ದೇಶಪೂರ್ವಕವಾಗಿ ಕ್ಯಾಂಟೀನ್‌ಗಳಲ್ಲಿನ ಆಹಾರ ರುಚಿಕರವಾಗಿಲ್ಲ, ಗುಣಮಟ್ಟದಿಂದ ಕೂಡಿಲ್ಲ ಎಂದು ಆರೋಪಿಸುತ್ತಾರೆ. ವಾಸ್ತವದಲ್ಲಿ ಅವರು ಎಂದೂ ಇಂದಿರಾ ಕ್ಯಾಂಟೀನ್‌ಗಳಲ್ಲಿ ಊಟ ಮಾಡದಿದ್ದರೂ ಆರೋಪಿಸುತ್ತಾರೆ. ಹೀಗಾಗಿ ಪ್ರಾಯೋಗಿಕವಾಗಿ ತಿಂಗಳ ಸಭೆಯಲ್ಲಿ ಪಾಲಿಕೆ ಸದಸ್ಯರಿಗೂ ಇಂದಿರಾ ಕ್ಯಾಂಟೀನ್‌ ಊಟ ಪೂರೈಕೆ ಮಾಡಲಾಗುವುದು ಎಂದು  ಕಾಂಗ್ರೆಸ್‌ನ ಪಾಲಿಕೆ ಸದಸ್ಯರು ಹೇಳುತ್ತಾರೆ.

ಇಂದಿರಾ ಕ್ಯಾಂಟೀನ್‌ಗಳಲ್ಲಿನ ತಿಂಡಿ-ಊಟದ ಬಗ್ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸಂಚಾರಿ ಇಂದಿರಾ ಕ್ಯಾಂಟೀನ್‌ಗಳಿಗೆ ಭಾರಿ ಬೇಡಿಕೆ ಬಂದಿದೆ. ಪಾಲಿಕೆಯಲ್ಲಿ ಕೆಲಸ ಮಾಡುವ ಪೌರಕಾರ್ಮಿಕರಿಗೆ ಇಂದಿರಾ ಕ್ಯಾಂಟೀನ್‌ಗಳಿಂದಲೇ ಮಧ್ಯಾಹ್ನದ ಬಿಸಿಯೂಟ ಪೂರೈಕೆ ಮಾಡಲಾಗುತ್ತಿದೆ ಎನ್ನುತ್ತಾರೆ.

ಲಕ್ಷಾಂತರ ಜನ ಸೇವಿಸುವ ಇಂದಿರಾ ಕ್ಯಾಂಟೀನ್‌ ಆಹಾರವನ್ನು ಪಾಲಿಕೆಯ ಸದಸ್ಯರು ಸೇವಿಸುವುದರಲ್ಲಿ ತಪ್ಪೇನಿಸಿದೆ. ನಾವು ಕ್ಯಾಂಟೀನ್‌ ಊಟ ಮಾಡುವುದರಿಂದ ಆಹಾರದ ಗುಣಮಟ್ಟ ಹಾಗೂ ರುಚಿ ಹೇಗಿದೆ ಎಂಬುದು ತಿಳಿಯಲಿದೆ. ಸರಿಯಿಲ್ಲದಿದ್ದರೆ ಅದನ್ನು ಸರಿಪಡಿಸಬಹುದಾಗಿದೆ. 
-ಗಂಗಾಂಬಿಕೆ, ಮೇಯರ್‌

ಪಾಲಿಕೆ ಸದಸ್ಯರಿಗಾಗಿ ವಿಶೇಷವಾಗಿ ಆಹಾರ ತಯಾರಿಸದೆ, ಸಾರ್ವಜನಿಕರಿಗೆ ಮತ್ತು ಪೌರಕಾರ್ಮಿಕರಿಗೆ ಪೂರೈಸುವ ಆಹಾರವನ್ನೇ ಪಾಲಿಕೆ ಸದಸ್ಯರಿಗೂ ಪೂರೈಸಬೇಕು. ಆಗ ಜನರಿಗೆ ಯಾವ ಗುಣಮಟ್ಟದ ಆಹಾರ ದೊರೆಯುತ್ತಿದೆ ಎಂಬುದು ತಿಳಿಯುತ್ತದೆ.
-ಪದ್ಮನಾಭರೆಡ್ಡಿ, ವಿಪಕ್ಷ ನಾಯಕ ಬಿಬಿಎಂಪಿ

* ವೆಂ. ಸುನೀಲ್‌ಕುಮಾರ್‌

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.