ನಿಮ್ಹಾನ್ಸ್‌ ಅಂದ್ರೆ ನಗೆಪಾಟಲಲ್ಲ!


Team Udayavani, Oct 23, 2018, 12:37 PM IST

nimhans.jpg

ಬೆಂಗಳೂರು: ಸಾರ್ವಜನಿಕರು ತನ್ನ ಬಗ್ಗೆ ಹೊಂದಿರುವ ಅಪನಂಬಿಕೆ, ತನ್ನ ಮೇಲೆ ಹೊರಿಸಿರುವ ಕಳಂಕಗಳನ್ನೆಲ್ಲಾ ತೊಡೆದುಹಾಕಿ, ಜನರಿಗೆ ಹತ್ತಿರವಾಗುವ ನಿಟ್ಟಿನಲ್ಲಿ “ವಾಕಿಂಗ್‌ ಟೂರ್‌ ಆಫ್ ನಿಮ್ಹಾನ್ಸ್‌’ ಎಂಬ ವಿಶೇಷ ಅಭಿಯಾನ ಒಂದನ್ನು ನಿಮ್ಹಾನ್ಸ್‌ ಸಂಸ್ಥೆ ಆರಂಭಿಸಿದೆ. ಅದರ ಮೊದಲ ಪ್ರವಾಸ ಅ.27ರಂದು ನಡೆಯಲಿದೆ.

ಮಾನಸಿಕ ಚಿಕಿತ್ಸಾ ಕೇಂದ್ರ ಎಂದರೆ ಜನರಲ್ಲಿ ಭಯ ಅಥವಾ ತಮಾಷೆ ರೀತಿಯ ಭಿನ್ನ, ತಾತ್ಸಾರ ಭಾವನೆಗಳಿವೆ. ಅಲ್ಲಿನ ರೋಗಿಗಳನ್ನಷ್ಟೇ ಅಲ್ಲ, ವೈದ್ಯರನ್ನೂ ಜನ ವಿಚಿತ್ರ ಭಾವದಿಂದಲೇ ನೋಡುತ್ತಾರೆ. ಇತ್ತೀಚೆಗೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆಯು (ನಿಮ್ಹಾನ್ಸ್‌) “ಮಾನಸಿಕ ರೋಗಿಗಳ ಚಿಕಿತ್ಸಾ ಕೇಂದ್ರದ ಕುರಿತು ಜನರ ಅಭಿಪ್ರಾಯ’ ಎಂಬ ಸಂಶೋಧನೆ ಕೈಗೊಂಡಿತ್ತು.

ಮಾನಸಿಕ ರೋಗಿಗಳ ಆಸ್ಪತ್ರೆ ಕುರಿತು ಜನರು ಸಾಕಷ್ಟು ತಪ್ಪು ಕಲ್ಪನೆಗಳನ್ನು ಹೊಂದಿರುವುದು ಸಂಶೋಧನೆಯಿಂದ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಜನರಿಗೆ ಜಾಗೃತಿ ಮೂಡಿಸಲು ನಿರ್ಧರಿಸಿದ ಸಂಸ್ಥೆಯ ವೈದ್ಯರು, ಈ ವಿಶೇಷ ಅಭಿಯಾನ ಹಮ್ಮಿಕೊಂಡಿದ್ದಾರೆ.

ನಿಮ್ಹಾನ್ಸ್‌ ಸುತ್ತಾಡಲು ಬನ್ನಿ: ಈ ಅಭಿಯಾನದ ಅಡಿಯಲ್ಲಿ ಒಂದು ದಿನದ ಮಟ್ಟಿಗೆ ನಿಮ್ಹಾನ್ಸ್‌ ಆಸ್ಪತ್ರೆಯ ಆವರಣವನ್ನು ಒಂದು ಸುತ್ತಲು ಸಾರ್ವಜನಿಕರಿಗೆ ಅವಕಾಶ ನೀಡಲಾಗುತ್ತಿದೆ. “ಹುಚ್ಚರ ಆಸ್ಪತ್ರೆ’ ಎಂದರೆ ಅದೊಂದು ಕತ್ತಲ ಕೋಣೆಯಲ್ಲ. ಇಲ್ಲಿ ಎಲ್ಲಾ ರೋಗಿಗಳಿಗೆ ಶಾಕ್‌ ಟ್ರೀಟ್‌ಮೆಂಟ್‌ ಕೊಡುವುದಿಲ್ಲ. ಮಾನಸಿಕ ರೋಗಿಗಳು ಸಾಮಾನ್ಯರಂತೆ ಸ್ವತಂತ್ರವಾಗಿ ಓಡಾಡಿಕೊಂಡು ಇರುತ್ತಾರೆ ಎಂಬ ಅಂಶವನ್ನು ಮನದಟ್ಟು ಮಾಡಿಕೊಡಲು ಒಟ್ಟು 300 ಎಕರೆ ವಿಸ್ತೀರ್ಣದ ಆಸ್ಪತ್ರೆಯನ್ನು ತೋರಿಸಲಾಗುತ್ತದೆ.

ಆಸ್ಪತ್ರೆಯ ಸುಸಜ್ಜಿತ ಕಟ್ಟಡ, 26 ಚಿಕಿತ್ಸಾ ವಿಭಾಗಗಳು, ಸಾಮಾನ್ಯ ಆಸ್ಪತ್ರೆಗಳಲ್ಲಿರುವಂತ ವಾರ್ಡ್‌ಗಳು ಜತೆಗೆ ಆಸ್ಪತ್ರೆ ಸೌಂದರ್ಯ ಹೆಚ್ಚಿಸಿರುವ ಬ್ರಿಟೀಷರ ಕಾಲದ ನೊರೋನಾ ಉದ್ಯಾನ, ಇಲ್ಲಿ ಸಾಕಲಾಗಿರುವ ವಿವಿಧ ಪ್ರಭೇದಗಳ ಪ್ರಾಣಿ, ಪಕ್ಷಿಗಳನ್ನು ತೋರಿಸಲಾಗುವುದು. ಆಸ್ಪತ್ರೆಯ ಅತ್ಯಮೂಲ್ಯ ಸಂಶೋಧನೆಗಳು, ಆಸ್ಪತ್ರೆಯ ಇತಿಹಾಸದ ಕುರಿತು ಸಿನಿಮಾ, ಕಲಾ ಕೇಂದ್ರಗಳ ಭೇಟಿ ಸೇರಿದಂತೆ ಸಂಪೂರ್ಣ ಮಾಹಿತಿ ನೀಡಿ ಭೇಟಿಕೊಟ್ಟವರ ಅಪನಂಬಿಕೆಗಳನ್ನು ದೂರವಾಗಿಸುವ ಪ್ರಯತ್ನ ಮಾಡಲಾಗುದು ಎಂದು ಮಾನಸಿಕ ಆರೋಗ್ಯ ಶಿಕ್ಷಣ ವಿಭಾಗದ ಪೊ›.ಕೆ.ಎಸ್‌.ಮೀನಾ ತಿಳಿಸಿದರು.

ಹೆಸರು ನೋಂದಣಿಗೆ 100 ರೂ.: ಈ ಅಭಿಯಾನದಲ್ಲಿ ಭಾಗವಹಿಸಿ ಆಸ್ಪತ್ರೆಯನ್ನು ನೋಡಲು 100 ರೂ. ನೀಡಿ ಇ-ಮೇಲ್‌ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಅ.27ರಂದು ನಡೆಯಲಿರು ಅಭಿಯಾನದ ಮೊದಲ ಪ್ರವಾಸಕ್ಕೆ 200ಕ್ಕೂ ಹೆಚ್ಚು ಜನ ನೋಂದಣಿ ಮಾಡಿಕೊಂಡಿದ್ದಾರೆ. ಆ ಪೈಕಿ ಮೊದಲ ಬಾರಿ 50 ಜನರಿಗೆ ಅವಕಾಶ ಮಾಡಿಕೊಡಲಾಗುತ್ತಿದ್ದು, ಬೆಳಗ್ಗೆ 9.30 ಹಾಗೂ 10.30ಕ್ಕೆ ಎರಡು ತಂಡಗಳಲ್ಲಿ ಆಸ್ಪತ್ರೆ ತೋರಿಸಲಾಗುತ್ತದೆ. ಮುಂದುವರಿದಂತೆ ವಾರಕ್ಕೆ ಒಮ್ಮೆ ಅಥವಾ ತಿಂಗಳಿಗೆ ಎರಡು ಬಾರಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರಿಗೆ ಆಸ್ಪತ್ರೆ ತೋರಿಸಲಾಗುವುದು ಎಂದು ನಿಮ್ಹಾನ್ಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಹೆಸರು ನೋಂದಾಯಿಸಲು…: [email protected]ಗೆ ಇ-ಮೇಲ್‌ ಮಾಡುವ ಮೂಲಕ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ 080 -26995157 ಸಂಪರ್ಕಿಸಬಹುದು.

ಬುದ್ಧಿಮಾಂದ್ಯ ಮಕ್ಕಳ ಕೆಫೆಯಲ್ಲಿ ಆತಿಥ್ಯ: ಅಭಿಯಾನದಡಿ ಸುತ್ತಾಟಕ್ಕೆ ಆಗಮಿಸುವ ಸಾರ್ವಜನಿಕರಿಗೆ ನಿಮ್ಹಾನ್ಸ್‌ನಲ್ಲಿರುವ ಬುದ್ಧಿಮಾಂದ್ಯ ಮಕ್ಕಳೇ ಮಾರ್ಗದರ್ಶಕರ ಸಹಾಯದಿಂದ ನಡೆಸುವ ಕೆಫೆಯಲ್ಲಿ ಆಥಿತ್ಯ ನೀಡುವ ವ್ಯವಸ್ಥೆ ಮಾಡಲಾಗಿದೆ. ಮಕ್ಕಳು ಸಿದ್ಧಪಡಿಸುವ ವಿವಿಧ ಬಗೆಯ ಕೇಕ್‌, ಬಿಸ್ಕೇಟ್‌, ಬ್ರೆಡ್‌ಗಳು, ಜ್ಯೂಸ್‌ಗಳು ಲಭ್ಯವಿರುತ್ತವೆ. ನೋಂದಣಿ ಶುಲ್ಕ ಪಡೆದಿರುವುದರಿಂದ ಒಂದಿಷ್ಟು ತಿನಿಸು ಹಾಗೂ ಕಾಫಿಯನ್ನು ಉಚಿತವಾಗಿ ನೀಡಲಾಗುವುದು. ಜತೆಗೆ ಮಕ್ಕಳು ತಮ್ಮ ಕೈಯಾರೆ ಮಾಡಿರುವ ಮೇಣದ ಬತ್ತಿ, ಇತರೆ ಕಲಾಕೃತಿಗಳು, ತಿನಿಸುಗಳನ್ನು ಖರೀದಿಸಿ ಮನೆಗೆ ಕೊಂಡೋಯ್ಯಬಹುದು ಎಂದು ನಿಮ್ಹಾನ್ಸ್‌ ವೈದ್ಯರು ತಿಳಿಸಿದ್ದಾರೆ.

ಮಾನಸಿಕ ರೋಗ ಒಂದು ವಿಸ್ಮಯಕಾರಿ ಸಂಗತಿಯಲ್ಲ. ಸಮಾಜ ಬಹಿಷ್ಕರಿಸುತ್ತೆ ಎಂಬ ಭಯವೂ ಬೇಡ. ಎಲ್ಲ ರೋಗಿಗಳಂತೆಯೇ ಇಲ್ಲಿನ ಮಾನಸಿಕ ರೋಗಿಗಳು ಚಿಕಿತ್ಸೆ ಪಡೆದು ಗುಣವಾಗುತ್ತಾರೆ ಎಂಬ ಕಲ್ಪನೆಯನ್ನು ಜನರಲ್ಲಿ ಮೂಡಿಸಲು ಈ ಅಭಿಮಾನ ಹಮ್ಮಿಕೊಂಡಿದ್ದೇವೆ. ಮೊದಲ ಸುತ್ತಾಟ ಯಶಸ್ವಿಯಾದ ಕೂಡಲೇ ಸಾಲು ಸಾಲು ಪ್ರವಾಸಗಳನ್ನು ಆಯೋಜಿಸಲಾಗುವುದು.
-ಡಾ.ಗಂಗಾಧರ್‌, ನಿಮ್ಹಾನ್ಸ್‌ ನಿರ್ದೇಶಕರು

* ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.