ಸಮನ್ವಯ ಕೊರತೆಯಿಂದ ಗುಂಡಿ ಮುಚ್ಚುವ ಕಾಮಗಾರಿ ವಿಳಂಬ


Team Udayavani, Oct 23, 2018, 12:37 PM IST

samanvaya.jpg

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ಸಮನ್ವಯತೆ ಕೊರತೆ ಕಾರಣ ಎಂದು ಖುದ್ದು ಮೇಯರ್‌ ಗಂಗಾಬಿಕೆ ತಿಳಿಸಿದ್ದಾರೆ. ರಸ್ತೆಗುಂಡಿ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ವಿಚಾರದಲ್ಲಿ ಜಲಮಂಡಳಿ, ಬೆಸ್ಕಾಂ, ಬಿಬಿಎಂಪಿ ಇಂಜಿನಿಯರ್‌ಗಳ ನಡುವೆ ಸಮನ್ವಯ ಕೊರತೆ ಇದೆ.

ಹೀಗಾಗಿ, ನಾಲ್ಕೂ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಆದಷ್ಟು ಬೇಗ ಎಲ್ಲಾ ಗುಂಡಿಗಳನ್ನು ಮುಚ್ಚಲಾಗುವುದು ಎಂದು ಹೇಳಿದರು. ರಸ್ತೆ ಗುಂಡಿ ಮುಚ್ಚಲು ಹೈಕೋರ್ಟ್‌ ಸೂಚನೆ ನೀಡಿ ತಿಂಗಳಾದರೂ ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿ  628 ರಸ್ತೆ ಗುಂಡಿಗಳಿದ್ದು, ಮುಚ್ಚಿರುವ ಗುಂಡಿಗಳ ಕಾಮಗಾರಿಯೂ ಕಳಪೆಯಾಗಿದೆ ಎಂಬ ಆರೋಪ ಕುರಿತು ಕೇಳಿದಾಗ,

ಹೈಕೋರ್ಟ್‌ ಸೂಚಿಸಿದ ದಿನದಿಂದ ಇಲ್ಲಿಯವರೆಗೂ ಪ್ರತಿದಿನ ಗುಂಡಿ ಮುಚ್ಚುವ ಕಾರ್ಯ ನಡೆಯುತ್ತಿದೆ. ಮುಚ್ಚಿದ ಸ್ಥಳದಲ್ಲಿ ಬಿಟ್ಟು ಬೇರೆ ಜಾಗಗಳಲ್ಲಿ ಹೊಸ ಗುಂಡಿಗಳು ಬೀಳುತ್ತವೆ. ಆ ಗುಂಡಿಗಳನ್ನು ಮುಚ್ಚುವ ಕಾರ್ಯ ನಿರಂತರವಾಗಿ ನಡೆಯುತ್ತದೆ ಎಂದು ತಿಳಿಸಿದರು. ಈಗಾಗಲೇ ನಗರದಲ್ಲಿನ ಬಹುತೇಕ ಗುಂಡಿಗಳನ್ನು ಮುಚ್ಚಲಾಗಿದ್ದು, ಕೆಲವು ಕಡೆ ಕಾಮಗಾರಿ ಮಂದಗತಿಯಲ್ಲಿ ಸಾಗಿದ್ದರಿಂದ ಇನ್ನು 628 ಗುಂಡಿಗಳು ಬಾಕಿ ಉಳಿದಿವೆ ಎಂದು ಹೇಳಿದರು.

ಕಳಪೆ ಕಾಮಗಾರಿ ನಡೆದಿರುವ ಬಗ್ಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ. ಪರಿಶೀಲನೆ ವೇಳೆ ಕಳಪೆ ಕಾಮಗಾರಿ ಬಗ್ಗೆ ತಿಳಿದುಬಂದರೆ ಅಲ್ಲಿನ ಎಂಜಿನಿಯರ್‌ ವಿರುದ್ಧ ಕ್ರಮಕೈಗೊಂಡು ಮರು ಡಾಂಬರೀಕರಣಕ್ಕೆ ಆದೇಶ ಮಾಡಲಾಗುವುದು.

ರಾಜರಾಜೇಶ್ವರಿನಗರ ಗೇಟ್‌ನಿಂದ ನಾಯಂಡಹಳ್ಳಿವರೆಗೆ ರಸ್ತೆ ಸಂಪೂರ್ಣ ಹಾಳಾಗಿದೆ ಎಂದು ದೂರು ಬಂದಿದೆ. ಆ ಭಾಗದಲ್ಲಿ ಶೀಘ್ರವೇ ಡಾಂಬರೀಕರಣ ಮಾಡಲು ಸೂಚಿಸಲಾಗಿದೆ. ಒಳಚರಂಡಿ ಪೈಪುಗಳ ಸೋರಿಕೆಯಿಂದ ಈ ರೀತಿ ಸಂಪೂರ್ಣ ರಸ್ತೆಯಲ್ಲಿ ಗುಂಡಿಗಳು ಬೀಳುತ್ತಿದ್ದು, ಅವುಗಳನ್ನು ಸಹ ಮುಚ್ಚುವ ಕಾರ್ಯ ಮಾಡುತ್ತಿದ್ದೇವೆ ಎಂದು ತಿಳಿಸಿದರು

ಇಂಜಿನಿಯರ್‌ಗಳ ವಿರುದ್ಧ ಗರಂ
ಬೆಂಗಳೂರು:
ದಸರಾ ಹಬ್ಬದ ವ್ಯಾಪಾರ ವಹಿವಾಟು ಮುಗಿದು ಮೂರು ದಿನಗಳಾದರೂ ನಗರದ ಕಸ ವಿಲೇವಾರಿ ಆಗದಿರುವುದಕ್ಕೆ ಮೇಯರ್‌ ಗಂಗಾಂಬಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಮುಂದಿನ 24 ಗಂಟೆಯಲ್ಲಿ ನಗರವನ್ನು ಸ್ವತ್ಛಗೊಳಿಸಬೇಕೆಂದು ಸೂಚನೆ ನೀಡಿದರು.

ನಗರದ ಕೆ.ಆರ್‌.ಮಾರುಕಟ್ಟೆ, ಗಾಂಧಿಬಜಾರ್‌ ಸೇರಿದಂತೆ ವಿವಿಧ ಬಡಾವಣೆಗಳಿಗೆ ಸೋಮವಾರ ಭೇಟಿ ನೀಡಿದ ಅವರು ಅಲ್ಲಿನ ಕಸ ವಿಲೇವಾರಿ ಪರಿಶೀಲನೆ ನಡೆಸಿದರು. ದಸರಾ ಹಬ್ಬದ ವೇಳೆ ವ್ಯಾಪಾರಿಗಳು ಹಾಕಿರುವ ಕಸ ಇನ್ನು ವಿವೇವಾರಿ ಆಗದಿದ್ದನ್ನು ಕಂಡು ಅಧಿಕಾರಿಗಳ ವಿರುದ್ಧ ಗರಂ ಆದರು.

ಆನಂತರ ವಲಯಗಳ ಇಂಜಿನಿಯರ್‌ಗಳನ್ನು ಕರೆಸಿ ಮಂಗಳವಾರ ಬೆಳಗ್ಗೆ ವೇಳೆಗೆ ಮಾರುಕಟ್ಟೆಗಳು ಸೇರಿದಂತೆ ಪಾದಚಾರಿ ಮಾರ್ಗ, ರಸ್ತೆ ಬಿದಿಯಲ್ಲಿ ಹಾಕಲಾದ ಕಸ ತೆರವುಗೊಳಿಸಲು ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ವಾರ್ಡ್‌ಗಳ ಸಹಾಯಕ ಇಂಜಿನಿಯರ್‌ಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.

ಆಸ್ಪತ್ರೆ ಭೇಟಿ: ನಗರದಲ್ಲಿ ಎಚ್‌1ಎನ್‌1 ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೇಯರ್‌ ಗಂಗಾಂಬಿಕೆ ಸೋಮವಾರ ಬಿಬಿಎಂಪಿಯ ದಾಸಪ್ಪ ಆಸ್ಪತ್ರೆಗೆ ಬೇಟಿ ನೀಡಿ ಪರಿಶೀಲಿಸಿದರು. ದೂರುಗಳ ಬಗ್ಗೆ ಸಮಗ್ರ ಮಾಹಿತಿ ಪಡೆಯುವಂತೆ, ನಿಯಂತ್ರಣ ಕೇಂದ್ರದಕ್ಕೆ ಕರೆ ಮಾಡಿದ ವ್ಯಕ್ತಿಗಳ ವಿಳಾಸ ಪತ್ತೆ ಮಾಡಿ ಅಧಿಕಾರಿಗಳು ಖುದ್ದು ಭೇಟಿ ನೀಡಿ ಶಂಕಿತ ರೋಗಿಗಳ ವೈದ್ಯಕೀಯ ವರದಿಯನ್ನು ಪರಿಶೀಲಿಸುವಂತೆ ವೈದ್ಯಾಧಿಕಾರಿಗಳಿಗೆ ತಿಳಿಸಿದರು. 

ವಲಯಗಳು  –  ಗುಂಡಿಗಳು
-ಪೂರ್ವ – 98
-ಪಶ್ಚಿಮ – 97
-ದಕ್ಷಿಣ – 20
-ಬೊಮ್ಮನಹಳ್ಳಿ -73
-ದಾಸರಹಳ್ಳಿ – 56
-ಮಹದೇವಪುರ – 82
-ಆರ್‌ ಆರ್‌ ನಗರ – 28
-ಯಲಹಂಕ – 89
-ಇತರೆ  – 85
-ಒಟ್ಟು – 628

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.