ಕಸಾಪದಿಂದ ಆಧುನಿಕ ದಲಿತ ಸಾಹಿತ್ಯ ಸಂಪುಟ


Team Udayavani, Nov 9, 2018, 11:47 AM IST

kasapa.jpg

ಬೆಂಗಳೂರು: ಭಾರತದ ಸ್ವಾತಂತ್ರ್ಯ ನಂತರ ದಲಿತ ಸಾಹಿತ್ಯದಲ್ಲಾದ ಬದಲಾವಣೆಯನ್ನು “ಸಂಪುಟ’ರೂಪದಲ್ಲಿ ಕಟ್ಟಿಕೊಡಲು ಕನ್ನಡ ಸಾಹಿತ್ಯ ಪರಿಷತ್ತು ಮುಂದಾಗಿದೆ.

ಈಗಾಗಲೇ ಕನ್ನಡ ಸಾಹಿತ್ಯ ದಿಗ್ಗಜರ ಕವಿತೆಗಳನ್ನು ನೇಪಾಳಿ ಭಾಷೆಗೆ ಹಾಗೂ ಅಲ್ಲಿಯ ಕವಿಗಳ ಕವಿತೆಗಳನ್ನು ಕನ್ನಡಕ್ಕೆ ತರುವ ನಿಟ್ಟಿನಲ್ಲಿ ಹೆಜ್ಜೆ ಇರಿಸಿರುವ ಕನ್ನಡ ಸಾಹಿತ್ಯ ಪರಿಷತ್ತು, ಇದೀಗ ದಲಿತ ಸಾಹಿತ್ಯ ಕುರಿತಾದ ಸಮಗ್ರ ಸಂಪುಟವನ್ನು  “ಆಧುನಿಕ ದಲಿತ ಸಾಹಿತ್ಯ ಸಂಪುಟಗಳು’ ಹೆಸರಿನಲ್ಲಿ ದಾಖಲಿಸಲು ತೀರ್ಮಾನಿಸಿದೆ.

ದಲಿತ ಸಾಹಿತಿಗಳ ಬರಹಗಳ ಮೇಲೆ ಸಮಾಜವಾದಿ ಚಿಂತಕ ರಾಮ ಮನೋಹರ ಲೋಹಿಯಾ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರಭಾವ. ಕಥೆ, ಕವಿತೆ, ನಾಟಕ, ಪ್ರಬಂಧ, ಆತ್ಮಕಥೆ, ವಿಮರ್ಶೆ ಮತ್ತು ಸಂಶೋಧನೆಯ ಪ್ರಕಾರಗಳಲ್ಲಿ ದಲಿತ ಲೇಖಕರು ಹೇಗೆ ತೊಡಗಿಸಿಕೊಂಡಿದ್ದಾರೆ.

ಅವರ ಆಕಾಂಕ್ಷೆಗಳು ಏನಿದ್ದವು.ಅಕ್ಷರ ಕಲಿತ ಮೇಲೆ ಅವರಲ್ಲಿ ಉಂಟಾದ ಭಾವನೆ ಹೇಗಿತ್ತು. ಪ್ರಸ್ತುತ ಅವರು ಯಾವ ರೀತಿಯ ಬರವಣಿಗೆಯಲ್ಲಿ ತೊಡಗಿಕೊಂಡಿದ್ದಾರೆ ಎಂಬುವುದರ ಕುರಿತ ಸಮಗ್ರ ನೋಟವನ್ನು ಸಂಪುಟ ಕಟ್ಟಿಕೊಡಲಿದೆ ಎಂದು ಹೇಳಲಾಗಿದೆ.

ಸಮಗ್ರ ಸಂಪುಟ ಪ್ರಕಟ: ಸಂಸ್ಕೃತ ಚಿಂತಕ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್‌ ಅವರ ಮಾರ್ಗ ದರ್ಶನದಲ್ಲಿ ಸಮಗ್ರ ಸಂಪುಟ ಪ್ರಕಟವಾಗಲಿದ್ದು “ಕಾವ್ಯ ಸಂಪಾದನೆ’ ಜವಾಬ್ದಾರಿ ಮೂಡ್ನಾಕೂಡು ಚಿನ್ನಸ್ವಾಮಿ,  “ಜಾನಪದ’ಕ್ಕೆ ಸಂಬಂಧಿಸಿದ ವಿಷಯ ಸಂಗ್ರಹಣೆ ಹೊಣೆ ಕಲಬುರ್ಗಿ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಮುಖ್ಯಸ್ಥ ಡಾ.ಎಚ್‌.ಟಿ.ಕೋಟೆ,

“ವೈಚಾರಿಕೆ ಬರಹ’ಕ್ಕೆ ಸಂಬಂಧಿಸಿದ ವಿಷಯ ಸಂಗ್ರಹಣೆ ಜವಾಬ್ದಾರಿ ಡಾ.ಬಿ.ಎಂ.ಪುಟ್ಟಯ್ಯಗೆ ವಹಿಸಲಾಗಿದೆ. “ಆತ್ಮಕತನಗಳ’ ಕುರಿತು ಅರ್ಜುನ್‌ ಗೊಳಸಂಗಿ ಹಾಗೂ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್‌ “ದಲಿತ ಕನ್ನಡ ಸಂಶೋಧನೆ’ಕುರಿತು ಸಂಪುಟದಲ್ಲಿ ದಾಖಲಿಸಲಿದ್ದು ಒಟ್ಟು 8 ಸಂಪುಟಗಳಲ್ಲಿ ಇದು ಮೂಡಿಬರಲಿದೆ.

ದಕ್ಷಿಣ ಭಾರತದಲ್ಲಿ ಹೊಸ ಪ್ರಯತ್ನ: ಈ ಕುರಿತಂತೆ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್‌ ನೇತೃತ್ವದಲ್ಲಿ ಸದ್ಯದಲ್ಲೇ ಸಭೆ ನಡೆಯಲಿದ್ದು ಅಲ್ಲಿ ವಿಷಯ ಜೋಡಣೆ ಮತ್ತು ಸಮಗ್ರ ಸಂಪುಟದ ರೂಪರೇಷಗಳ ಕುರಿತು ಚರ್ಚೆ ನಡೆಯಲಿದೆ. ಡಿಸೆಂಬರ್‌ನಲ್ಲಿ ಮುದ್ರಣ ಕಾರ್ಯ ಆರಂಭವಾಗಲಿದೆ.

ಈ ಬಗ್ಗೆ”ಉದಯವಾಣಿ’ಯೊಂದಿಗೆ  ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್‌ ಮಾತನಾಡಿ, ದಲಿತ ಸಾಹಿತ್ಯಕ್ಕೆ ಸಂಬಂಧಿಸಿದಂತೆ ಚರಿತ್ರೆ ದಾಖಲಿಸಲು ಇದು ಮೂಲ ಆಕಾರ ಗ್ರಂಥವಾಗಲಿದೆ. ದಲಿತ ಸಾಹಿತ್ಯದ ಬದಲಾವಣೆ ಕುರಿತಂತೆ ದಕ್ಷಿಣ ಭಾರತದಲ್ಲಿ ಇಂತಹ ಯಾವುದೇ ಪ್ರಯತ್ನ ನಡೆದಿಲ್ಲ.ಆ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಸಂಪುಟ ಹೊರತರುವ ಕುರಿತು ಸಲಹೆ ನೀಡಿದೆ.  

ದಲಿತ ಸಾಹಿತ್ಯದ ಮೇಲೆ ಬಂಡಾಯ ಮತ್ತು ನವ್ಯ ಸಾಹಿತ್ಯದ ಪ್ರಭಾವವೂ ಇರುವುದರಿಂದ ಅನೇಕ ರೀತಿಯ ಬದಲಾವಣೆಗಳಿಗೂ ಸಾಕ್ಷಿಯಾಗಿದೆ. ಹೀಗಾಗಿ, ಸಾಹಿತ್ಯ ಸಂಪುಟ ತರುತ್ತಿರುವುದು ಸೂಕ್ತವಾಗಿದೆ  ಎಂದು ಹೇಳಿದರು.

25ಲಕ್ಷ ರೂ. ಯೋಜನೆ: ಸಂಶೋಧನಾ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಕಾರಣಕ್ಕಾಗಿ ಕನ್ನಡ ಸಾಹಿತ್ಯ ಪರಿಷತ್ತು ಈ ಸಮಗ್ರ ಸಂಪುಟ ಹೊರತರಲು ಮುಂದಾಗಿದೆ.ದಲಿತ ಸಾಹಿತ್ಯಕ್ಕೆ ಸಂಬಂಧಿಸಿದ ಲೇಖನಗಳು, ಕೃತಿಗಳು ಒಂದು ಕಡೆ ಸಿಗಲಿ ಎಂಬ ಆಶಯ ಕೂಡ ಇದರಲ್ಲಿದೆ.ಈ ಯೋಜನೆಗಾಗಿ ಕನ್ನಡ ಸಾಹಿತ್ಯ ಪರಿಷತ್ತು ಸುಮಾರು 25 ಲಕ್ಷ ರೂ.ಗಳನ್ನ ಮೂಡುಪಾಗಿಟ್ಟಿದೆ ಎಂದು ಕಸಾಪದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದೇ ಮೊದಲ ಬಾರಿಗೆ ಕಸಾಪ ವಿಭಿನ್ನ ಪ್ರಯತ್ನಕ್ಕೆ ಕೈಹಾಕಿದೆ. ದಲಿತ ಸಾಹಿತ್ಯಕ್ಕೆ ಸಂಬಂಧಿಸಿದ ಸಮಗ್ರ ಸಂಪುಟ ಹೊರತರಲಾಗುತ್ತಿದ್ದು,ಮಾರ್ಚ್‌ನಲ್ಲಿ ಬಿಡುಗಡೆಗೊಳ್ಳಲಿದೆ.
-ಡಾ.ಮನುಬಳಿಗಾರ್‌, ಕಸಾಪ ಅಧ್ಯಕ್ಷ

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.