ಜಾಗೃತಿ ನಡುವೆಯೂ ಹೆಚ್ಚಾಗಿತ್ತು ವಾಯು ಮಾಲಿನ್ಯ


Team Udayavani, Nov 5, 2018, 12:20 PM IST

jagruti.jpg

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ವರ್ಷ ಜಾಗೃತಿ ನಡುವೆಯೂ ದೀಪಾವಳಿಯಲ್ಲಿ ಸಾಮಾನ್ಯಕ್ಕಿಂತ ಶೇ.52ರಷ್ಟು ವಾಯು ಮಾಲಿನ್ಯ ಉಂಟಾಗಿತ್ತು. ಆ ಹಿನ್ನೆಲೆಯಲ್ಲಿ ಈ ಬಾರಿಯೂ ಮಾಲಿನ್ಯ ನಿಯಂತ್ರಣ ಮಂಡಳಿ ಜಾಗೃತಿ ಕ್ರಮಗಳನ್ನು ಕೈಗೊಂಡಿದ್ದು, ನಗರದ 21 ಕಡೆ ವಾಯು ಗುಣಮಟ್ಟ ತಪಾಸಣೆ ನಡೆಸಲಿದೆ. 

ಕಳೆದ ವರ್ಷ ಮಾಲಿನ್ಯ ನಿಯಂತ್ರಣ ಮಂಡಳಿಯ 13 ವಾಯು ಗುಣಮಟ್ಟ ಪರಿವೇಷ್ಟಕ ತಪಾಸಣೆ ನಡೆಸಿದಾಗ, 8 ಕೇಂದ್ರಗಳಲ್ಲಿ ನ್ಯಾಷನಲ್‌ ಆಂಬಿಯೆಂಟ್‌ ಏರ್‌ ಕ್ವಾಲಿಟಿ ಸ್ಟಾಂಡರ್ಡ್ಸ್‌ (ಎನ್‌ಎಎಕ್ಯೂಎಸ್‌) ನಿಗದಿಪಡಿಸಿರುವ ಮಿತಿಗಿಂತಲೂ ಹೆಚ್ಚಿನ ಮಾಲಿನ್ಯ ದಾಖಲಾಗಿತ್ತು.

ಈ ಬಾರಿ ನಗರದ 21 ವಾಯು ಮಾಲಿನ್ಯ ಮಾಪನ ಕೇಂದ್ರಗಳಲ್ಲಿ ಹಾಗೂ ಮಂಡಳಿಯ ಎರಡು ಮೊಬೈಲ್‌ ಕೇಂದ್ರಗಳ ಮೂಲಕ, ಹಬ್ಬಕ್ಕೆ ಮುನ್ನ ಮೂರು ದಿನ ಹಾಗೂ ಹಬ್ಬದ ದಿನಗಳಲ್ಲಿ ಮಾಲಿನ್ಯ ತಪಾಸಣೆ ನಡೆಸಿ ವರದಿ ಸಿದ್ಧಪಡಿಸಲಾಗುತ್ತದೆ. ಈ ವೇಳೆ ವಾಯು ಹಾಗೂ ಶಬ್ದ ಮಾಲಿನ್ಯದೊಂದಿಗೆ, ಮಾಲಿನ್ಯಕಾರಕ ಅಂಶಗಳ ಕುರಿತು ಅಧ್ಯಯನ ನಡೆಸಲಾಗುತ್ತದೆ.

ಎನ್‌ಎಎಕ್ಯೂಎಸ್‌ ಪ್ರಕಾರ ಗಂಧಕದ ಡೈಆಕ್ಸೆ„ಡ್‌(ಎಸ್‌ಒ2) ಹಾಗೂ ಸಾರಜನಕ ಡೈ ಆಕ್ಸೆ„ಡ್‌(ಎನ್‌ಒ2) ಪ್ರಮಾಣ ಪ್ರತಿ ಸಾವಿರ ಲೀಟರ್‌ ಗಾಳಿಯಲ್ಲಿ 80 ಮೈಕ್ರೋ ಗ್ರಾಂ ಇರಬೇಕು. ಅದೇ ರೀತಿ ಪರ್ಟಿಕ್ಯೂಲೇಟ್‌ ಮ್ಯಾಟರ್‌ (ಪಿಎಂ10) ಹಾಗೂ ಶ್ವಾಸಕೋಶಕ್ಕೆ ಭಾರಿ ಹಾನಿಯುಂಟು ಮಾಡುವ ಪಿಎಂ2.5 ಪ್ರಮಾಣವನ್ನು 60 ಮೈಕ್ರೋ ಗ್ರಾಂಗಳಿಗಿಂತ ಹೆಚ್ಚಿರುವುದು ಆತಂಕ ಮೂಡಿಸಿತ್ತು. 

ಮಾಲಿನ್ಯ ನಿಯಂತ್ರಣ ಮಂಡಳಿಯ ನಗರ ರೈಲು ನಿಲ್ದಾಣ, ಸಾಣೆ ಗುರುವನಹಳ್ಳಿ, ಕಾಡಬೀಸನಹಳ್ಳಿಯ ಜಲಮಂಡಳಿ ಕಚೇರಿ ಹಾಗೂ ಬಿಟಿಎಂ ಲೇಔಟ್‌ನಲ್ಲಿ ವಾಯುಮಾಲಿನ್ಯ ಮಿತಿ ಮೀರಿರುವುದು ದಾಖಲಾಗಿದೆ. ಅ.18 ರಿಂದ ಅ.20 ರವರೆಗಿನ ಮಾಹಿತಿಗಳನ್ನು ನೋಡಿದರೆ ಬಹುತೇಕ ಕೇಂದ್ರಗಳಲ್ಲಿ ಮಾಲಿನ್ಯ ಪ್ರಮಾಣ ಏರಿರುವುದು ಕಂಡುಬಂದಿದೆ.

ಆದರೆ, ನಗರ ರೈಲು ನಿಲ್ದಾಣದ ಮಾಪನದಲ್ಲಿ ಅ.18ರಂದು ಪಿಎಂ-10 ಪ್ರಮಾಣ ಸರಾಸರಿ 193.60 ಮೈ.ಗ್ರಾಂ ದಾಖಲಾಗಿದ್ದು, ಉಳಿದಂತೆ ಅ.19ರಂದು 200.58 ಮೈ.ಗ್ರಾಂ ಹಾಗೂ ಅ.20 ರಂದು ರಾತ್ರಿ 8 ಗಂಟೆ ವೇಳೆಗೆ ದಾಖಲಾದ ಮಾಹಿತಿಯಂತೆ 198 ಮೈ.ಗ್ರಾಂ ದಾಖಲಾಗುವ ಮೂಲಕ ನಿಗದಿತ ಮಿತಿಗಿಂತ ದುಪ್ಪಟ್ಟು ದಾಖಲಾಗಿರುವುದು ಆತಂಕ ಮೂಡಿಸಿತ್ತು. 

ಪಿಎಂ-2.5 ಹೆಚ್ಚು ಅಪಾಯಕಾರಿ: ಪರ್ಟಿಕ್ಯೂಲೇಟ್‌ ಮ್ಯಾಟರ್‌ 2.5 ಅತ್ಯಂತ ಅಪಾಯಕಾರಿ ಕಣಗಳಾಗಿದ್ದು, ಅವು ನೇರವಾಗಿ ಶ್ವಾಸಕೋಶ ಸೇರಿ ಹಾನಿಯುಂಟು ಮಾಡುತ್ತವೆ. ಆದರೆ, ಇತ್ತೀಚಿನ ದಿನಗಳಲ್ಲಿ ಪಿಎಂ 2.5 ಗಿಂತಲೂ ಅತ್ಯಂತ ಸೂಕ್ಷ್ಮವಾದ ಕಣಗಳು ವಾತಾವರಣದಲ್ಲಿ ಹೆಚ್ಚಾಗಿದ್ದು, ಅವು ನೇರವಾಗಿ ಮೆದುಳಿಗೆ ಸೇರಿ ದೇಶಕ್ಕೆ ಹೆಚ್ಚಿನ ಅಪಾಯ ತರಲಿವೆ ಎಂದು ಹೇಳಲಾಗಿದೆ. ಆ ಹಿನ್ನೆಲೆಯಲ್ಲಿ ಈ ಬಾರಿ ಹೆಚ್ಚಿನ ಕೇಂದ್ರಗಳಲ್ಲಿ ವರದಿ ಪಡೆಯಲು ಮಂಡಳಿ ನಿರ್ಧರಿಸಿದೆ. 

-ಅಸ್ತಮ, ಹೃದ್ರೋಗಿಗಳು ಅನುಸರಿಸಬೇಕಾದ ಕ್ರಮಗಳು
-ಪಟಾಕಿ ಹೊಗೆಯಿಂದ ಸಂಪೂರ್ಣವಾಗಿ ದೂರವಿರಬೇಕು
-ಪಟಾಕಿ ಸಿಡಿತದ ಸಮಯದಲ್ಲಿ ಕಿವಿಗೆ ಹತ್ತಿ ಅಥವಾ ಇಯರ್‌ ಪ್ಲೆಗ್‌ ಇಟ್ಟುಕೊಳ್ಳುವುದು
-ಹಬ್ಬದ ಮೂರು ದಿನಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು
-ಪಟಾಕಿ ಸಿಡಿಸುವ ವೇಳೆ ಅಂತರ ಕಾಯ್ದುಕೊಳ್ಳುವುದು
-ರೋಗಿಗಳಿರುವ ಕೊಠಡಿಗಳ ಬಾಗಿಲು ಹಾಕಿಕೊಳ್ಳುವುದು

ಅಸ್ತಮ, ಹೃದ್ರೋಗ, ಶ್ವಾಸಕೋಶ ಸಮಸ್ಯೆ ಇರುವವರು ಮುಂಜಾಗ್ರತೆ ವಹಿಸುವುದು ಸೂಕ್ತ. ಒಂದೊಮ್ಮೆ ಕಲುಷಿತ ಪಟಾಕಿ ಹೊಗೆ ಸೇವಿಸಿ ಉಸಿರಾಟ ಸಮಸ್ಯೆ ಎದುರಾದರೆ, ಅಂಥವರಿಗೆ ಹೆಚ್ಚಿನ ಆಮ್ಲಜನಕ ಅಗತ್ಯವಿರುತ್ತದೆ. ಜತೆಗೆ ವೈದ್ಯರು ಸೂಚಿಸಿದ ಔಷಧ ತಕ್ಷಣ ನೀಡಬೇಕು.
-ಡಾ.ಮೋಹನ್‌, ಕೆ.ಸಿ.ಜನರಲ್‌ ಆಸ್ಪತ್ರೆ ನಿವಾಸಿ ವೈದ್ಯಾಧಿಕಾರಿ

ಮಂಡಳಿಯ 21 ಕೇಂದ್ರಗಳು ಹಾಗೂ ಎರಡು ಮೊಬೈಲ್‌ ಕೇಂದ್ರಗಳಲ್ಲಿ ದಾಖಲಾದ ಮಾಲಿನ್ಯ ಪ್ರಮಾಣವನ್ನು ಅಧಿಕಾರಿಗಳು ವರದಿ ಮಾಡಲಿದ್ದಾರೆ. ಅದರಂತೆ ಹಬ್ಬಕ್ಕೆ ಮೊದಲ ಮೂರು ದಿನ ಹಾಗೂ ಹಬ್ಬದ ಮೂರು ದಿನಗಳ ನಡುವಿನ ವ್ಯತ್ಯಾಸದ ಕುರಿತು ವರದಿ ಸಿದ್ಧಪಡಿಸಲಾಗುವುದು. 
-ಲಕ್ಷ್ಮಣ್‌, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ

ಕಳೆದ ಬಾರಿ ಹೆಚ್ಚು ಮಾಲಿನ್ಯ ದಾಖಲಾದ ಕೇಂದ್ರಗಳು
ಕೇಂದ್ರ    ಮಾಲಿನ್ಯ ಪ್ರಮಾಣ ಹೆಚ್ಚಳ (ಶೇಕಡವಾರು)

-ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ    168
-ದೊಮ್ಮಲೂರು    103
-ಕೆ.ಆರ್‌.ವೃತ್ತ    86
-ಮೈಸೂರು ರಸ್ತೆ    69.4
-ಖಾಜಿಸೊಣ್ಣೆನಹಳ್ಳಿ ಐಟಿಪಿಎಲ್‌    86
-ಯಶವಂತಪುರ    57
-ಪೀಣ್ಯ    44.2
-ಐಟಿಪಿಎಲ್‌ ಕೈಗಾರಿಕಾ ಪ್ರದೇಶ    51

ರಾಷ್ಟ್ರೀಯ ಮಿತಿ (ಸಾವಿರ ಲೀಟರ್‌ ಗಾಳಿಯಲ್ಲಿ)
-ಪಿಎಂ-10ಗೆ 100 ಮೈಕ್ರೋ ಗ್ರಾಂ
-ಪಿಎಂ-2.5ಗೆ 60 ಮೈಕ್ರೋ ಗ್ರಾಂ

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.