ಆರೋಗ್ಯ ಕಾಳಜಿಗೆ ಸಮಯವೇ ಇಲ್ಲ
Team Udayavani, Oct 21, 2018, 12:14 PM IST
ಕೆಂಗೇರಿ: ಉಪನಗರದ ಹಳೇ ಬಸ್ ನಿಲ್ದಾಣದ ತಿಮ್ಮಪ್ಪ ಗರಡಿ ಮನೆ ಕಟ್ಟಡದ ಮೇಲೆ ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಶಾಸಕ ಎಸ್.ಟಿ.ಸೋಮಶೇಖರ್ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ಯುವಕರು ಸೇರಿದಂತೆ ಪುರುಷರು ಗರಡಿ ಮನೆಗೆ ತೆರಳಿ ಕಸರತ್ತು ಮಾಡಿ ತಮ್ಮ ಆರೋಗ್ಯ ಕಾಪಾಡಿಕೊಳ್ಳುತ್ತಿದ್ದರು.
ಆದರೆ ಇಂದಿನ ಒತ್ತಡದ ಜೀವನದಲ್ಲಿ ಅದು ಸಾಧ್ಯವಾಗದೇ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದೇವೆ ಎಂದರು. ಇಂದು ಗರಡಿಮನೆಗಳು ಕಣ್ಮರೆಯಾಗಿ ಆ ಜಾಗದಲ್ಲಿ ಅಧುನೀಕ ಜಿಮ್ಗಳು ಹುಟ್ಟಿಕೊಂಡಿವೆ. ಆದರೆ ಬಡವರು ಆ ಜಿಮ್ಗಳಿಗೆ ಹೋಗಿ, ದುಬಾರಿ ಶುಲ್ಕ ನೀಡಿ ವ್ಯಾಯಾಮ ಮಾಡಲು ಸಾದ್ಯವಿಲ್ಲ. ಆದ್ದರಿಂದ ಸರಕಾರವೇ ಉದ್ಯಾನವನಗಳಲ್ಲಿ ಸಾರ್ವಜನಿಕರ ಅನುಕೂಲಕ್ಕೆ ವ್ಯಾಯಾಮ ಕೇಂದ್ರಗಳನ್ನು ಸ್ಥಾಪಿಸುತ್ತಿದೆ.
ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದಲೇ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಕೆಂಗೇರಿಯ ಗರಡಿ ಮನೆ ಅಬಿವೃದ್ಧಿಗೆ ಭೂಮಿ ಪೂಜೆ ನೇರವೇರಿಸಲಾಗಿದೆ ಎಂದು ಹೇಳಿದರು. ಪಾಲಿಕೆ ನಾಮ ನಿರ್ದೇಶಿತ ಸದಸ್ಯ ಸುರೇಶ್, ಮುಖಂಡರಾದ ಪ್ರಭಾಕರ್, ಶಾಂತಕುಮಾರ್, ಸಂಜೀವ್ ಕುಮಾರ್, ಲೋಹಿತ್, ವಿಜಿಕುಮಾರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ