ಹಾಸ್ಯ ಸಾಹಿತ್ಯ ಲಘುವಲ್ಲ, ಗಂಭೀರ


Team Udayavani, Nov 5, 2018, 12:20 PM IST

hasya.jpg

ಬೆಂಗಳೂರು: ಲಘುವಾದ ಹಾಸ್ಯ ಸಾಹಿತ್ಯ ಗಂಭೀರವಾಗಿ ವಿಮರ್ಶೆಗೆ ಒಳಪಡಬೇಕಿದೆ ಎಂದು ಹಾಸ್ಯ ಲೇಖಕಿ ಭುವನೇಶ್ವರಿ ಹೆಗಡೆ ಅಭಿಪ್ರಾಯಪಟ್ಟಿದ್ದಾರೆ. ಹಿತೈಷಿಣಿ ಮಹಿಳಾ ಅಧ್ಯಯನ ಕೇಂದ್ರ ಹಾಗೂ ಶ್ರೀ ಗಣೇಶ ಚಾರಿಟಬಲ್‌ ಟ್ರಸ್ಟ್‌ ವತಿಯಿಂದ ಲೇಖಕಿ ಟಿ.ಸುನಂದಮ್ಮ ಸ್ಮರಣೆ ಮತ್ತು ಟಿ.ಸುನಂದಮ್ಮ ಸಾಹಿತ್ಯ ಸಂಪುಟ -1 ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದರು.

ಟಿ.ಸುನಂದಮ್ಮ ಅವರು ಲಘು ಸಂಗತಿಗಳಿಂದ ಹಾಸ್ಯವನ್ನು ಹುಡುಕಿ ಬಹಳ ಗಂಭೀರವಾದ ಸಾಹಿತ್ಯ ಕೃಷಿ ಮಾಡುತ್ತಿದ್ದರು. ಹೀಗಾಗಿಯೇ ಅವರ ಹಾಸ್ಯ ಸಾಹಿತ್ಯ ಆರೋಗ್ಯಕರ ರೀತಿಯಲ್ಲಿದೆ. ಅದರಿಂದ ಅನ್ಯರ ಮನಸ್ಸಿಗೆ ನೋವಾಗುವುದಿಲ್ಲ. ಹಾಸ್ಯ ಸಾಹಿತ್ಯವನ್ನು ಗಂಭೀರವಾಗಿ ವಿಮರ್ಶೆ ಮಾಡುವುದನ್ನೇ ಸಾಹಿತ್ಯ ಲೋಕ ಮರೆತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸುನಂದಮ್ಮ ಅವರ ಬದುಕು ಧೀಮಂತವಾದುದು. ಹೀಗಾಗಿ ಅವರ ಬರವಣಿಗೆಯಲ್ಲಿ ಬಡತನ, ಕಣ್ಣೀರಿನ ವಸ್ತು ವಿಚಾರಗಳಿಲ್ಲ. ಅವರ ಸಾಹಿತ್ಯದಲ್ಲಿ ಹಾಸ್ಯದ ವಿಚಾರಗಳು ಸಮೃದ್ಧವಾಗಿವೆ. ಸುನಂದಮ್ಮ ಅವರ ಕಾಲ ಕೂಡ ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೀಮಂತವಾದುದು.

ಕಿರಿಯ ಲೇಖಕರನ್ನು ಪ್ರೋತ್ಸಾಹಿಸುವ ಹಿರಿಯ ಸಾಹಿತಿಗಳ ದೊಡ್ಡ ಬಳಗವೇ ಇತ್ತು. ರಾಶಿ, ಕೊರವಂಜಿ ಡಾ.ಶಿವರಾಮ, ಬೀಚಿ ಹೀಗೆ ಅನೇಕ ಹಿರಿಯ ಸಾಹಿತಿಗಳ ಪ್ರೋತ್ಸಾಹದಿಂದಲೇ ಟಿ.ಸುನಂದಮ್ಮ ಅವರು ಸಾಹಿತ್ಯ ಲೋಕದಲ್ಲಿ ತಮ್ಮ ಛಾಪು ಮೂಡಿಸಲು ಸಾಧ್ಯವಾಯಿತು ಎಂದು ಹೇಳಿದರು.

ಸಾಹಿತಿ ಪ್ರೊ.ಅ.ರಾ.ಮಿತ್ರ ಮಾತನಾಡಿ, ಹಾಸ್ಯಗಾರ ವಿಷಯದ ಒಳಗಿಳಿದು ಹೊರಬರುತ್ತಾನೆ. ಹೀಗಾಗಿ ಹಾಸ್ಯಗಾರರಿಗೆ ಬದುಕಿನ ಪ್ರತಿಘಟನೆಗಳಲ್ಲೂ ಹಾಸ್ಯ ಕಾಣುವುದು. ಅಂದಿನ ಕಾಲದ ಹೆಣ್ಣು ಮಕ್ಕಳ ಮನೋಧರ್ಮ ಚೆನ್ನಾಗಿ ಅರಿತ ಟಿ.ಸುನಂದಮ್ಮ ಅವರ ಬರವಣಿಗೆಯಲ್ಲಿ ಸ್ತ್ರೀವಾದವೇ ನಗೆ ಬರಹಗಳಾಗಿ ಮೂಡಿ ಬಂದಿವೆ. ಅಂದರೆ ಅವರು ಸ್ತ್ರೀವಾದದ ವಿರೋಧಿ ಎಂದು ಅರ್ಥವಲ್ಲ.

ಅಂದಿನ ಕಾಲದ ಹೆಣ್ಣಿನ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಅರಿತ ಅವರು ಅವಳ ಭಾವಲೋಕವನ್ನೇ ತಮ್ಮ ಹಾಸ್ಯ ಬರವಣಿಗೆಯಲ್ಲಿ ತೆರೆದಿಟ್ಟಿದ್ದಾರೆ. ಟಿ.ಸುನಂದಮ್ಮ ಅವರು ಈ ಶತಮಾನದ ಅಪೂರ್ವ ಮಹಿಳೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ, ಆಪ್ತ ಸಲಹೆಗಾರ್ತಿ ಶಾಂತಾ ನಾಗರಾಜ್‌, ಪತ್ರಕರ್ತೆ ಡಾ.ಆರ್‌.ಪೂರ್ಣಿಮಾ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.