ಸ್ವಂತ ಶ್ರಮದಿಂದ ಪ್ರಧಾನಿಯಾದವರು ಮೋದಿ


Team Udayavani, Oct 21, 2018, 12:14 PM IST

swanta.jpg

ಬೆಂಗಳೂರು: ಜಾತಿ, ಹಣ ಹಾಗೂ ಕುಟುಂಬ ರಾಜಕಾರಣದ ಹಿನ್ನೆಲೆ ಇಲ್ಲದೆ ಸ್ವಂತ ಪರಿಶ್ರಮದಿಂದ ಪ್ರಧಾನ ಮಂತ್ರಿ ಹುದ್ದೆಗೇರಿದವರು ನರೇಂದ್ರ ಮೋದಿ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.

ರಾಷ್ಟ್ರ ಧರ್ಮ ಸಂಘಟನೆಯು ನಗರದ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ “ಮೋದಿ ಮತ್ತೂಮ್ಮೆ’ ವಿಡಿಯೋ ಹಾಡು ಬಿಡುಗಡೆಗೊಳಿಸಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ದೇಶ ಕಂಡ ಅತ್ಯಂತ ಪ್ರಾಮಾಣಿಕ ಪ್ರಧಾನ ಮಂತ್ರಿ. ಕೇವಲ ಡಿಎನ್‌ಎ ಮಾತ್ರವೇ ಹಲವರನ್ನು ಪ್ರಧಾನಿ ಹುದ್ದೆಗೇರಿಸಿದೆ.

ಕೆಲವರು ಹಣಬಲ, ಜಾತಿಬಲ ಹಾಗೂ ಕುಟುಂಬ ರಾಜಕೀಯ ಹಿನ್ನೆಲೆಯಲ್ಲಿ ಪ್ರಧಾನಿಯಾಗುತ್ತಾರೆ. ಪ್ರಧಾನಿ ಆಯ್ಕೆಗಾಗಿ ನಡೆದ ಸಂಸದರ ಸಭೆಯಲ್ಲಿ ಪಂಚೆ ಕಟ್ಟಿಕೊಳ್ಳಲು ಎದ್ದು ನಿಂತವರನ್ನು ಪ್ರಧಾನಿ ಮಾಡಲಾಗಿದೆ. ಆದರೆ ನರೇಂದ್ರ ಮೋದಿಯವರು ದೇಶದ ಪ್ರಧಾನಿ ಹುದ್ದೆಗೇರಿದ್ದು ಅದೃಷ್ಟ ಇಲ್ಲವೇ ವಂಶಪಾರಂಪರ್ಯದಿಂದಲ್ಲ. ಬದಲಿಗೆ ತಮ್ಮ ಪರಿಶ್ರಮದಿಂದ ಉನ್ನತ ಹುದ್ದೆಗೇರಿದ್ದಾರೆ ಎಂದು ಶ್ಲಾ ಸಿದರು.

ದೇಶದ ಅಭಿವೃದ್ಧಿಗೆ ತಮ್ಮದೇ ಆದ ವಿಶಿಷ್ಟ ಕನಸು ಹೊಂದಿರುವ ಪ್ರಧಾನಿ ಮೋದಿಯವರು ದೇಶದ ಅಭಿವೃದ್ಧಿಗೆ ಅಗತ್ಯವಾದ ಸುಧಾರಣೆಗಳನ್ನು ತರಲು ಒತ್ತು ನೀಡಿದರು. ಫ‌ಸಲ್‌ ಬಿಮಾ ಯೋಜನೆ, ಜನಧನ್‌ ಯೋಜನೆ ಸೇರಿದಂತೆ ಹತ್ತಾರು ಕಾರ್ಯಕ್ರಮಗಳ ಮೂಲಕ ಜನಸಾಮಾನ್ಯರ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ಇಂತಹ ಕನಸುಗಳನ್ನು ಹೊಂದಿರುವ ಪ್ರಧಾನಿಯವರು ಮತ್ತೂಮ್ಮೆ  ಪ್ರಧಾನಿಯಾಗುವುದು ಖಚಿತ ಎಂದು ಹೇಳಿದರು.

ರಂಗನಟ ಪ್ರಕಾಶ್‌ ಬೆಳವಾಡಿ ಮಾತನಾಡಿ, ಅರ್ಥಶಾಸ್ತ್ರ ವಿಷಯದಲ್ಲಿ ನೊಬೆಲ್‌ ಪಡೆದ ಅಮರ್ತ್ಯಸೇನ್‌ ಅವರು ಪಶ್ಚಿಮ ಬಂಗಾಳದಲ್ಲಿ ಬಡತನ ನಿವಾರಣೆಗೆ ಸ್ಥಳೀಯ ಸರ್ಕಾರಕ್ಕೆ ಸಲಹೆ ನೀಡುವಲ್ಲಿ ವಿಫ‌ಲರಾಗಿದ್ದಾರೆ. ಅವರಿಂದ ಆ ರಾಜ್ಯಕ್ಕೆ ಯಾವುದೇ ಉಪಯೋಗವಾಗಿಲ್ಲ.

ಈವರೆಗೆ ಮಲಗಿದ್ದ ಅವರು ಪ್ರಧಾನಿ ಮೋದಿಯವರು ನೋಟು ಅಮಾನ್ಯ ಮಾಡುತ್ತಿದ್ದಂತೆ ಎದ್ದು ಟೀಕಿಸಲಾರಂಭಿಸಿದ್ದಾರೆ ಎಂದು ಹೇಳಿದರು. ರಾಷ್ಟ್ರಧರ್ಮ ಸಂಘಟನೆಯ ಸಂತೋಷ್‌ ಕೆಂಚಾಂಬ, ಎಬಿವಿಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನಯ್‌ ಬಿದ್ರಿ, ಶಕುಂತಲಾ ಅಯ್ಯರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.