ಪಟಾಕಿ ತ್ಯಾಜ್ಯಕ್ಕೆ ನಾಗರಿಕರಿಂದ ಬೆಂಕಿ


Team Udayavani, Nov 9, 2018, 11:47 AM IST

pataki.jpg

ಬೆಂಗಳೂರು: ಮೂರು ದಿನಗಳ ದೀಪಾವಳಿ ಆಚರಣೆಯಿಂದಾಗಿ ನಗರದಲ್ಲಿ ಭಾರೀ ಪ್ರಮಾಣದ ಪಟಾಕಿ ತ್ಯಾಜ್ಯ ಸೃಷ್ಟಿಯಾಗಿದ್ದು, ಸಾರ್ವಜನಿಕರು ಎಲ್ಲೆಂದರಲ್ಲಿ ಅದಕ್ಕೆ ಬೆಂಕಿ ಹಚ್ಚುತ್ತಿರುವುದು ಆತಂಕ ಮೂಡಿಸಿದೆ.

ನಗರದ ವಿವಿಧ ಬಡಾವಣೆಗಳಲ್ಲಿ ಮೂರು ದಿನಗಳಿಂದ ದೀಪಾವಳಿ ಹಬ್ಬದ ಪ್ರಯುಕ್ತ ಪಟಾಕಿ ಸಿಡಿಸಿದ್ದು ಇದರಿಂದಾಗಿ ಭಾರಿ ಪ್ರಮಾಣದ ಒಣ ತ್ಯಾಜ್ಯ ಸೃಷ್ಟಿಯಾಗಿದೆ, ಪಾಲಿಕೆಯಿಂದ ರಸ್ತೆಗಳ ಸ್ವತ್ಛತಾ ಕಾರ್ಯ ಆರಂಭವಾಗದ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳೇ ಪಟಾಕಿ ತ್ಯಾಜ್ಯ ಗುಡ್ಡೆ ಹಾಕಿ ಬೆಂಕಿ ಹಾಕುತ್ತಿರುವುದು ಕಂಡುಬಂದಿದೆ. ಪಟಾಕಿ ತ್ಯಾಜ್ಯಕ್ಕೆ ಬೆಂಕಿ ಹಚ್ಚುತ್ತಿರುವುದರಿಂದ ವಾಯುಮಾಲಿನ್ಯ ಉಂಟಾಗಿ ಶ್ವಾಸಕೋಶ ಸಂಬಂಧಿ ಕಾಯಿಲೆಗಳು ಬರುವ ಸಾಧ್ಯತೆಯಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸುತ್ತಾರೆ.

 ಈ ಮಧ್ಯೆ, ದಸರಾ ಹಬ್ಬದಂದು ವಾಹನಗಳಿಗೆ ಪೂಜೆ ಸಲ್ಲಿಸದವರು ದೀಪಾವಳಿ ಹಬ್ಬದ ದಿನ ಪೂಜೆ ಸಲ್ಲಿಸಿದ್ದಾರೆ. ಆ ಹಿನ್ನೆಲೆಯಲ್ಲಿ ರೈತರು ಮಾರಾಟಕ್ಕಾಗಿ ತೆಗೆದುಕೊಂಡು ಬರಲಾಗಿದ್ದ ಬಾಳೆಕಂದು, ಮಾವಿನ ಎಲೆ ಹಾಗೂ ಬೂದು ಕುಂಬಳ ಕಾಯಿಗಳನ್ನು ಎಲ್ಲೆಂದರಲ್ಲಿ ಬಿಟ್ಟು ಹೋಗಿದ್ದಾರೆ. ಪರಿಣಾಮ ನಿಗದಿಗಿಂತಲೂ ಹೆಚ್ಚಿನ ಪ್ರಮಾಣ ತ್ಯಾಜ್ಯ ಸೃಷ್ಟಿಯಾಗಿದ್ದು, ವಿಲೇವಾರಿ ಪಾಲಿಕೆಗೆ ತಲೆನೋವಾಗಿ ಪರಿಣಮಿಸಲಿದೆ.

ಸಾಮಾನ್ಯ ದಿನಗಳಲ್ಲಿ ನಗರದಲ್ಲಿ ನಾಲ್ಕೂವರೆ ಸಾವಿರ ಟನ್‌ ತ್ಯಾಜ್ಯ ಸೃಷ್ಟಿಯಾಗುತ್ತದೆ. ಆದರೆ, ನಗರದಲ್ಲಿ ಕಳೆದೆರಡು ದಿನಗಳಿಂದ ಪೂರ್ಣ ಪ್ರಮಾಣದ ತ್ಯಾಜ್ಯ ವಿಲೇವಾರಿ ಕಾರ್ಯ ನಡೆದಿಲ್ಲ. ಇದರೊಂದಿಗೆ ಪಟಾಕಿ ತ್ಯಾಜ್ಯ ಶೀಘ್ರ ವಿಲೇವಾರಿ ಮಾಡದಿದ್ದರೆ ಗಾಳಿಗೆ ಬೇರೆಡೆಗೆ ಹಾರುವ ಸಾಧ್ಯತೆಯಿದೆ. ಆದರೆ, ಪಾಲಿಕೆಯ ಅಧಿಕಾರಿಗಳು ಮಾತ್ರ ಪಟಾಕಿ ತ್ಯಾಜ್ಯ ವಿಲೇವಾರಿಗೆ ಕ್ರಮಕೈಗೊಳ್ಳಲು ಮುಂದಾಗಿಲ್ಲ. 

ನಿರ್ವಹಣೆಗೆ ಸೂಚನೆ: ಪಟಾಕಿ ತ್ಯಾಜ್ಯವನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ವಿಲೇವಾರಿ ಮಾಡುವಂತೆ ಈಗಾಗಲೇ ಸಿಬ್ಬಂದಿಗೆ ಸೂಚಿಸಲಾಗಿದೆ. ಜತೆಗೆ ಪಟಾಕಿ ತ್ಯಾಜ್ಯಕ್ಕೆ ಯಾವುದೇ ಕಾರಣಕ್ಕೂ ಬೆಂಕಿ ಹಾಕದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಘನತ್ಯಾಜ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತ ರಂದೀಪ್‌ ತಿಳಿಸಿದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.